ಸಿದ್ದು ಸರಕಾರದ ಕ್ಯಾಬಿನೆಟ್ ಸಚಿವರೊಬ್ಬರ ರಾಸಲೀಲೆ ಬಯಲು?
ವರ್ಗಾವಣೆಗಾಗಿ ಶಕ್ತಿಸೌಧಕ್ಕೆ ಆಗಮಿಸಿದ ಮಹಿಳೆಯೊಬ್ಬರ ಜೊತೆ ಸಚಿವ ಮೇಟಿ ಮತ್ತು ಅವರ ಪುತ್ರ 'ರಂಗೀನಾಟ'ದಲ್ಲಿ ತೊಡಗಿದ್ದ ವಿಡಿಯೋ ಬಳ್ಳಾರಿಯ ಆರ್ಟಿಐ ಕಾರ್ಯಕರ್ತ ರಾಜಶೇಖರ್ ಎನ್ನುವವರ ಬಳಿ ಇದೆ ಎಂದು ಕನ್ನಡ ವಾಹಿನಿಗಳು ವರದಿ ಮಾಡುತ್ತಿವೆ.
ಬೆಂಗಳೂರು, ಡಿ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಕ್ಯಾಬಿನೆಟ್ ಸಚಿವರೊಬ್ಬರು ನಡೆಸಿದ್ದಾರೆ ಎನ್ನಲಾಗುತ್ತಿರುವ ರಾಸಲೀಲೆಯ ವಿಡಿಯೋ ತನ್ನ ಬಳಿಯಿದೆ ಎಂದು ಆರ್ಟಿಐ ಕಾರ್ಯಕರ್ತರೊಬ್ಬರು ಹೇಳಿರುವುದು ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ವರ್ಗಾವಣೆಗಾಗಿ ಶಕ್ತಿಸೌಧಕ್ಕೆ ಆಗಮಿಸಿದ ಮಹಿಳೆಯೊಬ್ಬರ ಜೊತೆ ಅಬಕಾರಿ ಸಚಿವ ಎಚ್ ವೈ ಮೇಟಿ ಮತ್ತು ಅವರ ಪುತ್ರ 'ರಂಗೀನಾಟ'ದಲ್ಲಿ ತೊಡಗಿದ್ದ ವಿಡಿಯೋ ಬಳ್ಳಾರಿಯ ಆರ್ಟಿಐ ಕಾರ್ಯಕರ್ತ ರಾಜಶೇಖರ್ ಎನ್ನುವವರ ಬಳಿ ಇದೆ ಎಂದು ಕನ್ನಡ ಸುದ್ದಿವಾಹಿನಿಗಳು ವರದಿ ಮಾಡುತ್ತಿವೆ. (ಟಿಪ್ಪು ವೇದಿಕೆಯಲ್ಲೇ ಅರೆ ನಗ್ನ ಚಿತ್ರ ವೀಕ್ಷಿಸಿದ ತನ್ವೀರ್)
ರಾಸಲೀಲೆಯ ಸಿಡಿ ಬಿಡುಗಡೆ ಮಾಡದಂತೆ ಸಚಿವರು ಮತ್ತು ಅವರ ಬೆಂಬಲಿಗರು ಆರ್ಟಿಐ ಕಾರ್ಯಕರ್ತನಿಗೆ ಧಮ್ಕಿ ಹಾಕಿದ್ದಾರೆ ಎಂದು ವಾಹಿನಿಗಳು ಪ್ರಸಾರ ಮಾಡುತ್ತಿವೆ.

ಸಿಡಿ ಬಿಡುಗಡೆ ಮಾಡಿದ್ದೇ ಆದಲ್ಲಿ ನಿನಗೆ ಹಾಗೂ ನಿನ್ನ ಕುಟುಂಬಕ್ಕೆ ತೊಂದರೆ ತಪ್ಪಿದ್ದಲ್ಲ ಎಂದು ಆರ್ಟಿಐ ಕಾರ್ಯಕರ್ತನಿಗೆ ಜೀವ ಬೆದರಿಕೆಯೊಡ್ಡಿರುವ ಆಡಿಯೋ ವಾಹಿನಿಗಳಲ್ಲಿ ಪ್ರಸಾರವಾಗುತ್ತಿವೆ.
ಸಚಿವರ ಆಪ್ತ ಸಹಾಯಕರಿಂದ ಮಹಿಳೆಯ ಪರಿಚಯ ಸಚಿವರಿಗಾಗಿದ್ದು, ಘಟನೆಯ ನಂತರ ವಿಷಯವನ್ನು ಮಾಧ್ಯಮಗಳಿಗೆ ತಿಳಿಸುವುದಾಗಿ ಮಹಿಳೆ ಬೆದರಿಕೆಯೊಡ್ಡಿದ್ದರು.
ಇದು ಬಹಿರಂಗವಾಗಬಾರದು ಎಂದಿದ್ದರೆ 15 ಕೋಟಿ ನೀಡಬೇಕೆಂದು ಮಹಿಳೆ ಬ್ಲ್ಯಾಕ್ ಮೇಲ್ ಗೆ ಇಳಿದಿದ್ದರು. ನಂತರ ಚೌಕಾಸಿಗೆ ಇಳಿದಿದ್ದ ಸಚಿವರು 10-25 ಲಕ್ಷ ಕೊಡುವ ಆಫರ್ ನೀಡಿದ್ದರು ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಇದಕ್ಕೆ ಒಪ್ಪದ ಮಹಿಳೆಗೆ ಐದು ಪೈಸೆ ಕೊಡೋಲ್ಲಾ ಏನು ಬೇಕಾದರೂ ಮಾಡಿಕೋ ಎಂದು ಸಚಿವರು ಆವಾಜ್ ಹಾಕಿದ್ದರು.
ರಾಸಲೀಲೆಯ ವಿಡಿಯೋ ನನ್ನ ಬಳಿ ಇರುವ ಹಿನ್ನೆಲೆಯಲ್ಲಿ ಸಚಿವರ ಬೆಂಬಲಿಗರು ನನಗೆ ಬೆದರಿಕೆ ಹಾಕುತ್ತಿದ್ದಾರೆಂದು ಆರ್ಟಿಐ ಕಾರ್ಯಕರ್ತ ರಾಜಶೇಖರ್ ಮಾಧ್ಯಮಗಳಲ್ಲಿ ಅವಲತ್ತು ತೋಡಿಕೊಂಡಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications