ಚಿನ್ನಾಭರಣ ಅಡವಿಟ್ಟು ಸಾಲ ಪಡೆದಿದ್ದ ರೈತ ಸಾವು: ಆರ್.ಅಶೋಕ್ ಗರಂ
ಮೈಸೂರು, ನವೆಂಬರ್ 05: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎರಡು ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸರ್ಕಾರ ನಮ್ಮ ಪರವಾಗಿಲ್ಲ, ಬೆಳೆ ಹಾನಿಗೆ ಪರಿಹಾರ ಸಿಗಲ್ಲ, ನೀರಾವರಿ ಸೌಲಭ್ಯ ಸಿಗುವುದಿಲ್ಲ ಎಂಬ ಭಾವನೆ ರೈತರಲ್ಲಿ ಬಂದಿದೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಕ್ಕೆ ಸರ್ಕಾರವೇ ನೇರ ಕಾರಣ. ಇನ್ನೂ ಎಷ್ಟು ರೈತರು ಸಾಯಬೇಕೆಂದು ಸರ್ಕಾರ ಬಯಸುತ್ತಿದೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ರೈತರ ಪರವಾಗಿಲ್ಲ. ಎಲ್ಲ ಇಲಾಖೆಗಳ ಅನುದಾನದಲ್ಲಿ ದೊಡ್ಡ ಮಟ್ಟದ ಕಡಿತವಾಗಿದೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತ ಮಂಜೇಗೌಡ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು ಚಿನ್ನಾಭರಣ ಅಡಮಾನ ಇಟ್ಟು 11 ಲಕ್ಷ ರೂ. ಸಾಲ ಮಾಡಿದ್ದಾರೆ. ಉಳುಮೆ ಮಾಡಲು ಹೊರಟರೆ ಅರಣ್ಯಾಧಿಕಾರಿಗಳು ತಡೆದಿದ್ದಾರೆ. ಇಂತಹ ಘಟನೆ ನಡೆದರೂ ಸರ್ಕಾರ ನೆರವಿಗೆ ಬಂದಿಲ್ಲ ಎಂದರು.

ಈ ಸಾವಿಗೆ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಮುಖ್ಯಮಂತ್ರಿ ಕುರ್ಚಿಯ ಮ್ಯೂಸಿಕಲ್ ಚೇರ್ ಆಡಿಕೊಂಡು ಜನರ ಬದುಕನ್ನು ಬೀದಿಗೆ ತಂದಿದ್ದಾರೆ. ಇನ್ನೂ ಎಷ್ಟು ರೈತರ ಸಾವಿಗೆ ಈ ಸರ್ಕಾರ ಕಾಯುತ್ತಿದೆ? ಎಂದು ಪ್ರಶ್ನಿಸಿದರು. ಚಾಮರಾಜನಗರದಲ್ಲಿ ಕೆರೆ ನೀರು ತುಂಬಿಸುವ ಕೆಲಸ ಬಿಜೆಪಿಯಿಂದ ನಡೆದಿತ್ತು. ಎರಡು ವರ್ಷಗಳಿಂದ ಅಲ್ಲಿ ನೀರಾವರಿ ವ್ಯವಸ್ಥೆ ಮಾಡಿಲ್ಲ. ವನ್ಯಜೀವಿಗಳು ಸ್ಥಳೀಯರ ಮೇಲೆ ದಾಳಿ ಮಾಡುತ್ತಿವೆ. ಯಾವ ಇಲಾಖೆಗಳೂ ಜನರಿಗೆ ಅನುಕೂಲ ಮಾಡಿಕೊಟ್ಟಿಲ್ಲ ಎಂದರು.
ರಾಹುಲ್ ಗಾಂಧಿ ಅವರಿಗೆ ಗೆಲ್ಲುವ ಯೋಗ್ಯತೆ ಇಲ್ಲ. ಆದ್ದರಿಂದ ಅವರು ನೆಲ ಡೊಂಕು ಎಂದು ಹೇಳುತ್ತಿದ್ದಾರೆ. ಮತಯಂತ್ರವನ್ನು ಅವರೇ ಪರಿಚಯಿಸಿ ಈಗ ಅವರೇ ವಿರೋಧಿಸುತ್ತಿದ್ದಾರೆ. ಮತ ಕಳ್ಳತನವಾಗಿದ್ದರೆ ಕಾಂಗ್ರೆಸ್ಗೆ 136 ಸೀಟುಗಳು ಹೇಗೆ ಬಂತು? ಮಾಲೂರಿನಲ್ಲಿ ಮತ ಕಳ್ಳತನ ಆಗಿದೆ ಎಂದು ಎಲ್ಲರಿಗೂ ಗೊತ್ತಾಗಿದೆ. ರಾಜ್ಯ ಸರ್ಕಾರದಿಂದ ಒಳ್ಳೆಯ ಮೊತ್ತ ದೆಹಲಿಗೆ ಹೋಗಿದೆ. ಶೇ.60 ರಷ್ಟು ಕಮಿಶನ್ ಪಡೆಯಲಾಗುತ್ತಿದೆ ಎಂದು ದೂರಿದರು.
ತುಪ್ಪದ ಬೆಲೆ ಏರಿಕೆ ಜನರ ಮೇಲೆ ಹೊರೆ
ಏಕಾಏಕಿ ತುಪ್ಪದ ದರವನ್ನು 90 ರೂಪಾಯಿ ನಷ್ಟು ಹೆಚ್ಚಿಸಿದ್ದಾರೆ. ಆಲ್ಕೋಹಾಲ್, ಹಾಲಿನ ದರ ಏರಿಸಿದ ನಂತರ ತುಪ್ಪದ ದರವನ್ನೂ ಏರಿಸಿದ್ದಾರೆ. ಈವರೆಗೆ 65,000 ಕೋಟಿ ರೂಪಾಯಿಯಷ್ಟು ತೆರಿಗೆಯನ್ನು ಜನರ ಮೇಲೆ ಹೇರಿದ್ದಾರೆ. ಇದು ಪಾಪಿಗಳ ಸರ್ಕಾರ ಎಂದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications