ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ಮೋದಿ ಭೇಟಿಗೆ ಹೊರಟ ರಾಜ್ಯ ರೈತ ನಿಯೋಗ

By Mahesh
|
Google Oneindia Kannada News

ಬೆಂಗಳೂರು, ಜೂನ್ 12: ಕಳಸಾಬಂಡೂರಿ ನಾಲಾ ಜೋಡಣೆ, ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ರಾಜ್ಯ ರೈತ ನಿಯೋಗ ದೆಹಲಿಗೆ ತೆರಳಲು ಸಜ್ಜಾಗಿದೆ.

ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಬಂದ ಪ್ರಧಾನಿ ಅವರು ಮಹದಾಯಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ ಚುನಾವಣೆ ಮುಗಿದರೂ ತಾವು ಪ್ರಧಾನಿ ಕೊಟ್ಟ ಮಾತು ಈಡೇರಿಲ್ಲ. ಹೀಗಾಗಿ, ಮಹದಾಯಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲು ಮೋದಿ ಭೇಟಿಗೆ ತೆರಳುವುದಾಗಿ ಮಹದಾಯಿ ಹೋರಾಟಗಾರರ ಸಮಿತಿ ಹೇಳಿದೆ.

ಏನಿದು ಕಳಸಾ-ಬಂಡೂರಿ ಯೋಜನೆ? ಏನಿದು ಕಳಸಾ-ಬಂಡೂರಿ ಯೋಜನೆ?

ಕಳೆದ 1060 ದಿನಗಳಿಂದ ನಿರಂತರವಾಗಿ ಮಹದಾಯಿ ಹಾಗೂ ಕಳಸಾ ಬಂಡೂರಿಗಾಗಿ ಹೋರಾಟ ನಡೆಯುತ್ತಿದೆ. ನಾಲ್ಕು ಜಿಲ್ಲೆಯ 10 ತಾಲೂಕಿನ ರೈತರಿಗೆ ಮಹದಾಯಿ ಅಚ್ಚುಕಟ್ಟು ಪ್ರದೇಶದವರು ನಡೆಸುತ್ತಿರುವ ಹೋರಾಟಕ್ಕೆ ಬೆನ್ನಲುಬಾಗಿ ನಿಲ್ಲಲು ನಿವೃತ್ತ ನ್ಯಾ. ವೆಂಕಟಾಚಲಯ್ಯ ಅವರು ಮುಂದೆ ಬಂದಿದ್ದಾರೆ.

Farmers delegation to meet PM Modi on Kalasa Banduri Mahadayi issue

ಮಹದಾಯಿ ಸಮಸ್ಯೆಯನ್ನ ಮುಂದಿಟ್ಟುಕೊಂಡು ಅದೆಷ್ಟೋ ರಾಜಕೀಯ ನಾಯಕರು ತಮ್ಮ ರಾಜಕೀಯ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ರಾಜಕೀಯ ಲಾಭಕ್ಕಾಗಿ ಯೋಜನೆಯನ್ನು ಬಳಸಿಕೊಳ್ಳುತ್ತಿರುವುದರ ಬಗ್ಗೆ ಪ್ರಶ್ನಿಸಿ, ಜೂನ್ 13 ಹಾಗೂ 14 ರಂದು ದೆಹಲಿಗೆ ಹೋಗಿ ಭೇಟಿ ನೀಡಿ ಮಾತುಕತೆ ನಡೆಸಲು ಮುಂದಾಗಿದ್ದಾರೆ.

ಕಳಸಾ ಬಂಡೂರಿ ಯೋಜನೆ, ವಿವಾದ ಮತ್ತು ನಾವು ಕಳಸಾ ಬಂಡೂರಿ ಯೋಜನೆ, ವಿವಾದ ಮತ್ತು ನಾವು

ಮಹದಾಯಿ ಸಮಸ್ಯೆ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಆದರೆ, ಪ್ರಧಾನಿ ಮೋದಿ ಅವರು ಮೂರು ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆಸಿ ಸಮಸ್ಯೆ ಬಗೆಹರಿಸಬಹುದಾಗಿದೆ. ಹೀಗಾಗಿ, ಮಹಾದಾಯಿ ಹೋರಾಟಗಾರರ ಪೈಕಿ 23ಕ್ಕೂ ಅಧಿಕ ಮಂದಿ, ದೆಹಲಿಗೆ ತೆರಳಿ ಮೋದಿ ಹಾಗೂ ನೀರಾವರಿ ಸಚಿವರನ್ನು ಭೇಟಿ ಮಾಡಿ, ಮನವಿ ಮಾಡಲು ಮುಂದಾಗಿದ್ದಾರೆ.

English summary
Farmers delegation led by Former Justice Venkatachalaiah to meet PM Modi and discuss about the implementation of Kalasa Banduri Project. and resolve Mahadayi river water dispute soon. River water sharing dispute between Karnataka, Maharashtra and Goa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X