ಎಸಿಬಿ ದಾಳಿಗೆ ಹೆದರಿ ಲಕ್ಷ ಲಕ್ಷ ನೋಟು ಹರಿದು ಕಮೋಡ್ ನಲ್ಲಿ ಹಾಕಿದ ಅಧಿಕಾರಿ
ಗಂಗಾವತಿ, ಮಾ 10: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ದಾಳಿಯ ಮುನ್ಸೂಚನೆ ಅರಿತ ನೀರಾವರಿ ಇಲಾಖೆ ಅಧಿಕಾರಿಯೊಬ್ಬರು ಲಕ್ಷ ಲಕ್ಷ ರೂಪಾಯಿ ನೋಟನ್ನು ಹರಿದು ಕಮೋಡ್ ನಲ್ಲಿ ಹಾಕಿದ ಘಟನೆ ಗಂಗಾವತಿಯಲ್ಲಿ ನಡೆದಿದೆ.
ಬೆಂಗಳೂರು, ಉಡುಪಿ, ಕಡೂರು, ಕೋಲಾರ, ಗಂಗಾವತಿ ಸೇರಿದಂತೆ ರಾಜ್ಯದ ವಿವಿಧ 36ಸ್ಥಳಗಳಲ್ಲಿ ಎಸಿಬಿ ಬೆಳ್ಳಂಬೆಳಗ್ಗೇ ದಾಳಿ ನಡೆಸಿತ್ತು. ಕೊಪ್ಪಳ ಜಿಲ್ಲಾ ಕುಡಿಯುವ ನೀರು ಮತ್ತು ನೈರ್ಮಲ್ಯ ಎಂಜಿನಿಯರಿಂಗ್ ವಿಭಾಗದ ಅಧಿಕಾರಿ ವಿಜಯ್ ಕುಮಾರ್ ಅವರ ಮನೆಯ ಮೇಲೂ ಎಸಿಬಿ ದಾಳಿ ನಡೆಸಿತ್ತು.
ದಾಳಿಯಾಗುವ ಸಾಧ್ಯತೆಯನ್ನು ಅರಿತ ಈ ಅಧಿಕಾರಿ ಐದು ಲಕ್ಷ ರೂಪಾಯಿ ನಗದು ಹಣವನ್ನು ಹರಿದುಹಾಕಿ ಕಮೋಡಿಗೆ ಹಾಕಿದ್ದಾರೆ. ಈ ವಿಚಾರ ಎಸಿಬಿ ಅಧಿಕಾರಿಗಳ ಗಮನಕ್ಕೆ ಬಂದಿದೆ, ಕೂಡಲೇ ತಪಾಸಣೆ ಆರಂಭಿಸಿದ ಅಧಿಕಾರಿಗಳು ಒಳಚರಂಡಿ ಕನೆಕ್ಷನ್ ಬಂದ್ ಮಾಡಿಸಿದ್ದಾರೆ.

ಶುಕ್ರವಾರ (ಮಾ 9) ರಾಜ್ಯದ ವಿವಿದೆಡೆ ನಡೆದ ದಾಳಿಯ ವೇಳೆ, ಅಧಿಕಾರಿಗಳಿಂದ ಭಾರೀ ಮೊತ್ತದ ಹಣ, ಅಕ್ರಮ ಆಸ್ತಿಪತ್ರಗಳು ಲಭ್ಯವಾಗಿವೆ ಎನ್ನುವ ಮಾಹಿತಿಯಿದೆ. ದಾಳಿ ನಡೆದ ಎಲ್ಲಾ ಕಡೆ ಆದಾಯಕ್ಕಿಂತ ಹೆಚ್ಚು ಅಗಾಧ ಪ್ರಮಾಣದಲ್ಲಿ ಆಸ್ತಿ, ನಗದು ಪತ್ತೆಯಾಗಿದೆ.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಅಕ್ರಮ ಆಸ್ತಿ ಗಳಿಕೆ ದೂರಿನ ಮೇಲೆ ಮಂಗಳೂರಿನ ಡಿವೈಎಸ್ಪಿ ವಿನೋದ್, ಉಡುಪಿಯಲ್ಲಿರುವ ಅಬಕಾರಿ ಉಪ ಅಧೀಕ್ಷಕ ವಿನೋದ್ ಕಚೇರಿ ಮೇಲೂ ಎಸಿಬಿ ದಾಳಿ ನಡೆಸಿತ್ತು.
ಕೋಲಾರದ ಮುಳಬಾಗಲು ವ್ಯಾಪ್ತಿಯ ಗ್ರಾಮೀಣ ನೈರ್ಮಲ್ಯ ಮತ್ತು ಕುಡಿಯುವ ನೀರು ಇಲಾಖೆ ಎಇಇ ಅಪ್ಪಿರೆಡ್ಡಿ, ಬೆಳಗಾವಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ವಿಶೇಷ ಭೂ ಸ್ವಾಧೀನ ಅಧಿಕಾರಿ ರಾಜೇಶ್ವರಿ ಜೈನಾಪುರ, ಕೊಪ್ಪಳದ ಜಿಲ್ಲಾ ಪಂಚಾಯಿತಿ ಕಚೇರಿ ಎಇಇ ವಿಜಯ್ ಕುಮಾರ್.
ಕಡೂರು ತಾಲ್ಲೂಕು ಕೃಷಿ ಇಲಾಖೆ ನಿರ್ದೇಶಕ ಶಿವಕುಮಾರ್,ಚಿಕ್ಕಮಗಳೂರಿನ ಆರ್.ಟಿ.ಓ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ವೀರೂಪಾಕ್ಷ ಕೆ.ಸಿ ಮುಂತಾದವರ ಮನೆ ಮತ್ತು ಕಚೇರಿಯ ಮೇಲೆ ಎಸಿಬಿ ಶುಕ್ರವಾರ ದಾಳಿ ನಡೆಸಿತ್ತು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications