Republic Double Exit Poll Karnataka: ಎರಡಂಕಿ ತಲುಪದ ಕಾಂಗ್ರೆಸ್, ಬಿಜೆಪಿಯತ್ತ ಜನರ ಒಲವು
ಬೆಂಗಳೂರು, ಜೂನ್ 01: ಕರ್ನಾಟಕ ರಾಜ್ಯದಲ್ಲಿ ಕಳೆದ ಏಪ್ರಿಲ್ ಅಂತ್ಯಕ್ಕೆ ಮತ್ತು ಮೇ ಮೊದಲ ವಾರ ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆಗೆ 2024 ಮತದಾನ ನಡೆಯಿತು. ಜೂನ್ 01ರಂದು ಸಾರ್ವತ್ರಿಕ ಚುನಾವಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶನಿವಾರ ಚುನಾವಣೋತ್ತರ ಫಲಿತಾಂಶ ಪ್ರಕಟವಾಗಿದೆ. ಎಲ್ಲ ರಾಜ್ಯಗಳಂತೆ ಕರ್ನಾಟಕದಲ್ಲಿ ಯಾವ ಪಕ್ಷ ಗೆಲ್ಲಲಿದೆ ಎಂಬುದನ್ನು Republic TV with PMARQ Exit Poll Karnataka ಸಮೀಕ್ಷಾ ಫಲಿತಾಂಶ ತಿಳಿಸಿದೆ.
ರಿಪಬ್ಲಿಕ್ ಟಿವಿ ಕರ್ನಾಟಕ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ, ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಯು ಈ ಬಾರಿಯು ಹ್ಯಾಟ್ರಿಕ್ ಭಾರಿಸಲಿದೆ. ಸದರಿ ಚುನಾವಣೆಯಲ್ಲಿ ಬಿಜೆಪಿ 22 ಕ್ಷೇತ್ರಗಳಲ್ಲಿ ಗೆದ್ದು, ಕಾಂಗ್ರೆಸ್ 06 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆಗಳು ಇವೆ ಎಂದು ತಿಳಿಸಿದೆ.

ಗ್ಯಾರೆಂಟಿ ಯೋಜನೆಗಳ ಮೂಲಕ ಕರ್ನಾಟಕದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನ ಸಿಗದಂತೆ ನೋಡಿಕೊಳ್ಳಲು ಬಿಜೆಪಿ ಪಕ್ಷವು ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿತು. ಈ ಬಾರಿಯು ಗ್ಯಾರೆಂಟಿಗಳು ತಮ್ಮ ಕೈ ಹಿಡಿಯಲಿದೆ. ಡಬಲ್ ಡಿಜಿಟ್ (20) ಸೀಟುಗಳನ್ನು ಗೆಲ್ಲಲಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಅತೀವ ಹುಮ್ಮಸ್ಸು ಇಟ್ಟುಕೊಂಡಿದ್ದರು.
ಸದ್ಯ ಪ್ರಕಟವಾದ ಚುನಾವಣೋತ್ತರ ಸಮೀಕ್ಷೆ ಕಾಂಗ್ರೆಸ್ಗೆ ಆಘಾತ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಮೊದಲಿನಂತೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ರಿಪಬ್ಲಿಕ್ ಟಿವಿ ತಿಳಿಸಿದೆ.
#RepublicDoubleExitPoll | "On June 4, BJP might win 24-25 seats in Karnataka": MP and National President of BJP Yuva Morcha Tejasvi Surya (@Tejasvi_Surya) on Exit Poll Predictions
— Republic (@republic) June 1, 2024
India's biggest Exit Poll coverage with Arnab is now #LIVE. Tune in here to WATCH -… pic.twitter.com/u2GfaZ8p5t
ಈ ಬಾರಿ ಬಿಜೆಪಿಗೆ 03 ಸ್ಥಾನ ಕಡಿಮೆ
ವಿಶೇಷವೆಂದರೆ, ಈ ಭಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ತೀವ್ರ ಪೈಪೋಟಿ ಒಡ್ಡಿದ್ದನ್ನು ಅಲ್ಲಗಳೆಯುವಂತಿಲ್ಲ. ಬಿಜೆಪಿ ವಿರುದ್ಧ ಕಾಂಗ್ರೆಸ್ 2019ರ ಚುನಾವಣೆಗಿಂತಲೂ ಹೆಚ್ಚು ಸ್ಥಾನ (06) ಪಡೆಯುತ್ತದೆ ಎನ್ನಲಾಗಿದೆ. ಕಳೆದ ಬಾರಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಪಡೆದಿತ್ತು. ಪಕ್ಷೇತರ (ಮಂಡ್ಯ) ಒಂದು ಸೀಟು, ಜೆಡಿಎಸ್ಗೆ ಸೀಟು ಸ್ಥಾನ ಲಭಿಸಿತ್ತು. ಉಳಿದಂತೆ ಬಿಜೆಪಿ 25 ಸ್ಥಾನಗಳಲ್ಲಿ ಗೆದ್ದು ಬೀಗಿತ್ತು. ಈ ಬಾರಿ (2024) ಬಿಜೆಪಿಗೆ ಮೂರು ಸ್ಥಾನಗಳು (22) ಕಡಿಮೆ ಬರುವ ನಿರೀಕ್ಷೆ ಇದೆ.
ಕರ್ನಾಟಕ ಕುರಿತು ವಿವಿಧ ಸುದ್ದಿ ಮಾಧ್ಯಮ ಸಂಸ್ಥೆಗಳು, ಏಜೆನ್ಸಿಗಳು ಚುನಾವಣೋತ್ತರವಾಗಿ ಸಮೀಕ್ಷೆ ನಡೆಸಿ ಮಾಹಿತಿ ನೀಡಿವೆ. ಕೇಂದ್ರ ಚುನಾವಣೆ ಆಯೋಗದಿಂತೆ ಇದೇ ಜೂನ್ 04ರಂದು ಅಧಿಕೃತ ಫಲಿತಾಂಶ ಪ್ರಕಟಗೊಳ್ಳಲಿದೆ. ಅಧಿಕೃತ ಮಾಹಿತಿಗೆ ಇನ್ನೂ ಮೂರು ದಿನ ಕಾಯಬೇಕಿದೆ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ











Click it and Unblock the Notifications