KRS ಡ್ಯಾಂನಿಂದ ಎಕ್ಸ್‌ಪ್ರೆಸ್ ಲೈನ್ ಮೂಲಕ ಬೆಂಗಳೂರು ದಕ್ಷಿಣ, ಉತ್ತರಕ್ಕೆ ಕಾವೇರಿ ನೀರು

ಮೈಸೂರು, ಜನವರಿ18: ಇತ್ತೀಚೆಗಷ್ಟೇ ಕಾವೇರಿ 5ನೇ ಹಂತದ ಯೋಜನೆಗೆ ಕರ್ನಾಟಕ ಸರ್ಕಾರ ಚಾಲನೆ ನೀಡಿದ್ದು, ಶೀಘ್ರದಲ್ಲೇ ಕೃಷ್ಣರಾಜಸಾಗರ ಅಣೆಕಟ್ಟಿನಿಂದ ಬೃಹತ್ ಬೆಂಗಳೂರಿನ ಹಲವು ಪ್ರದೇಶಗಳಿಗೆ 7 ಟಿಎಂಸಿ ಅಡಿ ನೀರು ಸರಬರಾಜು ಮಾಡಲು ಮುಂದಾಗಿದೆ. ಇದು ಗ್ರೇಟರ್ ಬೆಂಗಳೂರು ಪ್ರದೇಶಗಳಿಗೆ ನೀರು ಪೂರೈಕೆ ಮಾಡಲಿದೆ.

ಕೆಆರ್‌ಎಸ್ ಅಣೆಕಟ್ಟಿನಿಂದ ಎಕ್ಸ್‌ಪ್ರೆಸ್ ಪೈಪ್‌ಲೈನ್ ಹಾಕಲು ಸರ್ಕಾರ ಯೋಜಿಸಿದೆ. ಇದು ಕೆಂಗೇರಿ, ಸರಜಾಪುರ, ಆನೇಕಲ್, ನೆಲಮಂಗಲ, ದೇವನಹಳ್ಳಿ ಮತ್ತು ಹೊಸಕೋಟೆಯ ಭಾಗಗಳಿಗೆ ನೀರು ಸರಬರಾಜು ಮಾಡಲಿದ್ದು, 50 ರಿಂದ 60 ಲಕ್ಷ ಜನಸಂಖ್ಯೆಗೆ ನೀರು ಪೂರೈಕೆ ಮಾಡಲಿದೆ.

Express line from Krishnaraja Sagar dam will supply water to Bengaluru South North

ಅಂತರ್ಜಲ ಅಥವಾ ಟ್ಯಾಂಕರ್‌ಗಳ ಮಾತ್ರ ನೀರಿನ ಮೂಲವಾಗಿರುವ ಪ್ರದೇಶಗಳಲ್ಲಿ ವಾಸಿಸುವ ಲಕ್ಷಾಂತರ ಜನರಯ ಕಾವೇರಿ ನೀರಿಗಾಗಿ ಕಾಯುವಂತಾಗಿದ್ದು, ಎರಡು ವರ್ಷಗಳ ಹಿಂದೆ ಭೀಕರ ಬರಗಾಲದ ಸಂದರ್ಭದಲ್ಲಿ ಟ್ಯಾಂಕರ್‌ಗಳ ಮೇಲೆ ಅವಲಂಬಿತರಾಗಿದ್ದರು. ಇದು ಭಾರತದ ಸಿಲಿಕಾನ್ ವ್ಯಾಲಿಯ ವರ್ಚಸ್ಸಿಗೆ ತೀವ್ರ ಹಾನಿಯನ್ನುಂಟುಮಾಡಿತು.

ಇನ್ನೂ ಈ ಕುರಿತು ಅಧಿಕಾರಿಗಳು ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಸಿದ್ಧಪಡಿಸಿದ್ದಾರೆ, ಈ ಯೋಜನೆಯ ಒಪ್ಪಿಗೆಗಾಗಿ ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ. ಎಲ್ಲವೂ ಸರಿಯಾಗಿ ನಡೆದರೆ, ಇದನ್ನು ಬಜೆಟ್‌ನಲ್ಲಿ ಘೋಷಿಸುವ ಸಾಧ್ಯತೆಯಿದೆ ಮತ್ತು ಈ ಪ್ರದೇಶಗಳ ನಿವಾಸಿಗಳ ಬೇಡಿಕೆಯನ್ನು ಪೂರೈಸುತ್ತದೆ. ಅಂತರ್ಜಲ ಮಟ್ಟವನ್ನು ಬಳಸಿಕೊಳ್ಳವ ಮತ್ತು ಟ್ಯಾಂಕರ್‌ಗಳನ್ನು ಅವಲಂಬಿಸಿರುವ ಈ ಪ್ರದೇಶಗಳ ನಿವಾಸಿಗಳ ಬೇಡಿಕೆ ಈಡೇರಲಿದೆ.

ಪ್ರಸ್ತಾವಿತ ಯೋಜನೆಯು ಬೃಹತ್ ಬೆಂಗಳೂರಿನ ಜನರಿಗಾಗಿ ನೀರಿನ ಸರಬರಾಜು ಮಾತ್ರವಲ್ಲದೇ, ಪ್ರತಿ ಯೂನಿಟ್ ನೀರಿನ ವೆಚ್ಚವನ್ನು 80 ಪೈಸೆಯಿಂದ 30 ಪೈಸೆಗೆ ಕಡಿಮೆ ಮಾಡುತ್ತದೆ. ಈ ಯೋಜನೆಯು ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಭಾಗದ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಜನರ ಅಗತ್ಯಗಳನ್ನು ಪೂರೈಸುತ್ತದೆ. ಆದರೆ ಕಾವೇರಿ 5 ನೇ ಹಂತವು 4,336 ಕೋಟಿ ರೂಪಾಯಿ ವೆಚ್ಚದಲ್ಲಿ ಪೂರ್ಣಗೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಯಶವಂತಪುರ, ಬೈಯಪ್ಪನಹಳ್ಳಿ, ಬೆಂಗಳೂರು ದಕ್ಷಿಣ, ಟಿ ದಾಸರಹಳ್ಳಿ ಮತ್ತು 110 ಹಳ್ಳಿಗಳು ಸೇರಿದಂತೆ ಇತರ ಪ್ರದೇಶಗಳನ್ನು ಒಳಗೊಂಡಿದೆ.

ಈ ಯೋಜನೆಯು ಬೆಂಗಳೂರು ಜಲ-ಹೆಚ್ಚುವರಿಯನ್ನು ಮಾಡುವುದಲ್ಲದೆ, ಮುಂದಿನ ಎರಡು ದಶಕಗಳವರೆಗೆ ಬೆಳೆಯುತ್ತಿರುವ ನಗರದ ಅಗತ್ಯಗಳನ್ನು ಪೂರೈಸುತ್ತದೆ ಮತ್ತು ಅದರ ಬೆಳವಣಿಗೆಗೆ ಕೊಡುಗೆ ನೀಡುತ್ತದೆ.
ಕಾವೇರಿ ನದಿಯಿಂದ ಕರ್ನಾಟಕಕ್ಕೆ 284.75 ಟಿಎಂಸಿ ಅಡಿ ನೀರು ನೀಡಲಾಗಿದ್ದು, ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ಕೆಆರ್‌ಎಸ್‌ನ ಹೆಚ್ಚುವರಿ ನೀರನ್ನು ಬಳಸುತ್ತಿದ್ದೇವೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಈ ಯೋಜನೆಗೆ ಚಾಲನೆ ನೀಡಿದ್ದೇವೆ ಮತ್ತು ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರದ ಬಹುಪಾಲು ಜನಸಂಖ್ಯೆಯನ್ನು ಇದು ಒಳಗೊಂಡಿದೆ ಎಂದು ಖಚಿತಪಡಿಸಿಕೊಳ್ಳಲು ಬಯಸಿದ್ದೇವೆ ಎಂದು ಹೇಳಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ಮೇಕೆದಾಟು ಯೋಜನೆಯು ದೊಡ್ಡ ರೀತಿಯಲ್ಲಿ ಕೊಡುಗೆ ನೀಡುತ್ತದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+