ಟಪಾಲಿಗೆ ಮಣಿದ ಸರಕಾರ: ಹಿರೇಮಠ್ ವಿರುದ್ಧವೇ ತನಿಖೆ

ಸಚಿವ ಸಂತೋಷ್ ಲಾಡ್ ಅಕ್ರಮ ಗಣಿಗಾರಿಕೆ ನಡೆಸಿದ್ದಾರೆಂದು ಹಿರೇಮಠ್ ಅವರು ಕಂತುಕಂತುಗಳಲ್ಲಿ ದಾಖಲೆಗಳನ್ನು ಮಂಡಿಸುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಹಠಹಿಡಿದು ಸಿಎಂ ಸಿದ್ದು ಮಗುಮ್ಮಾಗಿ ಕುಳಿತಿದ್ದಾರೆ.
ಆದರೆ ಬಳ್ಳಾರಿಯ ಗಣಿ ಉದ್ಯಮಿ ಟಪಾಲ್ ಗಣೇಶ್ ಅ. 24ರಂದು ಪತ್ರಿಕಾಗೋಷ್ಠಿ ನಡೆಸಿ, ಬಾಯಿಮಾತಿನಲ್ಲಿ ಸಲ್ಲಿಸಿದ್ದ ದಾಖಲೆಗಳನ್ನೇ ಮುಂದಿಟ್ಟುಕೊಂಡು ಹಿರೇಮಠ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.
ಎಫ್ ಸಿಆರ್ ಎ ನಿಯಮಗಳನ್ನು ಉಲ್ಲಂಘಿಸಿ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂಬುದು ಎಸ್ಆರ್ ಹಿರೇಮಠ್ ವಿರುದ್ಧ ಕೇಳಿಬಂದಿರುವ ಆರೋಪ.
ಟಪಾಲ್ ಗಣೇಶ್ ದೂರೇನು?:
ಸಮಾಜ ಪರಿವರ್ತನಾ ಸಮುದಾಯದ (ಸಪಸ) NGO ಸಂಸ್ಥೆಯು ವಿದೇಶಿ ಹಣವನ್ನು ಪಡೆದು ಎಫ್ ಸಿಆರ್ ಎ ನಿಯಮವನ್ನು ಉಲ್ಲಂಘಿಸಿದೆ. ಸಂಸ್ಥೆಯ ಲೆಕ್ಕ ಪರಿಶೋಧಕರ ವರದಿಯಲ್ಲಿ 2006-07ರಿಂದ 15.79 ಲಕ್ಷ ರೂ. ಹಣ ವಿವಿಧ ರೀತಿಯಲ್ಲಿ ದುರುಪಯೋಗವಾಗಿದೆ ಎಂದು ಉಲ್ಲೇಖಿಸಿದ್ದು, ಹಿರೇಮಠ್ ಅವರು ಹಣವನ್ನು ಡಿಪಾಜಿಟ್ ಮಾಡಿದ್ದಾರೆ. ವಿದೇಶಿ ಹಣ ದುರುಪಯೋಗದ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಿ ಸಿಬಿಐ ತನಿಖೆ ನಡೆಸಬೇಕಾಗುತ್ತದೆ.
ಸಂಸ್ಥೆಯಲ್ಲಿ ಹಣಕಾಸು ಅವ್ಯವಹಾರ ನಡೆದಿದ್ದು, ಸಂಸ್ಥೆಯ ಎಲ್ಲಾ ಹಣಕಾಸು ವ್ಯವಹಾರಗಳನ್ನು ತನಿಖೆಗೆ ಒಳಪಡಿಸಬೇಕು - ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಟಪಾಲ್ ಗಣೇಶ್ ಕಳೆದ ಶುಕ್ರವಾರ ಮನವಿ ಸಲ್ಲಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಖ್ಯೆ ಸಿಎಂ 66747/ ಆರ್ಇಪಿ-ಜಿಇಎನ್/ 2013ರಲ್ಲಿ 'ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆ ಧಾರವಾಡ ಇವರು Foreign Contribution (Regulation) Act - FCRA ಉಲ್ಲಂಘಿಸಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅವರಿಗೆ ಆದೇಶ ನೀಡಿದ್ದರು. ಸದರಿ ಆದೇಶವನ್ನು ಮುಖ್ಯಮಂತ್ರಿಯ ಅಧೀನ ಕಾರ್ಯದರ್ಶಿ ಆಂಡ್ರೂಸ್ ಅವರು ಅ. 25 (ಮನವಿ ಸಲ್ಲಿಸಿದ ಮಾರನೇ ದಿನ) ರಂದು ಸಹಕಾರ ಇಲಾಖೆಯ ಮುಖ್ಯಕಾರ್ಯದರ್ಶಿಗೆ ಸೂಕ್ತ ತನಿಖೆಗೆ ಸೂಚಿಸಿ ಆದೇಶ ರವಾನಿಸಿದ್ದಾರೆ.
-
ಅಸ್ತಿತ್ವಕ್ಕಾಗಿ ಬಿಜೆಪಿ ಸೇರ್ಪಡೆ: ವಿರೋಧ ಪಕ್ಷಗಳ ಮೇಲೆ ಸಿದ್ದರಾಮಯ್ಯರ ಕಿಡಿ -
ಬಾಗಲಕೋಟೆಗೆ ಸಿದ್ದರಾಮಯ್ಯ ದ್ರೋಹ ಮಾಡಿದ್ರೆ ಪಕ್ಷ ಮತ್ತೆ ಗೆಲ್ಲುತ್ತಿತ್ತೇ? ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ತಿರುಗೇಟು -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ದಕ್ಷಿಣ ಭಾರತದ ಧ್ವನಿ ಅಡಗಿಸುವ ಪಿತೂರಿ: ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ












Click it and Unblock the Notifications