ರೈತರು ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಬಾರದು: ಗೌಡರ ಕಿವಿಮಾತು
ರೈತರು ಕೇವಲ ಕೃಷಿ ಅಥವಾ ಮಳೆಯನ್ನು ಮಾತ್ರ ಆಧರಿಸದೇ ಇತರ ಕೆಲಸಗಳನ್ನು ರೂಢಿಸಿಕೊಳ್ಳಬೇಕೆಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕರೆ ನೀಡಿದ್ದಾರೆ. ಚಿಕ್ಕಮಗಳೂರನ ಬೀರೂರಿನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಡಿಸಿಸಿ ಬ್ಯಾಂಕ್ ನ ಶಾಖೆಯ ಕಟ್ಟಡ
ಚಿಕ್ಕಮಗಳೂರು, ಜೂನ್ 10: ರಾಜ್ಯದ ರೈತರು ಕುಲಕಸುಬಾಗಿ ಬಂದಿರುವ ತಮ್ಮ ಕೃಷಿಯ ಮೇಲೇ ಹೆಚ್ಚು ಅವಲಂಬಿತವಾಗದೆ ಇತರ ಕೆಲಸ ಹಾಗೂ ಕೆಲವು ಉಪ ಕಸುಬುಗಳನ್ನು ರೂಢಿಸಿಕೊಳ್ಳಬೇಕೆಂದು ಜೆಡಿಎಸ್ ಪಕ್ಷದ ಧುರೀಣ ಎಚ್.ಡಿ. ದೇವೇಗೌಡರು ಕಿವಿಮಾತು ಹೇಳಿದ್ದಾರೆ.
ಚಿಕ್ಕಮಗಳೂರಿನ ಬೀರೂರಿನಲ್ಲಿ ಡಿಸಿಸಿ ಬ್ಯಾಂಕ್ ನ ನೂತನ ಶಾಖೆಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ''ಪ್ರತಿಯೊಬ್ಬ ರೈತರಿಗೂ ಬೆಳೆ ನಷ್ಟವಾದಾಗ ವಿಮೆ ಕಟ್ಟಲಿ , ಕಟ್ಟದಿರಲಿ ಪರಿಹಾರ ಸಿಗಬೇಕೆಂಬ ಆಶಯವಿರುತ್ತದೆ. ಆದರೂ, ರೈತರು ಮಳೆ ಹಾಗೂ ಕೃಷಿಯನ್ನು ಮಾತ್ರ ಆಶ್ರಯಿಸದೇ ಇತರ ಕೆಲಸಗಳನ್ನೂ ರೂಢಿಸಿಕೊಂಡು ಬದುಕು ಕಟ್ಟಿಕೊಳ್ಳಬೇಕು'' ಎಂದು ಆಶಿಸಿದರು.

ಇದೇ ವೇಳೆ, ರೈತರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ''ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ರೈತರ ಹೋರಾಟ ತಾರಕಕ್ಕೇರಿದೆ. ದೇಶದ ಅಲ್ಲಲ್ಲಿ ಸಾಲಮನ್ನಾಕ್ಕಾಗಿ ಹೋರಾಟ ನಡೆಯುತ್ತಿವೆ. ನಮ್ಮ ರಾಜ್ಯದಲ್ಲಿ ಹಾಸನ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಸೇರಿದಂತೆ ಅನೇಕ ಭಾಗಗಳಲ್ಲಿ ಬೆಳೆ ನಷ್ಟವಾಗಿದೆ. ಆದರೆ ಸರ್ಕಾರಕ್ಕೆ ಬೆಳೆ ಪರಿಹಾರ ನೀಡಲು ಮನಸ್ಸಿಲ್ಲ'' ಎಂದು ಬೇಸರಿಸಿದರು.
ಇದೇ ವೇಳೆ, ರೈತ ವಿರೋಧಿ ನೀತಿಗಳನ್ನು ವಿರೋಧಿಸಿದ ಅವರು, ಯಾವುದೇ ದೇಶವಾಗಲೀ, ಸರ್ಕಾರವಾಗಲಿ ರೈತರನ್ನು, ಕೃಷಿಯನ್ನು ತಾತ್ಸಾರದಿಂದ ಕಂಡರೆ ಅಂಥ ದೇಶ, ಸರ್ಕಾರಗಳು ಸರ್ವನಾಶವಾಗುವುದು ಖಂಡಿತ ಎಂದು ಎಚ್ಚರಿಸಿದರು.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications