ವಿದ್ಯುತ್ ಕೊರತೆ ವಿರುದ್ಧ ಪ್ರತಿಭಟನೆಗೆ ಮೊಸಳೆಯನ್ನೇ ಹಿಡಿದು ತಂದ ರೈತರು
ಹುಬ್ಬಳ್ಳಿ, ಅಕ್ಟೋಬರ್ 25: ಅನಿಯಮಿತ ವಿದ್ಯುತ್ ಕಡಿತದಿಂದ ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗಿ ಸಿಡಿದೆದ್ದ ವಿಜಯಪುರ ಜಿಲ್ಲೆಯ ರೈತರು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ಕಚೇರಿಗೆ ಮೊಸಳೆಯನ್ನು ಹಿಡಿದು ತಂದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಹಗಲಿನಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದ ಕಾರಣ ರೈತರು ರಾತ್ರಿ ವೇಳೆ ಜಮೀನಿಗೆ ಹೋದಾಗ ಕಾಡುಪ್ರಾಣಿಗಳು, ಹಾವುಗಳ ಕಾಟದಿಂದ ಪರದಾಡುವಂತಾಗಿದೆ. ಕಳೆದ ವಾರ ರಾತ್ರಿ ವಿದ್ಯುತ್ ಸರಬರಾಜು ಮಾಡಿದ ನಂತರ ರೈತರೊಬ್ಬರು ತಮ್ಮ ಜಮೀನಿಗೆ ನೀರು ಹಾಕಲು ಹೋದಾಗ ತಮ್ಮ ಕೃಷಿ ಕ್ಷೇತ್ರದಲ್ಲಿ ದೊಡ್ಡ ಮೊಸಳೆಯನ್ನು ಕಂಡು ಬೆಚ್ಚಿಬಿದ್ದಿದ್ದರು. ಮೊಸಳೆಯು ಬೇಟೆಯನ್ನು ಹುಡುಕಿಕೊಂಡು ಸಮೀಪದ ಕೃಷ್ಣಾ ನದಿಯಿಂದ ಬಂದಿತ್ತು ಎಂದು ಅವರು ಹೇಳಿದರು.

ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮೊಸಳೆಯನ್ನು ಹಿಡಿದು ವಿದ್ಯುತ್ ಕೇಂದ್ರಕ್ಕೆ ತಂದು ಹೆಸ್ಕಾಂ ಸಿಬ್ಬಂದಿ ಬರುವರೆಗೂ ಠಿಕಾಣಿ ಹೂಡಿದ್ದರು. ತಮ್ಮ ಕಚೇರಿಯಲ್ಲಿ ಮೊಸಳೆಯನ್ನು ಕಂಡು ದಂಗಾದ ಹೆಸ್ಕಾಂ ಅಧಿಕಾರಿಗಳು ರಕ್ಷಣೆಗಾಗಿ ಪೊಲೀಸರು ಮತ್ತು ಅರಣ್ಯಾಧಿಕಾರಿಗಳನ್ನು ಕರೆ ಮಾಡಿದರು. ನಂತರ ಅರಣ್ಯಾಧಿಕಾರಿಗಳು ಮೊಸಳೆಯನ್ನು ಆಲಮಟ್ಟಿ ಅಣೆಕಟ್ಟಿನಲ್ಲಿ ಬಿಟ್ಟರು.
మాకు కరెంట్ ఇస్తారా ముసలిని సబ్ స్టేషన్లో వదలాలా అంటూ ముసలిని తీసుకొచ్చిన కర్ణాటక రైతులు. pic.twitter.com/HFaaEFDtSG
— Actual India (@ActualIndia) October 21, 2023
ಬಳಿಕ ಹಗಲು ಹೊತ್ತಿನಲ್ಲಿ ವಿದ್ಯುತ್ ಕಡಿತವಾಗದಂತೆ ನೋಡಿಕೊಳ್ಳುವುದಾಗಿ ಹೆಸ್ಕಾಂ ಅಧಿಕಾರಿಗಳು ಗ್ರಾಮಸ್ಥರಿಗೆ ಭರವಸೆ ನೀಡಿದರು. ನೀರಾವರಿ ಇಲಾಖೆಯ ಪ್ರಕಾರ, ಈ ವರ್ಷ ಅಲ್ಪ ಪ್ರಮಾಣದ ಮಳೆಯಿಂದಾಗಿ ಕೃಷಿ ಚಟುವಟಿಕೆಗಳು ಅಸ್ತವ್ಯಸ್ತವಾಗಿವೆ. ಅಣೆಕಟ್ಟುಗಳಲ್ಲಿ ನೀರಾವರಿ ಉದ್ದೇಶಕ್ಕೆ ಬಿಡುವಷ್ಟು ನೀರು ಇಲ್ಲ. ರೈತರು ನೀರಾವರಿಗಾಗಿ ಬೋರ್ವೆಲ್ಗಳನ್ನು ಅವಲಂಬಿಸಿದ್ದಾರೆ. ನೀರಾವರಿ ಉದ್ದೇಶಕ್ಕಾಗಿ ಅತಿಯಾದ ವಿದ್ಯುತ್ ಬಳಕೆ ವಿದ್ಯುತ್ ಕೊರತೆಯನ್ನು ಸೃಷ್ಟಿಸಿದೆ ಎಂದು ತಿಳಿದು ಬಂದಿದೆ.
ಬೇಡಿಕೆ ಮತ್ತು ಬಳಕೆಯಲ್ಲಿ ತೀವ್ರ ಏರಿಕೆಯಿಂದಾಗಿ ಕರ್ನಾಟಕದಲ್ಲಿ ವಿದ್ಯುತ್ ಕೊರತೆಯಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹೇಳಿದ್ದರು. ಅಕ್ಟೋಬರ್ನಲ್ಲಿ ವಿದ್ಯುತ್ ಬಳಕೆ ಸುಮಾರು 10,000 ಮೆಗಾವ್ಯಾಟ್ ಆಗಿದ್ದು, ಕೃಷಿ ಉದ್ದೇಶಗಳಿಗಾಗಿ ಹೆಚ್ಚಿದ ವಿದ್ಯುತ್ ಬಳಕೆಯಿಂದಾಗಿ ರಾಜ್ಯದಲ್ಲಿ 16,000 ಮೆಗಾವ್ಯಾಟ್ಗೆ ಏರಿಕೆಯಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications