ಹೈದರಾಬಾದ್ನಲ್ಲಿ ಮೈಸೂರು ಸ್ಯಾಂಡಲ್ ನಕಲಿ ಸೋಪು ತಯಾರಿಕಾ ಘಟಕ ಪತ್ತೆ, ಕರುನಾಡ ಅಧಿಕಾರಿಗಳು ತೆಗೆದುಕೊಂಡ ಕ್ರಮಗಳೇನು?
ಬೆಂಗಳೂರು, ಜನವರಿ, 14: ಮೈಸೂರು ಸ್ಯಾಂಡಲ್ ಸೋಪು ಕರ್ನಾಟಕದ ಹೆಮ್ಮೆಯ ಬ್ರಾಂಡ್ ಆಗಿದೆ. ಇದೀಗ ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್ಡಿಎಲ್) ಮೈಸೂರು ಸ್ಯಾಂಡಲ್ ಬ್ರಾಂಡ್ ಹೆಸರಿನಲ್ಲಿ ನಕಲಿ ಸೋಪ್ ಹಾಗೂ ವಿವಿಧ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಘಟಕವೊಂದು ಪಕ್ಕದ ರಾಜ್ಯ ಹೈದರಾಬಾದ್ನಲ್ಲಿ ಪತ್ತೆ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಇದರ ಬಗ್ಗೆ ಅಧಿಕಾರಿಗಳು ತೆಗೆದುಕೊಂಡ ಕ್ರಮಗಳೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಹೈದರಾಬಾದ್ನ ಮಾಲಕಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದ್ದ ನಕಲಿ ಸೋಪು ತಯಾರಿಕಾ ಘಟಕ ಪತ್ತೆ ಆಗಿದ್ದು, ಕೆಎಸ್ಡಿಎಲ್ ಅಧಿಕಾರಿಗಳ ದೂರನ್ನು ಆಧರಿಸಿ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಹಾಗೂ 2 ಕೋಟಿ ಮೌಲ್ಯದ ಸೋಪುಗಳನ್ನು ವಶಕ್ಕೆ ಪಡೆಯಲಾಗಿದ ಎಂದು ಪ್ರಜಾವಾಣಿಯಲ್ಲಿ ವರದಿಯಾಗಿದೆ.

ಹೈದರಾಬಾದ್ ಮಾರುಕಟ್ಟೆಯಲ್ಲಿ ಮೈಸೂರು ಸ್ಯಾಂಡಲ್ ಬ್ರಾಂಡ್ ಹೆಸರಿನಲ್ಲಿ ನಕಲಿ ಸೋಪುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ವ್ಯಕ್ತಿಯೊಬ್ಬರು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದರು. ಇನ್ನು ಇದನ್ನು ಗಂಭೀರವಾಗಿ ಪರಿಗಣಿಸಿದ ಅವರು ಕೆಎಸ್ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಅವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನೀಡಿದ್ದಾರೆ.
ಇನ್ನು ಹೈದರಾಬಾದ್ನ ಹಲವು ಪ್ರದೇಶಗಳಲ್ಲಿ ಮೈಸೂರು ಸ್ಯಾಂಡಲ್ ಬ್ರಾಂಡ್ ಹೆಸರಿನಲ್ಲಿ ನಕಲಿ ಸೋಪು ಪೂರೈಕೆ ಆಗುತ್ತಿರುವುದು ಕಂಡುಬಂದಿತ್ತು. ಆದರೆ ಪೂರೈಕೆದಾರರ ಖಚಿತ ಮಾಹಿತಿ ಲಭ್ಯವಾಗಿರಲಿಲ್ಲ. ಇದಕ್ಕಾಗಿ 1 ಲಕ್ಷ ರೂಪಾಯಿ ಮೌಲ್ಯದ ಸೋಪುಗಳನ್ನು ಖರೀದಿಸಿ, ಮೂಲ ಪತ್ತೆಗೆ ನಿರ್ಧರಿಸಲಾಗಿತ್ತು ಎಂದು ಪ್ರಶಾಂತ್ ಮಾಹಿತಿ ನೀಡಿದ್ದಾರೆ.
ಅಲ್ಲದೆ ಇದೀಗ ಸಂಕ್ರಾತಿ ಹಬ್ಬ ಇದ್ದುದರಿಂದ ಈ ವೇಳೆ ಹೆಚ್ಚಿನ ಬೇಡಿಕೆ ಇದ್ದು, ಈ ಹಿನ್ನೆಲೆ 25 ಲಕ್ಷ ರೂಪಾಯಿ ಮೌಲ್ಯದ ಸೋಪುಗಳನ್ನು ಪೂರೈಕೆ ಮಾಡುವಂತೆ ಬೇಡಿಕೆ ಬಂದಿತ್ತು. ಸ್ವಂತ ವಾಹನದಲ್ಲಿ ಕೊಂಡೊಯ್ಯುವ ನೆಪದಲ್ಲಿ ಉತ್ಪಾದನಾ ಘಟಕವನ್ನು ಪತ್ತೆ ಹಚ್ಚಲಾಯಿತು. ನಂತರ ಪೊಲೀಸರಿಗೆ ದೂರು ನೀಡಿ, ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ತಲಾ 150 ಗ್ರಾಂ ತೂಕದ 1,800 ಮತ್ತು 75 ಗ್ರಾಂ ತೂಕದ 9,400 ಸೋಪುಗಳು ಹಾಗೂ ಅವುಗಳನ್ನು ತುಂಬುವ 800 ಖಾಲಿ ಪೆಟ್ಟಿಗೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications