ನಕಲಿ ಜಾತಿ ಪ್ರಮಾಣ ಪತ್ರ ಆರೋಪ, ಕೆಂಪಯ್ಯಗೆ ಕ್ಲೀನ್ ಚಿಟ್
ಬೆಂಗಳೂರು, ಆಗಸ್ಟ್ 29 : ಸರ್ಕಾರಿ ನೌಕರಿ ಪಡೆಯಲು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿರುವ ಪ್ರಕರಣದಲ್ಲಿ ಕೆಂಪಯ್ಯ ಕ್ಲೀನ್ ಚಿಟ್ ಪಡೆದಿದ್ದಾರೆ. ದೂರಿನ ತನಿಖೆ ನಡೆಸಿದ ಎಸಿಬಿ, ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದೆ.
ದಿನೇಶ್ ಕಲ್ಲಹಳ್ಳಿ ಅವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ವಿರುದ್ಧ ದೂರು ನೀಡಿದ್ದರು. ಸರ್ಕಾರಿ ಉದ್ಯೋಗ ಪಡೆಯಲು ಕೆಂಪಯ್ಯ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ್ದಾರೆ ಎಂದು ಆರೋಪ ಮಾಡಿದ್ದರು.

ಕೆಂಪಯ್ಯ ಅವರು ಕಾಡು ಕುರುಬ ಜಾತಿಗೆ ಸೇರಿದವರಲ್ಲ. ಅವರು ಕುರುಬ ಜಾತಿಗೆ ಸೇರಿದವರು. ನಂತರ ಕಾಡು ಕುರುಬ ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.
ನಾಗರಿಕ ಹಕ್ಕು ನಿರ್ದೇಶನಾಲಯ (ಡಿಸಿಆರ್ಇ) ನೀಡಿರುವ ವರದಿಯನ್ನು ಆಧರಿಸಿ ಎಸಿಬಿ ಪ್ರಕರಣದಲ್ಲಿ ಕೆಂಪಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಕೆಂಪಯ್ಯ ಕಾಡು ಕುರುಬ ಸಮುದಾಯಕ್ಕೆ ಸೇರಿದವರು ಎಂದು ಡಿಸಿಆರ್ಇ ವರದಿ ನೀಡಿತ್ತು.
ಕೆಂಪಯ್ಯ ಅವರು 2017ರ ಮಾರ್ಚ್ನಲ್ಲಿ ಡಿಸಿಆರ್ಇಗೆ ಪತ್ರ ಬರೆದಿದ್ದರು. 2010ರಲ್ಲಿ ಕಂದಾಯ ನಿರೀಕ್ಷಕರು ನೀಡಿರುವ ಜಾತಿ ಪ್ರಮಾಣ ಪತ್ರ ನೀಡಿದ್ದರು. ಇದರಲ್ಲಿ ತಹಶೀಲ್ದಾರ್ ಸಹಿ ಇತ್ತು. ಕನಕಪುರ ತಾಲೂಕಿನ ಕಸಬ ಹೋಬಳಿ ಗೊಲ್ಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಕಂದಾಯ ನಿರೀಕ್ಷಕರು ಕೆಂಪಯ್ಯ ಕಾಡು ಕುರುಬ ಸಮುದಾಯಕ್ಕೆ ಸೇರಿದವರು ಎಂದು ವರದಿ ನೀಡಿದ್ದರು.
ಕನಕಪುರ ಮೂಲದ ದಿನೇಶ್ ಕಲ್ಲಹಳ್ಳಿ ಅವರು ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ್ದು, 'ನಾನು ದೂರಿನ ಜೊತೆ ಸಲ್ಲಿಸಿದ್ದ ಪ್ರಮಾಣ ಪತ್ರಗಳನ್ನು ಎಸಿಬಿ, ಡಿಸಿಆರ್ಇ ಪರಿಶೀಲನೆ ನಡೆಸಿಲ್ಲ. ಎಸಿಬಿ ಮೇಲೆ ನನಗೆ ನಂಬಿಕೆ ಇಲ್ಲ' ಎಂದು ಹೇಳಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications