Karnataka Rain: ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆ: ಗೋಕರ್ಣ ದೇವಾಲಯ ಜಲಾವೃತ
ಕುಮಟಾ, ಜೂನ್ 08: ಕರ್ನಾಟಕ ರಾಜ್ಯಾದ್ಯಂತ ವ್ಯಾಪಿಸಿರುವ ಮುಂಗಾರು ಮಳೆ ಆರಂಭಕ್ಕೆ ಭರ್ಜರಿಯಾಗಿ ಸುರಿಯುತ್ತಿದೆ. ಒಂದೇ ವಾರದಲ್ಲಿ ರಾಜ್ಯವನ್ನು ಆವರಿಸಿದ್ದು, ಉತ್ತರ ಕನ್ನಡದ ಜಿಲ್ಲೆಯಲ್ಲಿ (Uttara Kannada Weather) ಇಂದು ಬೆಳಗ್ಗೆ ಶನಿವಾರದವರೆಗೆ ಈ ವರ್ಷದ ಅತ್ಯಧಿಕ ಗರಿಷ್ಠ ಮಳೆ ದಾಖಲಾಗಿದೆ. ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಕೊಳಚೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ನೀಡಿರುವ ಮಾಹಿತಿ ಪ್ರಕಾರ, ಈ ವರ್ಷ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ಅತ್ಯಧಿಕ ಗರಿಷ್ಠ ಮಳೆ ಉತ್ತರ ಕನ್ನಡದ ಕುಮಟಾದಲ್ಲಿ ಆಗಿದೆ. ಶನಿವಾರ ಬೆಳಗ್ಗೆ 7.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಕುಮಟಾದಲ್ಲಿ ಬರೋಬ್ಬರಿ 344 ಮಿಲಿ ಮೀಟರ್ (34.4ಸೆಂಟಿ ಮೀಟರ್) ಮಳೆ ದಾಖಲಾಗಿದೆ.

ಉತ್ತರ ಕನ್ನಡದಲ್ಲಿ ವರುಣನ ಅಬ್ಬರಕ್ಕೆ ಜನರು ತತ್ತರಿಸಿದ್ದಾರೆ. ಜಿಲ್ಲೆ ಬಹುತೇಕ ಎಲ್ಲ ತಾಲೂಕುಗಳಲ್ಲಿ ಧಾರಾಕಾರ ಮಳೆ ದಾಖಲಾಗಿದ್ದು, ಜನ ಜೀವನ ಅಸ್ತವ್ಯವಸ್ತೆ ಮಾಡಿದೆ. ರಸ್ತೆಗಳು ಜಲಾವೃತಗೊಂಡಿವೆ. ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುವಷ್ಟರ ಮಟ್ಟಿಗೆ ಮಳೆ ಬಿದ್ದಿದೆ.
ಎಲ್ಲೆಲ್ಲಿ ಎಷ್ಟು ಮಳೆ ಆಗಿದೆ? ವಿವರ
ಕುಮಟಾದಂತೆ ಹನೇಹಳ್ಳಿಯಲ್ಲಿ 248 ಮಿ.ಮೀ, ಹೆಗಡೆ 236 ಮಿ.ಮೀ, ಬೊಬ್ರವಾಡ 230 ಮಿ.ಮೀ, ಹಳದೀಪುರ 227ಮಿ.ಮೀ, ಗೋಕರ್ಣ 197ಮಿ.ಮೀ, ಬ್ಲೇಲೆ 193 ಮಿ.ಮೀ ಹಾಗೂ ಅಂಕೋಲಾದಲ್ಲಿ 192 ಮಿ.ಮೀ ಮಳೆ ದಾಖಲಾಗಿದೆ. ಇನ್ನೂ ಹೆಲವಡೆ ಸಾಧಾರಣದಿಂದ ಭಾರೀ ಪ್ರಮಾಣದಲ್ಲಿ ಮಳೆ ಆಗಿದೆ.

ಇನ್ನೂ ಕಾರವಾರದಲ್ಲೂ ಅತ್ಯಧಿಕ ಮಳೆ ಬಿದ್ದಿದೆ. ಕೆಲವೆಡೆ ನೆನ್ನೆ ಬೆಳಗ್ಗೆಯಿಂದ ಮಳೆಯಾದರೆ, ಹಲವೆಡೆ ಸಂಜೆ ನಂತರ ಸುರಿಯಲು ಆರಂಭಿಸಿತು.
ಮಹಾಬಲೇಶ್ವರ ದೇವಸ್ಥಾಕ್ಕೆ ನುಗ್ಗಿದ ಕೊಳಚೆ ನೀರು
ಗೋಕರ್ಣದಲ್ಲಿ ಬಿದ್ದ ಮಳೆಯಿಂದಾಗಿ ಮಹಾಬಲೇಶ್ವರ ದೇವಸ್ಥಾನದ ಒಳಗೆ ನೀರು ನುಗ್ಗಿದೆ. ಮಳೆ ನೀರಿನ ಜೊತೆಗೆ ಕೊಳಚೆ ನೀರು ದೇಗುಲಕ್ಕೆ ನುಗ್ಗಿದೆ. ಕಳೆದ ವರ್ಷವು ಇದೇ ರೀತಿ ಆಗಿತ್ತು.
ಗರ್ಭಗುಡಿ ಹೊಕ್ಕ ಮಳೆ-ಕೊಳಚೆ ನೀರನ್ನು ಹೊರ ಹಾಕಲು ದೇವಸ್ಥಾನದ ಸಿಬ್ಬಂದಿ ಪರದಾಡಿದರು. ಇಲ್ಲಿನ ಸಂಗಮನಾಲಾದ ಮೂಲಕ ಸಮುದ್ರ ಸೇರಬೇಕಿದ್ದ ನೀರು ದೇವಸ್ಥಾನ ಪ್ರವೇಶಿಸಿದ್ದರಿಂದ ಮಹಾಪೂಜೆಗೆ ತೊಂದರೆ ಆಯಿತು. ನಂತರ ಸಮುದ್ರ ಸೇರಬೇಕಿದ್ದ ಮಾರ್ಗದಲ್ಲಿನ ಮರಳು ದಿನ್ನೆ ಕಡೆದು ನೀರು ಸರಾಗವಾಗಿ ಹೋಗುವಂತೆ ಮಾಡಿದ್ದಾರೆ. ಬಳಿಕ ಪೂಜೆ ಕಾರ್ಯಗಳು ನೆರವೇರಿವೆ ಎನ್ನಲಾಗಿದೆ.
3 ದಿನ ಆರೆಂಜ್ ಅಲರ್ಟ್
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಕಂಡು ಬರಲಿದೆ. ಮುಂದಿನ ಮೂರು ದಿನ ಉತ್ತರ ಕನ್ನಡ ಜಿಲ್ಲೆಗೆ ಅತ್ಯಧಿಕ ಮಳೆ ಸುರಿಯುವ ಕಾರಣಕ್ಕೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಇಂದು ಹಾಗೂ ನಾಳೆ ಉತ್ತರ ಕನ್ನಡ ಸೇರಿದಂತೆ ಕರಾವಳಿ ಸೇರಿದಂತೆ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ಹಲವೆಡೆ ವ್ಯಾಪಕ ಮಳೆ ಆಗಲಿದೆ. ಅಗತ್ಯ ಎಚ್ಚರಿಕೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ಇಳಿಯದಂತೆ ಸೂಚಿಸಲಾಗಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications