ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಲ ಮನ್ನಾಕ್ಕೆ ಮೋದಿ, ಬಿಎಸ್‌ವೈಗೆ ಪತ್ರ ಬರೆದು ರೈತ ಆತ್ಮಹತ್ಯೆ

By ನಮ್ಮ ಪ್ರತಿನಿಧಿ
|
Google Oneindia Kannada News

ಬಾಗಲಕೋಟೆ, ಅಕ್ಟೋಬರ್ 15 : ಸಾಲಬಾಧೆಯಿಂದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 8 ಎಕರೆ ಜಮೀನಿನಲ್ಲಿ ಕಬ್ಬು, ಈರುಳ್ಳಿ ಬೆಳೆದಿದ್ದ ರೈತ ಸುಮಾರು 20 ಲಕ್ಷ ರೂ. ಸಾಲ ಮಾಡಿಕೊಂಡಿದ್ದ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ನಾಗನಾಪುರದ ರೈತ ಈರಪ್ಪ (50) ಆತ್ಮಹತ್ಯೆ ಮಾಡಿಕೊಂಡವರು. ಊರ ಹೊರವಲಯದಲ್ಲಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು: ಸಾಲ ಕಟ್ಟಲಾಗದೆ ಕೆ.ಆರ್.ನಗರದಲ್ಲಿ ರೈತ ಆತ್ಮಹತ್ಯೆ

suicide

ಈರಪ್ಪ 8 ಎಕರೆ ಜಮೀನು ಹೊಂದಿದ್ದಾರೆ. ಕಬ್ಬು ಮತ್ತು ಈರುಳ್ಳಿ ಬೆಳೆದಿದ್ದರು. ಸರಿಯಾಗಿ ಬೆಳೆ ಬಾರದೇ ಹಾನಿಗೊಳಗಾಗಿತ್ತು. ಇತ್ತ ಬೆಳೆಸಾಲ ಸೇರಿ ವಿವಿಧ ಕೃಷಿ ಚಟುವಟಿಕೆಗಳಿಗೆ ಸುಮಾರು 20 ಲಕ್ಷ ರೂ. ಸಾಲ ಮಾಡಿದ್ದರು. ಸಾಲ ತೀರಿಸೋದು ಹೇಗೆ? ಎಂಬ ಚಿಂತೆಯಿದ ಈರಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ.

20 ಎಕರೆ ಜಮೀನು ಏಕಕಾಲಕ್ಕೆ ಬಿತ್ತಿದ ಬಲರಾಮರು..!20 ಎಕರೆ ಜಮೀನು ಏಕಕಾಲಕ್ಕೆ ಬಿತ್ತಿದ ಬಲರಾಮರು..!

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್, ವಿಜಯಾ ಬ್ಯಾಂಕ್, ಕೆವಿಜೆ ಬ್ಯಾಂಕ್ ಸೇರಿ ಹಲವೆಡೆ ಸಾಲ ಪಡೆದಿದ್ದು. ಬೆಳೆ ಕೈ ಕೊಟ್ಟ ಮೇಲೆ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಸಾಲ ಮತ್ತು ಬಡ್ಡಿ ಮನ್ನಾ ಮಾಡುವಂತೆ ಪ್ರಧಾನಿ ಮೋದಿ, ಮಾಜಿ ಸಿಎಂ ಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಜಗದೀಶ್ ಶೆಟ್ಟರ್ ಗೂ ಪತ್ರ ಬರೆದಿದ್ದರು.

ಉತ್ತಮ ಹಿಂಗಾರು ಮಳೆ: ರೈತರ ಕಣ್ಣಲ್ಲಿ ಹರ್ಷದ ಸುಗ್ಗಿಉತ್ತಮ ಹಿಂಗಾರು ಮಳೆ: ರೈತರ ಕಣ್ಣಲ್ಲಿ ಹರ್ಷದ ಸುಗ್ಗಿ

ರೈತ ಈರಪ್ಪನ ಪತ್ರಕ್ಕೆ ಯಾವ ನಾಯಕರು ಉತ್ತರ ಕೊಟ್ಟಿರಲಿಲ್ಲ. ದಿನ ಕಳೆದಂತೆ ಬಡ್ಡಿ ಹೆಚ್ಚಾಗ ತೊಡಗಿತ್ತು. ಇದರಿಂದ ತೀವ್ರನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
A farmer committed suicide at Nagapura, Bagalkot district on Sunday, October 15, 2017. Erappa (50), who owns 8 acres of land, had taken loans of 20 lakh for crops.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X