ಯತ್ನಾಳ್ ಜನಪ್ರಿಯ ನಾಯಕರು, ಜನರ ಪ್ರೀತಿ ಅವರ ಮೇಲಿದೆ: ಬಿಜೆಪಿ ಶಾಸಕ
ಕರ್ನಾಟಕ ಬಿಜೆಪಿ ಒಳಗೆ ಏನಾಗುತ್ತಿದೆ ಗೊತ್ತಾಗುತ್ತಿಲ್ಲ, ಒಂದು ಕಡೆ ಕಾಂಗ್ರೆಸ್ ಒಳ ಜಗಳದ ರೀತಿಯೇ ಬಿಜೆಪಿ ಒಳಗೂ ಆಂತರಿಕ ಕಿಚ್ಚು ಧಗಧಗಿಸುತ್ತಿದೆ. ಮಾಜಿ ಸಿಎಂ ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಕೆಲವರು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಈ ಸಮಯದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪರ ಬಿಜೆಪಿಯ ಪ್ರಭಾವಿ ಶಾಸಕರೊಬ್ಬರು ಬ್ಯಾಟ್ ಬೀಸಿದ್ದಾರೆ!
ಹೌದು ಶಾಸಕ ಅರವಿಂದ್ ಬೆಲ್ಲದ್ ಮೊದಲಿನಿಂದಲು ಯಡಿಯೂರಪ್ಪ ಅವರ ವಿರುದ್ಧವೇ ಪರೋಕ್ಷವಾಗಿ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಈಗ ಅರವಿಂದ್ ಬೆಲ್ಲದ್ ಅವರಿಗೆ ದೊಡ್ಡ ಹುದ್ದೆ ನೀಡಲಾಗಿದೆ. ವಿಧಾನಸಭೆ ವಿಪಕ್ಷದ ಉಪ ನಾಯಕರಾಗಿ, ಶಾಸಕ ಅರವಿಂದ ಬೆಲ್ಲದ್ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಬಸನಗೌಡ ಪಾಟೀಲ್ ಯತ್ನಾಳ್ ಪರ ಮಾತನಾಡಿದ್ದಾರೆ. ಹಾಗಾದರೆ ಶಾಸಕ ಅರವಿಂದ ಬೆಲ್ಲದ್ ಹೇಳಿದ್ದೇನು? ಈ ಮೂಲಕ ಯಡಿಯೂರಪ್ಪ ಅವರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರಾ? ಮುಂದೆ ಓದಿ.

ಅರವಿಂದ್ ಬೆಲ್ಲದ್ ಹೇಳಿದ್ದು ಇಷ್ಟು..
ಅಂದಹಾಗೆ ಅರವಿಂದ್ ಬೆಲ್ಲದ್ ವಿಧಾನಸಭೆ ವಿಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷ ಕೊಟ್ಟ ಜವಾಬ್ದಾರಿ ಜನರ ಆಶೋತ್ತರಗಳಿಗು ಧ್ವನಿಯಾಗಿ ಜವಾಬ್ಧಾರಿ ನಿರ್ವಹಿಸುವೆ. ಉತ್ತರ ಕರ್ನಾಟಕದ ಧ್ವನಿಯಾಗಿ, ಪಕ್ಷ ಈ ಸ್ಥಾನ ನೀಡಿದೆ. ಪಕ್ಷದ ನಾಯಕರಿಗೆ ವಂದನೆ ಸಲ್ಲಿಸುವೆ. ಕಾರ್ಯಕರ್ತರ ಶ್ರಮದಿಂದ ಜವಾಬ್ದಾರಿ ಸಿಕ್ಕಿದೆ ಎಂದಿದ್ದಾರೆ ಬೆಲ್ಲದ್. ಅಲ್ಲದೆ ಅಸಮಾಧಾನ ಶಮನಕ್ಕೆ ಸ್ಥಾನ ಕೊಟ್ಟರಾ? ಎಂಬ ಪ್ರಶ್ನೆಗೆ ಉತ್ತರ ನೀಡಿದ ಅವರು, ಆ ವಿಷಯವೇ ಬೇರೆ ಈ ವಿಷಯ ಬೇರೆ. ಇವತ್ತು ವಿರೋಧ ಪಕ್ಷದಲ್ಲಿದ್ದು ಸರ್ಕಾರದ ಕೆಲಸ ಸರಿಯಾಗಿ ಮಾಡಿಸುವುದು ನಮ್ಮ ಜವಾಬ್ದಾರಿ ಎಂದಿದ್ದಾರೆ. ಇದೇ ವೇಳೆ ಯತ್ನಾಳ್ರ ಪರ ಬ್ಯಾಟ್ ಬೀಸಿದ್ದಾರೆ.
ಯತ್ನಾಳ್ ಬಗ್ಗೆ ಬೆಲ್ಲದ್ ಹೇಳಿದ್ದೇನು?
ತಮ್ಮ ಮಾತು ಮುಂದುವರಿಸಿದ ಬೆಲ್ಲದ್ ಅವರು, ಪಕ್ಷದ ಅಧ್ಯಕ್ಷರಾಗಿ ವಿಜಯೇಂದ್ರ ಅವರು ಇದ್ದಾರೆ ಎಂದಿದ್ದಾರೆ. ಹಾಗೇ ಬಸನಗೌಡ ಪಾಟೀಲ್ ಯತ್ನಾಳ್ರ ಅಸಮಾಧಾನ ವಿಚಾರವಾಗಿ ಬೆಲ್ಲದ್ ಪ್ರತಿಕ್ರಿಯೆ ನೀಡಿ ಯತ್ನಾಳ್ ಅತ್ಯಂತ ಜನಪ್ರಿಯ ನಾಯಕ. ಹಿಂದುತ್ವ ಪ್ರತಿಪಾದಕರು ಅವರು. ಅವರ ಮೇಲೆ ಜನರ ಪ್ರೀತಿ ಇದೆ, ಆದರೂ ಅವರಿಗೆ ಸ್ಥಾನ ಕೊಟ್ಟಿಲ್ಲ. ಆದ್ರೆ ಮುಂದೆ ಒಳ್ಳೆ ಸ್ಥಾನ ಅವರಿಗೆ ಸಿಗಲಿದೆ ಎನ್ನುವ ಭರವಸೆ ಇದೆ. ಅವರಿಗೆ ಪಕ್ಷ ಉತ್ತಮ ಸ್ಥಾನ ಕೊಡುತ್ತದೆ ಅವರನ್ನ ಯಾರೂ ಕಡೆಗಣನೆ ಮಾಡುತ್ತಿಲ್ಲ ಎಂದು ಇದೇ ವೇಳೆ ಸಮಜಾಯಿಷಿ ನೀಡಿದರು.

ಶಿವಾನಂದ ಪಾಟೀಲ್ ವಿರುದ್ಧ ಗರಂ!
ಇನ್ನು ಇದೇ ವೇಳೆ ಅರವಿಂದ್ ಬೆಲ್ಲದ್ ಅವರು ಶಿವಾನಂದ ಪಾಟೀಲ್ ಹೇಳಿಕೆಯ ಕುರಿತು ಪ್ರತಿಕ್ರಿಯೆ ನೀಡಿದರು, 'ಬಹಳ ದುಃಖ & ವಿಚಿತ್ರ ಅನಿಸಿತು' ಎಂದು ಬೆಲ್ಲದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಒಬ್ಬ ದೊಡ್ಡ ನಾಯಕರು ಅವರು, ವಿಜಯಪುರ ನೀರಾವರಿ ಜಿಲ್ಲೆ. ರಾಜ್ಯದಲ್ಲಿ ಅತ್ಯಂತ ಬರಗಾಲ ಪೀಡಿತ ಜಿಲ್ಲೆ ಅಂದರೂ ಅದು ವಿಜಯಪುರ ಜಿಲ್ಲೆ. ಆ ಜಿಲ್ಲೆ ನಾಯಕರಾದವರು ಇದನ್ನ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿತ್ತು ಎಂದು ಹೇಳಿಕೆ ಖಂಡಿಸಿದರು. ರೈತರ ಪರವಾಗಿ ಅರವಿಂದ್ ಬೆಲ್ಲದ್, ಶಿವಾನಂದ ಪಾಟೀಲ್ ಅವರ ಹೇಳಿಕೆಯನ್ನ ಇದೇ ವೇಳೆ ಖಂಡಿಸಿದರು.
ಒಟ್ನಲ್ಲಿ ಅರವಿಂದ್ ಬೆಲ್ಲದ್ ಅವರಿಗೆ ರಾಜ್ಯ ಮಟ್ಟದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಹೀಗಾಗಿ, ಬಿಜೆಪಿ ವರಿಷ್ಠರು ರಾಜ್ಯ ಬಿಜೆಪಿಯಲ್ಲಿ ಅಸಮಾಧಾನಕ್ಕೆ ಅಂತ್ಯ ಹಾಡುವ ಪ್ರಯತ್ನವನ್ನು ಮಾಡುತ್ತಿರುವಂತೆ ಕಾಣುತ್ತಿದೆ. ಈಗ ಸ್ವತಃ ಅರವಿಂದ್ ಬೆಲ್ಲದ್ ಅವರು ಯತ್ನಾಳ್ ಅವರ ಪರವಾಗಿ ಬ್ಯಾಟ್ ಬೀಸಿದ್ದು ಭಾರಿ ಕುತೂಹ ಕೆರಳಿಸಿದೆ.
-
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications