ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮುಖವಾಡ ಕಳಚಿತು
ಬೆಂಗಳೂರು, ಜ 26: ಕೇಂದ್ರದ ನೂತನ ಕೃಷಿ ಕಾಯ್ದೆ ವಿರುದ್ದ ನವದೆಹಲಿಯಲ್ಲಿ ನಡೆಯುತ್ತಿರುವ ಕಿಸಾನ್ ಗಣತಂತ್ರ ಪೆರೇಡ್ ನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಒಬ್ಬ ಹೋರಾಟಗಾರ ಪ್ರತಿಭಟನೆಯಲ್ಲಿ ಮೃತ ಪಟ್ಟಿದ್ದರೆ, ಹಲವಾರು ಪೊಲೀಸರು ಗಾಯಗೊಂಡಿದ್ದಾರೆ.
ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜದ ಜೊತೆಗೆ ರೈತರದ್ದು ಎಂದು ಹೇಳಲಾಗುವ ಧ್ವಜ ಹಾರಾಡಿದೆ. ಇದು, ದೇಶದೆಲ್ಲಡೆ ವ್ಯಾಪಕ ಪರವಿರೋಧ ಚರ್ಚೆಗೆ ಕಾರಣವಾಗಿದೆ.
ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, "ನಿಜವಾದ ರೈತರು ಈ ಕೂಡಲೇ ದೆಹಲಿ ನಗರವನ್ನು ಬಿಟ್ಟು ಗಡಿಗೆ ಬನ್ನಿ"ಎನ್ನುವ ಮೂಲಕ, ಈ ಪ್ರತಿಭಟನೆಯಲ್ಲಿ ಭಾಗವಹಿಸಿದ ರೈತರ ಜೊತೆಗೆ, ಇನ್ಯಾರಾದರೂ ಕೈಜೋಡಿಸಿದ್ದಾರಾ ಎನ್ನುವ ಬಲವಾದ ಸಂದೇಹ ಎದುರಾಗಿದೆ.
ಕೆಂಪುಕೋಟೆಯಲ್ಲಿ ಇಂದು ನಡೆದ ಘಟನೆಯನ್ನು ಪಕ್ಷಾತೀತವಾಗಿ ಎಲ್ಲರೂ ವಿರೋಧಿಸಿದರೂ, ಇದಕ್ಕೆ ಕೇಂದ್ರದ ವಿಳಂಬ ಧೋರಣೆಯೇ ಕಾರಣ ಎಂದಿದ್ದಾರೆ. ಇನ್ನು, ಇಂದಿನ ಘಟನೆಗೆ ರಾಜ್ಯ ಬಿಜೆಪಿ ನಾಯಕರ ಪ್ರತಿಕ್ರಿಯೆ ಹೀಗಿದೆ:

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್
"ದೆಹಲಿಯಲ್ಲಿ ನಡೆದ ಗಲಭೆ ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮುಖವಾಡವನ್ನು ಕಳಚಿದೆ. ಅನ್ನ ನೀಡುವ ರೈತ ಭೂತಾಯಿಯಷ್ಟೇ ಸಹನಾಮಯಿ. ನೇಗಿಲ ಹಿಡಿಯುವ ಯೋಗಿ ಎಂದೂ ಅಸ್ತ್ರ ಹಿಡಿಯುವುದಿಲ್ಲ. ತುತ್ತು ನೀಡುವ ಅನ್ನದಾತ ಎಂದೂ ನೆತ್ತರು ಹರಿಸುವುದಿಲ್ಲ. ದೇಶದ ಬೆನ್ನೆಲುಬಾಗಿರುವ ಕೃಷಿಕ ಎಂದೂ ದೇಶ ತಲೆತಗ್ಗಿಸುವ ಕೆಲಸ ಮಾಡಲಾರ" - ಡಾ.ಸುಧಾಕರ್.

ಸಚಿವ ಸುರೇಶ್ ಕುಮಾರ್
"ದೆಹಲಿ ಪ್ರತಿಭಟನೆ ರೈತರದಲ್ಲ, ಕೇವಲ ಆ ಕಾಯ್ದೆಗಳ ವಿರುದ್ಧ ವಲ್ಲ ಎಂದು ಇಂದು ಬಯಲಾಯಿತು. ಉದ್ದೇಶ ಕ್ಕಿಂತ ದುರುದ್ದೇಶ ಎದ್ದು ಕಾಣುತ್ತಿದೆ"ಎಂದು ಪ್ರಾಥಮಿಕ ಮತ್ತು ಸೆಕೆಂಡರಿ ಶಿಕ್ಷಣ ಖಾತೆಯ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಕೃಷಿ ಖಾತೆಯ ಸಚಿವ ಬಿ.ಸಿ.ಪಾಟೀಲ್
"ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವವರು ರೈತರಲ್ಲ, ಭಯೋತ್ಪಾದಕರು. ಈ ಪ್ರತಿಭಟನಾಕಾರರಿಗೆ ಬೇರೆ ದೇಶಗಳ ಜೊತೆಗೆ ಪಾಕಿಸ್ತಾನದ ಕುಮ್ಮುಕ್ಕು ಇದೆ. ಕೆಂಪುಕೋಟೆಯಲ್ಲಿ ಗಲಾಟೆ ಮಾಡುತ್ತಾರೆ ಎಂದರೆ ಇವರಿಗೆ ಉಗ್ರರ ಬೆಂಬಲ ಎಷ್ಟಿದೆ ಎನ್ನುವುದು ಗೊತ್ತಾಗುತ್ತದೆ"ಎಂದು ಕೃಷಿ ಖಾತೆಯ ಸಚಿವ ಬಿ.ಸಿ.ಪಾಟೀಲ್ ಟೀಕಿಸಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ
"ಪ್ರತಿಭಟನಾಕಾರರು ಖಂಡಿತವಾಗಿಯೂ ಅನ್ನದಾತರಲ್ಲ. ರೈತರ ಸೋಗಿನಲ್ಲಿ ಇರುವ ಇವರು ದೇಶದ್ರೋಹಿಗಳು. ಇಂದು ನಡೆದ ಎಲ್ಲಾ ಹಿಂಸಾಚಾರಕ್ಕೆ ಅವರನ್ನೇ ಜವಾಬ್ದಾರಿಯನ್ನಾಗಿಸಬೇಕು"ಎಂದು ಉಡುಪಿ -ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.

ಸಂಸದ ಎಸ್.ಮುನಿಸ್ವಾಮಿ
"ರೈತರ ಹೆಸರಿನಲ್ಲಿ ಉಗ್ರ ಹೋರಾಟ ಮಾಡುತ್ತಿರುವವರು ರೈತರಲ್ಲ. ನಿಜವಾದ ರೈತ ಹೋರಾಟಗಾರರು ಪೋಲಿಸರು ಮೇಲೆ ಟ್ರಾಕ್ಟರ್ ಹರಿಸುವುದು, ಹಲ್ಲೆ ಮಾಡುವುದು, ಬಸ್ ಗಳನ್ನು ಧ್ವಂಸ ಮಾಡುವ ಸ್ಥಿತಿಗೆ ಹೋಗುವುದಿಲ್ಲ. ದೆಹಲಿಯ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದವರು ದೇಶದ್ರೋಹಿಗಳು" ಎಂದು ಕೋಲಾರ ಸಂಸದ ಎಸ್.ಮುನಿಸ್ವಾಮಿ ವಾಗ್ದಾಳಿ ನಡೆಸಿದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications