ಸಚಿವ ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು ಸೆಪ್ಟೆಂಬರ್ 12: ಸಚಿವ ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು ಮಾಡಲಾಗಿದೆ, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಡಿಕೆ ಶಿವಕುಮಾರ್ ಅವರು ಉತ್ತರಿಸಿದರು.
"ಸಚಿವ ಸುಧಾಕರ್ ಅವರ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

"ಬಿಜೆಪಿ ಏನಾದರೂ ಕುತಂತ್ರ ಮಾಡಲಿ, ಡಿ. ಸುಧಾಕರ್ ಅವರದು ಸಿವಿಲ್ ಪ್ರಕರಣವಾಗಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಪ್ರಕರಣದ ಬಗ್ಗೆ ಸಂಪೂರ್ಣ ವರದಿ ಪಡೆದಿದ್ದೇನೆ. ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಸುಧಾಕರ್ ಅವರು ಅನುಮತಿ ಮೇರೆಗೆ ಖಾಸಗಿ ಜಮೀನು ಖರೀದಿ ಮಾಡಿದ್ದಾರೆ. ಚುನಾವಣೆ ಸಮಯದಲ್ಲಿ ಬೇರೆಯವರು ಕಾಂಪೌಂಡ್ ಹಾಕಿದ್ದಾರೆ. ಹೀಗಾಗಿ ಇವರ ಕಡೆಯವರು ಜಾಗ ಭದ್ರ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ವಿಚಾರವಾಗಿ ಪರಿಶಿಷ್ಟ ಜಾತಿಯವರು ದೂರು ನೀಡಿದ್ದು, ಪಿಸಿಆರ್ ಪ್ರಕಾರ ದೂರು ದಾಖಲಿಸಲಾಗಿದೆ'' ಎಂದರು.
'ಈ ದೂರು ನೀಡುವ ಸಂದರ್ಭದಲ್ಲಿ ಸುಧಾಕರ್ ಅವರು ಚಿತ್ರದುರ್ಗದಲ್ಲಿ ಇದ್ದರು. ಹೀಗಾಗಿ ಇದು ಸುಳ್ಳು ಕೇಸು ಎಂದು ನನಗೆ ಗೊತ್ತಿದೆ. ಎಲ್ಲ ಮಾಹಿತಿ ನಮ್ಮ ಬಳಿ ಇದೆ. ನಾಳೆ ಬೆಳಗ್ಗೆ ನನ್ನ ಮೇಲೂ ಸುಳ್ಳು ದೂರು ನೀಡಬಹುದು. ಬಿಜೆಪಿಯವರು ಸುಧಾಕರ್ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಕನಸು ಕಾಣುವ ಅಗತ್ಯವಿಲ್ಲ. ಯಾರಾದರೂ ತಪ್ಪು ಮಾಡಿದ್ದರೆ, ಕಾನೂನು ಮುಂದೆ ಯಾರೂ ದೊಡ್ಡವರಿಲ್ಲ. ಕಾನೂನಿಗೆ ಎಲ್ಲರೂ ಗೌರವ ನೀಡಬೇಕು' ಎಂದು ಡಿಕೆ ಶಿವಕುಮಾರ್ ಹೇಳಿದರು.

ಒಂದು ನಿಮಿಷದ ವಿಡಿಯೋ ವಿಚಾರವಾಗಿ ಕೇಳಿದ ಪ್ರಶ್ನೆಗೆ, "ಧಮಕಿ ಪ್ರಕರಣಕ್ಕೂ ಪಿಸಿಆರ್ ಪ್ರಕರಣಕ್ಕೂ ಬಹಳ ವ್ಯತ್ಯಾಸವಿದೆ" ಎಂದು ಹೇಳಿದರು.
ನಮ್ಮಲ್ಲಿ ನೀರಿಲ್ಲ, ಬಿಡುವುದು ಎಲ್ಲಿಂದ?:
ಕಾವೇರಿ ವಿಚಾರವಾಗಿ ಕೇಳಿದಾಗ, "ಈ ವಿಚಾರವಾಗಿ ಈಗ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದು, ನಮ್ಮಲ್ಲಿ ಮಳೆ ಕೊರತೆಯಿಂದಾಗಿ ಅಗತ್ಯ ಪ್ರಮಾಣದ ನೀರಿಲ್ಲ. ನಾವು ಕುಡಿಯುವ ಉದ್ದೇಶಕ್ಕೆ ನೀರು ಹೊಂದಿಸಿಕೊಳ್ಳುವುದಕ್ಕೆ ಕಷ್ಟವಿದೆ, ಈ ವಾಸ್ತವಾಂಶವನ್ನು ನಾವು ತಿಳಿಸುತ್ತೇವೆ. ನಾವು ಕುಡಿಯುವ ನೀರು ಹೊಂದಿಸಿಕೊಳ್ಳಲು ಅವಕಾಶ ನೀಡಿ ಎಂದು ಪ್ರಾಧಿಕಾರದ ಮುಂದೆ ಮನವಿ ಮಾಡುತ್ತೇವೆ" ಎಂದರು.
12ರ ನಂತರ ನೀರು ನಿಲ್ಲಿಸುತ್ತೀರಾ ಎಂದು ಕೇಳಿದಾಗ, "ಈಗ ನೀರು ಹೋಗುತ್ತಿಲ್ಲ, ಇನ್ನು ಬಂದ್ ಮಾಡುವುದು ಎಲ್ಲಿ. ಮಳೆ ಬರಲಿ ಎಂದು ನೀವೆಲ್ಲರೂ ಪ್ರಾರ್ಥನೆ ಮಾಡಿ" ಎಂದು ಹೇಳಿದರು.
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
KD Song Controversy: ಸೆರಗ ಸರ್ಸೆ ಹಾಡು ವಿವಾದ: ಪ್ರೇಮ್ ವಿರುದ್ಧ ದೂರು, ನೋಟಿಸ್ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications