ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿ ಭರವಸೆ, ರೈತರ ಮುಷ್ಕರ ವಾಪಸ್

By Gururaj
|
Google Oneindia Kannada News

Recommended Video

ಎಚ್ ಡಿ ಕುಮಾರಸ್ವಾಮಿ ಭರವಸೆಯಿಂದ ರೈತರ ಮುಷ್ಕರ ವಾಪಾಸ್ | Oneindia Kannada

ಬೆಂಗಳೂರು, ಜುಲೈ 11 : ಮಹದಾಯಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ರೈತರು ಹಮ್ಮಿಕೊಂಡಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ಮುಖ್ಯಮಂತ್ರಿಗಳು ಸಮಸ್ಯೆ ಬಗೆಹರಿಸಲು 1 ತಿಂಗಳ ಗಡುವು ಕೇಳಿದ್ದಾರೆ.

ಬುಧವಾರದಿಂದ ಉತ್ತರ ಕರ್ನಾಟಕ ಭಾಗದ ರೈತರು ಮಹದಾಯಿ ವಿವಾದ ಬಗೆಹರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ವಿಧಾನಸೌಧದಲ್ಲಿ ರೈತರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದರು.

ರೈತರ ಆಕ್ರೋಶವನ್ನು ಶಮನಗೊಳಿಸುತ್ತಾರಾ ಕುಮಾರಸ್ವಾಮಿ?ರೈತರ ಆಕ್ರೋಶವನ್ನು ಶಮನಗೊಳಿಸುತ್ತಾರಾ ಕುಮಾರಸ್ವಾಮಿ?

ಮಾಜಿ ಶಾಸಕ ಕೋನರೆಡ್ಡಿ ನೇತೃತ್ವದಲ್ಲಿ ರೈತ ನಾಯಕರ ನಿಯೋಗದ ಜೊತೆ ಎಚ್.ಡಿ.ಕುಮಾರಸ್ವಾಮಿ ಸಭೆ ನಡೆಸಿದರು. ರೈತರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು 1 ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು.

ವೈರಲ್ ವಿಡಿಯೋ:ರೈತರೂ ಕೋಟ್ಯಧಿಪತಿಗಳಾಗಬಹುದು ಅಂತಾರೆ ರಾಯಚೂರಿನ ಕವಿತಾವೈರಲ್ ವಿಡಿಯೋ:ರೈತರೂ ಕೋಟ್ಯಧಿಪತಿಗಳಾಗಬಹುದು ಅಂತಾರೆ ರಾಯಚೂರಿನ ಕವಿತಾ

Farmers withdraw strike after meeting HD Kumaraswamy

ಒಂದು ತಿಂಗಳಿನಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ ಹಿನ್ನಲೆಯಲ್ಲಿ ರೈತರು ಮುಷ್ಕರವನ್ನು ವಾಪಸ್ ಪಡೆದರು. ಉತ್ತರ ಕರ್ನಾಟಕದ 4 ಜಿಲ್ಲೆಗಳ ರೈತರು ಫ್ರೀಡಂಪಾರ್ಕ್‌ನಲ್ಲಿ ಇಂದಿನಿಂದ ಪ್ರತಿಭಟನೆ ಆರಂಭಿಸಿದ್ದರು.

ಬೆಂಗಳೂರಲ್ಲಿ ರೈತರಿಂದ ಬೃಹತ್ ಪ್ರತಿಭಟನೆ, ಬಂಧನಬೆಂಗಳೂರಲ್ಲಿ ರೈತರಿಂದ ಬೃಹತ್ ಪ್ರತಿಭಟನೆ, ಬಂಧನ

ಮಹದಾಯಿ ವಿವಾದ ಬಗೆಹರಿಸುವ ಕುರಿತು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಎಂದು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆದರೆ, ಸಭೆ ನಡೆಯಲಿಲ್ಲ.

ಈಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಹಾರಾಷ್ಟ್ರ, ಗೋವಾ ಮುಖ್ಯಮಂತ್ರಿಗಳ ಜೊತೆ ಸಮಸ್ಯೆ ಬಗೆಹರಿಸಲು ಸಭೆ ನಡೆಸುವರೇ? ಕಾದು ನೋಡಬೇಕು.

English summary
The farmers from North Karnataka withdrew their strike on July 11, 2018 after meeting with Chief Minister H.D.Kumaraswamy. Farmers demanded to implement Mahadayi project. Kumaraswamy seeks one month time to meet farmers demands.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X