ಚಿನ್ನಾಭರಣ ಅಡವಿಟ್ಟು ಸಾಲ ಪಡೆದಿದ್ದ ರೈತ ಸಾವು: ಆರ್.ಅಶೋಕ್ ಗರಂ
ಮೈಸೂರು, ನವೆಂಬರ್ 05: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎರಡು ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರ ನಮ್ಮ ಪರವಾಗಿಲ್ಲ, ಬೆಳೆ ಹಾನಿಗೆ ಪರಿಹಾರ ಸಿಗಲ್ಲ, ನೀರಾವರಿ ಸೌಲಭ್ಯ ಸಿಗುವುದಿಲ್ಲ ಎಂಬ ಭಾವನೆ ರೈತರಲ್ಲಿ ಬಂದಿದೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಕ್ಕೆ ಸರ್ಕಾರವೇ ನೇರ ಕಾರಣ. ಇನ್ನೂ ಎಷ್ಟು ರೈತರು ಸಾಯಬೇಕೆಂದು ಸರ್ಕಾರ ಬಯಸುತ್ತಿದೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ರೈತರ ಪರವಾಗಿಲ್ಲ. ಎಲ್ಲ ಇಲಾಖೆಗಳ ಅನುದಾನದಲ್ಲಿ ದೊಡ್ಡ ಮಟ್ಟದ ಕಡಿತವಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು ಚಿನ್ನಾಭರಣ ಅಡಮಾನ ಇಟ್ಟು 11 ಲಕ್ಷ ರೂ. ಸಾಲ ಮಾಡಿದ್ದಾರೆ. ಉಳುಮೆ ಮಾಡಲು ಹೊರಟರೆ ಅರಣ್ಯಾಧಿಕಾರಿಗಳು ತಡೆದಿದ್ದಾರೆ. ಇಂತಹ ಘಟನೆ ನಡೆದರೂ ಸರ್ಕಾರ ನೆರವಿಗೆ ಬಂದಿಲ್ಲ ಎಂದರು.

ಈ ಸಾವಿಗೆ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಮುಖ್ಯಮಂತ್ರಿ ಕುರ್ಚಿಯ ಮ್ಯೂಸಿಕಲ್ ಚೇರ್ ಆಡಿಕೊಂಡು ಜನರ ಬದುಕನ್ನು ಬೀದಿಗೆ ತಂದಿದ್ದಾರೆ. ಇನ್ನೂ ಎಷ್ಟು ರೈತರ ಸಾವಿಗೆ ಈ ಸರ್ಕಾರ ಕಾಯುತ್ತಿದೆ? ಎಂದು ಪ್ರಶ್ನಿಸಿದರು. ಚಾಮರಾಜನಗರದಲ್ಲಿ ಕೆರೆ ನೀರು ತುಂಬಿಸುವ ಕೆಲಸ ಬಿಜೆಪಿಯಿಂದ ನಡೆದಿತ್ತು. ಎರಡು ವರ್ಷಗಳಿಂದ ಅಲ್ಲಿ ನೀರಾವರಿ ವ್ಯವಸ್ಥೆ ಮಾಡಿಲ್ಲ. ವನ್ಯಜೀವಿಗಳು ಸ್ಥಳೀಯರ ಮೇಲೆ ದಾಳಿ ಮಾಡುತ್ತಿವೆ. ಯಾವ ಇಲಾಖೆಗಳೂ ಜನರಿಗೆ ಅನುಕೂಲ ಮಾಡಿಕೊಟ್ಟಿಲ್ಲ ಎಂದರು.
ರಾಹುಲ್ ಗಾಂಧಿ ಅವರಿಗೆ ಗೆಲ್ಲುವ ಯೋಗ್ಯತೆ ಇಲ್ಲ. ಆದ್ದರಿಂದ ಅವರು ನೆಲ ಡೊಂಕು ಎಂದು ಹೇಳುತ್ತಿದ್ದಾರೆ. ಮತಯಂತ್ರವನ್ನು ಅವರೇ ಪರಿಚಯಿಸಿ ಈಗ ಅವರೇ ವಿರೋಧಿಸುತ್ತಿದ್ದಾರೆ. ಮತ ಕಳ್ಳತನವಾಗಿದ್ದರೆ ಕಾಂಗ್ರೆಸ್ಗೆ 136 ಸೀಟುಗಳು ಹೇಗೆ ಬಂತು? ಮಾಲೂರಿನಲ್ಲಿ ಮತ ಕಳ್ಳತನ ಆಗಿದೆ ಎಂದು ಎಲ್ಲರಿಗೂ ಗೊತ್ತಾಗಿದೆ. ರಾಜ್ಯ ಸರ್ಕಾರದಿಂದ ಒಳ್ಳೆಯ ಮೊತ್ತ ದೆಹಲಿಗೆ ಹೋಗಿದೆ. ಶೇ.60 ರಷ್ಟು ಕಮಿಶನ್ ಪಡೆಯಲಾಗುತ್ತಿದೆ ಎಂದು ದೂರಿದರು.
ತುಪ್ಪದ ಬೆಲೆ ಏರಿಕೆ ಜನರ ಮೇಲೆ ಹೊರೆ
ಏಕಾಏಕಿ ತುಪ್ಪದ ದರವನ್ನು 90 ರೂಪಾಯಿ ನಷ್ಟು ಹೆಚ್ಚಿಸಿದ್ದಾರೆ. ಆಲ್ಕೋಹಾಲ್, ಹಾಲಿನ ದರ ಏರಿಸಿದ ನಂತರ ತುಪ್ಪದ ದರವನ್ನೂ ಏರಿಸಿದ್ದಾರೆ. ಈವರೆಗೆ 65,000 ಕೋಟಿ ರೂಪಾಯಿಯಷ್ಟು ತೆರಿಗೆಯನ್ನು ಜನರ ಮೇಲೆ ಹೇರಿದ್ದಾರೆ. ಇದು ಪಾಪಿಗಳ ಸರ್ಕಾರ ಎಂದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications