ಡಿಸೆಂಬರ್ 31ರವರೆಗೆ ಹುಬ್ಬಳ್ಳಿ ರಾಮೇಶ್ವರಂ ಎಕ್ಸ್ಪ್ರೆಸ್ ರೈಲು ಸೇವೆ ವಿಸ್ತರಣೆ, ವೇಳಾಪಟ್ಟಿ ವಿವರ
ಬೆಂಗಳೂರು, ಸೆಪ್ಟೆಂಬರ್ 29: ನೈಋತ್ಯ ರೈಲ್ವೆ ವಿಭಾಗವು ರೈಲು ಸಂಖ್ಯೆ 07355/07356 ಹುಬ್ಬಳ್ಳಿ ರಾಮೇಶ್ವರಂ ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲಿನ ಸೇವೆಗಳನ್ನು ಡಿಸೆಂಬರ್ 31, 2023 ರವರೆಗೆ ವಿಸ್ತರಿಸಲು ನಿರ್ಧರಿಸಿದೆ.
ಹುಬ್ಬಳ್ಳಿ ರಾಮೇಶ್ವರಂ ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲಿನ ಸೇವೆಯನ್ನು ಸೆಪ್ಟೆಂಬರ್ 30 ರವರೆಗೆ ಓಡಿಸಲು ಆರಂಭದಲ್ಲಿ ಸೂಚನೆ ನೀಡಲಾಗಿತ್ತು. ಈ ರೈಲಿಗೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದ್ದರಿಂದ ಡಿಸೆಂಬರ್ 31 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿತ್ತು. ರೈಲಿನ ವೇಳಾಪಟ್ಟಿ ಮತ್ತು ಇತರ ವಿವರಗಳು ಈ ಕೆಳಗಿನಂತಿವೆ.

ಎಸ್ಎಸ್ಎಸ್ ಹುಬ್ಬಳ್ಳಿ - ರಾಮೇಶ್ವರಂ (ರಾಮನಾಥಪುರದವರೆಗೆ) ರೈಲು ಸಂಖ್ಯೆ 07355 ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 7, 2023 ರಿಂದ ಡಿಸೆಂಬರ್ 30, 2023 ರವರೆಗೆ ಅನ್ವಯವಾಗುವಂತೆ ಪ್ರತಿ ಶನಿವಾರ ಬೆಳಗ್ಗೆ 6:30 ಕ್ಕೆ ಹುಬ್ಬಳ್ಳಿಯಿಂದ ಹೊರಡಲಿದೆ. ಈ ರೈಲಿನ ಮಾರ್ಗದಲ್ಲಿ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಬಾಣಸವಾಡಿ, ಹೊಸೂರು, ಧರ್ಮಪುರಿಯಲ್ಲಿ ರೈಲು ನಿಲುಗಡೆಯಾಗುತ್ತದೆ.
ಸೇಲಂ, ನಾಮಕ್ಕಲ್, ಕರೂರ್, ತಿರುಚಿರಾಪಳ್ಳಿ ಜಂಕ್ಷನ್, ಪುದುಕ್ಕೊಟ್ಟೈ, ಕಾರೈಕ್ಕುಡಿ ಜಂಕ್ಷನ್, ಮನಮದುರೈ ಜಂಕ್ಷನ್, ಮತ್ತು ರಾಮನಾಥಪುರಂಗಳಲ್ಲೂ ನಿಲುಗಡೆಯಾಗುತ್ತದೆ. ರೈಲು ಸಂಖ್ಯೆ 07356 ರಾಮೇಶ್ವರಂ (ರಾಮನಾಥಪುರದಿಂದ) - ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 8, 2023 ರಿಂದ ಪ್ರತಿ ಭಾನುವಾರದಂದು ರಾತ್ರಿ 9:55ಕ್ಕೆ ರಾಮನಾಥಪುರದಿಂದ ಹೊರಡುತ್ತದೆ.
ರೈಲು ಸಾಪ್ತಾಹಿಕ ಟ್ರಿಪ್ಗಳನ್ನು ಅಕ್ಟೋಬರ್ 8, 2023 ರಿಂದ ಡಿಸೆಂಬರ್ 31, 2023 ರವರೆಗೆ ಜಾರಿಗೆ ತರುತ್ತದೆ. ರೈಲು ಮರುದಿನ ಅಂದರೆ ಸೋಮವಾರ ಸಂಜೆ 7:25ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣವನ್ನು ತಲುಪುತ್ತದೆ. ರೈಲು 1 ಎಸಿ 2-ಟೈರ್ ಕೋಚ್, 3 ಎಸಿ 3-ಟೈರ್ ಕೋಚ್ಗಳು, 9 ಸ್ಲೀಪರ್ ಕೋಚ್ಗಳು, 6 ಸೆಕೆಂಡ್ ಕ್ಲಾಸ್ ಕೋಚ್ಗಳು ಮತ್ತು 1 ಲಗೇಜ್-ಕಮ್-ಬ್ರೇಕ್ವಾನ್ ವಿಕಲಾಂಗ ಸ್ನೇಹಿ ಕಂಪಾರ್ಟ್ಮೆಂಟ್ಗಳನ್ನು ಒಳಗೊಂಡಿರುವ 20 ಕೋಚ್ಗಳ ಸಂಯೋಜನೆಯನ್ನು ಹೊಂದಿರುತ್ತದೆ.
ಪ್ರಯಾಣಿಕರು ರೈಲಿನ ಸೇವೆಗಳನ್ನು ಬಳಸಿಕೊಳ್ಳುವಂತೆ ವಿನಂತಿಸಲಾಗಿದೆ ಎಂದು ನೈಋತ್ಯ ರೈಲ್ವೆಯ (SWR) ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ. ಹೊಸ ಕೆಲಸದ ವೇಳಾಪಟ್ಟಿಯಲ್ಲಿ ಸಮಯಗಳು ಬದಲಾಗಬಹುದು ಎಂದು ತಿಳಿಸಲಾಗಿರುತ್ತದೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications