ಬಸನಗೌಡ ಪಾಟೀಲ್ ಯತ್ನಾಳ್ ಡಿಸಿಎಂ ಡಿ.ಕೆ.ಶಿವಕುಮಾರ್ ಬಗ್ಗೆ ಹೇಳಿದ್ದೇನು?
ಬಿಜೆಪಿ ಪಕ್ಷದ ಶಾಸಕನಾಗಿದ್ದರೂ ಬಿಜೆಪಿ ನಾಯಕರ ವಿರುದ್ಧವೇ ಹೇಳಿಕೆ ನೀಡುತ್ತಾ ಸದಾ ಸುದ್ದಿಯಲ್ಲಿ ಇರುವ ಬಸನಗೌಡ ಪಾಟೀಲ್ ಯತ್ನಾಳ್, ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಮಾತನಾಡಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಮಾಜಿ ಸಿಎಂ ಯಡಿಯೂರಪ್ಪ & ಅವರ ಪುತ್ರನ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ಯತ್ನಾಳ್ ಸದ್ದು ಮಾಡಿದ್ದು, ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹಾಗಾದರೆ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಈಗ ಯತ್ನಾಳ್ ಹೇಳಿದ್ದೇನು?
ರಾಜ್ಯದಲ್ಲಿ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷ ನಾಯಕರ ಆಯ್ಕೆಯು ನಡೆದಿದೆ. ಹೀಗೆ ಈ 2 ಬೆಳವಣಿಗೆ ಬಗ್ಗೆ ಇತ್ತೀಚೆಗೆ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಾಗ್ದಾಳಿ ನಡೆಸಿದ್ರು. ಮಾಜಿ ಸಿಎಂ ಯಡಿಯೂರಪ್ಪ & ಅವರ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಆಕ್ರೋಶ ಹೊರಹಾಕಿದ್ರು. ಅಲ್ಲದೆ ರಾಜ್ಯದಲ್ಲಿ ವಿಪಕ್ಷ ಸ್ಥಾನವನ್ನ ಉತ್ತರ ಕರ್ನಾಟಕ ಮೂಲದ ಶಾಸಕರಿಗೆ ನೀಡಬೇಕು ಎಂದಿದ್ದರು.

ಆದರೆ ಯತ್ನಾಳ್ ಬೇಡಿಕೆ ಇಟ್ಟಂತೆ ಏನೂ ನಡೆಯಲಿಲ್ಲ. ಒಂದು ಕಡೆ ಬಿಎಸ್ವೈ ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷರಾದರು, ಮತ್ತೊಂದು ಕಡೆ ಆರ್. ಅಶೋಕ್ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ವಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆಯಾದರು. ಹೀಗಿದ್ದಾಗ ಯತ್ನಾಳ್ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಹೇಳಿದ್ದೇನು ಗೊತ್ತಾ?
'ಗೂಂಡಾಗಿರಿಯ ಮನಸ್ಥಿತಿ ಯಾವ ಹುದ್ದೆ...'
ಅಷ್ಟಕ್ಕೂ ಮಾಧ್ಯಮದ ವರದಿಯೊಂದನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿ ಟ್ವೀಟ್ ಮಾಡಿರುವ ಯತ್ನಾಳ್ ಅವರು, 'ಗೂಂಡಾಗಿರಿಯ ಮನಸ್ಥಿತಿ ಯಾವ ಹುದ್ದೆ ಪದವಿ ಅಧಿಕಾರದಲ್ಲಿ ಇದ್ದರೂ ಹೋಗುವುದಿಲ್ಲ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರಿಗೆ ಸ್ವತಂತ್ರವಾಗಿ ಮತದಾನ ಮಾಡುವ ಹಕ್ಕು ಇಲ್ಲವೇ? ಅಥವಾ, ಗ್ಯಾರಂಟಿಗಳಿಂದ ತಪ್ಪಿಸಿಕೊಳ್ಳಲು ಹೊಸ ತಂತ್ರವೇ?' ಎಂದು ಆರೋಪ ಮಾಡಿದ್ದಾರೆ. ಈ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧವೂ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಗೂಂಡಾಗಿರಿಯ ಮನಸ್ಥಿತಿ ಯಾವ ಹುದ್ದೆ ಪದವಿ ಅಧಿಕಾರದಲ್ಲಿ ಇದ್ದರೂ ಹೋಗುವುದಿಲ್ಲ,
— Basanagouda R Patil (Yatnal) (@BasanagoudaBJP) November 19, 2023
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರಿಗೆ ಸ್ವತಂತ್ರವಾಗಿ ಮತದಾನ ಮಾಡುವ ಹಕ್ಕು ಇಲ್ಲವೇ?
ಅಥವಾ, ಗ್ಯಾರಂಟಿಗಳಿಂದ ತಪ್ಪಿಸಿಕೊಳ್ಳಲು ಹೊಸ ತಂತ್ರವೇ? https://t.co/kVhTo25RlC
ಬಿಎಸ್ವೈ ವಿರುದ್ಧ ಪರೋಕ್ಷ ವಾಗ್ದಾಳಿ?
ಶುಕ್ರವಾರ ವಿಪಕ್ಷ ನಾಯಕನ ಆಯ್ಕೆಗೆ ಮೊದ್ಲು ಮಾತಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಬಿಜೆಪಿ ಒಂದೇ ಕುಟುಂಬದ ಪಕ್ಷ ಆಗಬಾರದು. ಬ್ಲ್ಯಾಕ್ಮೇಲ್ ಮಾಡುವವರಿಗೆ ಕೇರ್ ಮಾಡಲ್ಲ, ಬ್ಲ್ಯಾಕ್ಮೇಲ್ ಮಾಡುವುದಕ್ಕೆ ಯತ್ನ ಮಾಡುತ್ತಾರೆ ಕೆಲ ಜನ. ಅದಕ್ಕೆಲ್ಲಾ ನಾವು ಕೇರ್ ಮಾಡಲ್ಲ ನಾವು ಸತ್ಯದ ಪರ ಇರುವ ಜನ. ನಾನು ಗಟ್ಟಿಯಾಗೇ ಮಾತನಾಡುವ ವ್ಯಕ್ತಿ. ನನ್ನ ಗಟ್ಟಿತನದಲ್ಲಿ ಯಾವುದೇ ರಾಜಿ ಇಲ್ಲ ಎಂದಿದ್ದರು. ಹೀಗೆ ಬಿಜೆಪಿ ನೂತನ ಅಧ್ಯಕ್ಷ ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಯುದ್ಧ ಸಾರಿದ್ದರು ಬಸನಗೌಡ ಪಾಟೀಲ್ ಯತ್ನಾಳ್. ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
GBA: ನಗರದಲ್ಲಿ ಮತದಾರರ ಪಟ್ಟಿ ಮ್ಯಾಪಿಂಗ್ ಕಾರ್ಯ ಇನ್ನಷ್ಟು ಚುರುಕು -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ












Click it and Unblock the Notifications