ಉತ್ತರ ಕರ್ನಾಟಕದಲ್ಲೂ ನಡೆಯುತ್ತಾ ದೆಹಲಿ ಮಾದರಿಯ ರೈತ ಪ್ರತಿಭಟನೆ
ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ರೈತರು ಕಳೆದ ಎರಡೂವರೆ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಪ್ರತಿಭಟನೆ ಕರ್ನಾಟಕಕ್ಕೂ ರೈತ ಪ್ರತಿಭಟನೆಯ ಕಾವು ತಗುಲುವ ಸಾಧ್ಯತೆ ಇದೆ. ರೈತರ ಪ್ರತಿಭಟನೆಯ ಮುಖಂಡರಾಗಿ ಗುರುತಿಸಿಕೊಂಡಿರುವ ರಾಕೇಶ್ ಟಿಕಾಯತ್ ಈ ತಿಂಗಳ ಅಂತ್ಯದಲ್ಲಿ ಉತ್ತರ ಕರ್ನಾಟಕದಲ್ಲಿ ಮಹಾ ಪಂಚಾಯತ್ ಎಂಬ ಸಾಮೂಹಿಕ ರ್ಯಾಲಿಯನ್ನು ನಡೆಸಲಿದ್ದಾರೆ.
ಹಸಿವಿನ ಮೇಲೆ ವ್ಯಾಪಾರ ಮಾಡಲು ಬಿಡುವುದಿಲ್ಲ: ಮೋದಿಗೆ ಟಿಕಾಯತ್ ತಿರುಗೇಟು
ಪ್ರತಿ ಜಿಲ್ಲೆಯಿಂದ ಸೇರಿದಂತೆ 50 ಸಾವಿರಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ. ಕೇರಳ ರಾಜ್ಯದಲ್ಲಿ ರೇಷ್ಮೆ ಮತ್ತು ಇತರ ಬೆಳೆಗಳಿಗೆ ಇರುವಂತೆ ಕಾಫಿ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಲಿದ್ದಾರೆ. ಅಲ್ಲದೆ ಪ್ರತಿಭಟನಾಕಾರರು, ಬೆಂಗಳೂರಿನಲ್ಲಿ ದಕ್ಷಿಣ ಭಾರತ ರೈತರ ದುಂಡು ಮೇಜಿನ ಸಮ್ಮೇಳನ ನಡೆಸಲಿದ್ದಾರೆ.
Recommended Video
ತಮ್ಮ ಪ್ರತಿಭಟನೆಗೆ ಇನ್ನಷ್ಟು ಸಂಖ್ಯೆಯಲ್ಲಿ ರೈತರನ್ನು ಸೇರಿಸಲು ಟಿಕಾಯತ್ ಕರ್ನಾಟಕಕ್ಕೆ ಬರುತ್ತಿದ್ದಾರೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಬಡಗಲ್ಪುರ ನಾಗೇಂದ್ರ, ರಾಜ್ಯ ಬಜೆಟ್ ಅಧಿವೇಶನ ಸಂದರ್ಭದಲ್ಲಿ ರೈತರು ವಿಧಾನ ಸೌಧ ಚಲೋ ರ್ಯಾಲಿಯನ್ನು ನಡೆಸಿ ಕೃಷಿ ಕಾಯ್ದೆ ಮತ್ತು ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಲಿದ್ದಾರೆ ಎಂದರು.