ಸಚಿವ ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆ ನೀಡುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು ಸೆಪ್ಟೆಂಬರ್ 12: ಸಚಿವ ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು ಮಾಡಲಾಗಿದೆ, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಡಿಕೆ ಶಿವಕುಮಾರ್ ಅವರು ಉತ್ತರಿಸಿದರು.
"ಸಚಿವ ಸುಧಾಕರ್ ಅವರ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

"ಬಿಜೆಪಿ ಏನಾದರೂ ಕುತಂತ್ರ ಮಾಡಲಿ, ಡಿ. ಸುಧಾಕರ್ ಅವರದು ಸಿವಿಲ್ ಪ್ರಕರಣವಾಗಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಪ್ರಕರಣದ ಬಗ್ಗೆ ಸಂಪೂರ್ಣ ವರದಿ ಪಡೆದಿದ್ದೇನೆ. ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದೇನೆ. ಸುಧಾಕರ್ ಅವರು ಅನುಮತಿ ಮೇರೆಗೆ ಖಾಸಗಿ ಜಮೀನು ಖರೀದಿ ಮಾಡಿದ್ದಾರೆ. ಚುನಾವಣೆ ಸಮಯದಲ್ಲಿ ಬೇರೆಯವರು ಕಾಂಪೌಂಡ್ ಹಾಕಿದ್ದಾರೆ. ಹೀಗಾಗಿ ಇವರ ಕಡೆಯವರು ಜಾಗ ಭದ್ರ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ವಿಚಾರವಾಗಿ ಪರಿಶಿಷ್ಟ ಜಾತಿಯವರು ದೂರು ನೀಡಿದ್ದು, ಪಿಸಿಆರ್ ಪ್ರಕಾರ ದೂರು ದಾಖಲಿಸಲಾಗಿದೆ'' ಎಂದರು.
'ಈ ದೂರು ನೀಡುವ ಸಂದರ್ಭದಲ್ಲಿ ಸುಧಾಕರ್ ಅವರು ಚಿತ್ರದುರ್ಗದಲ್ಲಿ ಇದ್ದರು. ಹೀಗಾಗಿ ಇದು ಸುಳ್ಳು ಕೇಸು ಎಂದು ನನಗೆ ಗೊತ್ತಿದೆ. ಎಲ್ಲ ಮಾಹಿತಿ ನಮ್ಮ ಬಳಿ ಇದೆ. ನಾಳೆ ಬೆಳಗ್ಗೆ ನನ್ನ ಮೇಲೂ ಸುಳ್ಳು ದೂರು ನೀಡಬಹುದು. ಬಿಜೆಪಿಯವರು ಸುಧಾಕರ್ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಕನಸು ಕಾಣುವ ಅಗತ್ಯವಿಲ್ಲ. ಯಾರಾದರೂ ತಪ್ಪು ಮಾಡಿದ್ದರೆ, ಕಾನೂನು ಮುಂದೆ ಯಾರೂ ದೊಡ್ಡವರಿಲ್ಲ. ಕಾನೂನಿಗೆ ಎಲ್ಲರೂ ಗೌರವ ನೀಡಬೇಕು' ಎಂದು ಡಿಕೆ ಶಿವಕುಮಾರ್ ಹೇಳಿದರು.

ಒಂದು ನಿಮಿಷದ ವಿಡಿಯೋ ವಿಚಾರವಾಗಿ ಕೇಳಿದ ಪ್ರಶ್ನೆಗೆ, "ಧಮಕಿ ಪ್ರಕರಣಕ್ಕೂ ಪಿಸಿಆರ್ ಪ್ರಕರಣಕ್ಕೂ ಬಹಳ ವ್ಯತ್ಯಾಸವಿದೆ" ಎಂದು ಹೇಳಿದರು.
ನಮ್ಮಲ್ಲಿ ನೀರಿಲ್ಲ, ಬಿಡುವುದು ಎಲ್ಲಿಂದ?:
ಕಾವೇರಿ ವಿಚಾರವಾಗಿ ಕೇಳಿದಾಗ, "ಈ ವಿಚಾರವಾಗಿ ಈಗ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದು, ನಮ್ಮಲ್ಲಿ ಮಳೆ ಕೊರತೆಯಿಂದಾಗಿ ಅಗತ್ಯ ಪ್ರಮಾಣದ ನೀರಿಲ್ಲ. ನಾವು ಕುಡಿಯುವ ಉದ್ದೇಶಕ್ಕೆ ನೀರು ಹೊಂದಿಸಿಕೊಳ್ಳುವುದಕ್ಕೆ ಕಷ್ಟವಿದೆ, ಈ ವಾಸ್ತವಾಂಶವನ್ನು ನಾವು ತಿಳಿಸುತ್ತೇವೆ. ನಾವು ಕುಡಿಯುವ ನೀರು ಹೊಂದಿಸಿಕೊಳ್ಳಲು ಅವಕಾಶ ನೀಡಿ ಎಂದು ಪ್ರಾಧಿಕಾರದ ಮುಂದೆ ಮನವಿ ಮಾಡುತ್ತೇವೆ" ಎಂದರು.
12ರ ನಂತರ ನೀರು ನಿಲ್ಲಿಸುತ್ತೀರಾ ಎಂದು ಕೇಳಿದಾಗ, "ಈಗ ನೀರು ಹೋಗುತ್ತಿಲ್ಲ, ಇನ್ನು ಬಂದ್ ಮಾಡುವುದು ಎಲ್ಲಿ. ಮಳೆ ಬರಲಿ ಎಂದು ನೀವೆಲ್ಲರೂ ಪ್ರಾರ್ಥನೆ ಮಾಡಿ" ಎಂದು ಹೇಳಿದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications