Breaking: ಕೋವಿಡ್ BF7: ಹೊಸ ವರ್ಷಾಚರಣೆಗೆ ಬೀಳಲಿದೆಯೇ ಬ್ರೇಕ್?, ಆರೋಗ್ಯ ಸಚಿವರು ಹೇಳಿದ್ದೇನು?
ಬೆಂಗಳೂರು, ಡಿಸೆಂಬರ್ 23: ಕೋವಿಡ್ ಉಪತಳಿ ಬಿಎಫ್7 ಆರ್ಭಟ ಎಲ್ಲೆಡೆ ಕೇಳಿ ಬರುತ್ತಿದೆ. ಇತ್ತ ಸಮೀಪಿಸುತ್ತಿರುವ ಹೊಸ ವರ್ಷಾಚರಣೆಯ ಸಂಭ್ರಮಾಚರಣೆಯಲ್ಲಿ ತೊಡಗಲು ಕರ್ನಾಟಕದ ಜನರು ಉತ್ಸುಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು ಮೂರುದಿನಗಳಲ್ಲಿ ಮೂರು ನಾಲ್ಕು ದಿನಗಳಲ್ಲಿ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಕಳೆದ ಎರಡು ವರ್ಷ ರಾಜ್ಯದಲ್ಲಿ ಹಬ್ಬ ಹರಿದಿನಗಳು, ಕ್ರಿಸ್ಮಸ್, ಹೊಸ ವರ್ಷಾಚರಣೆಗಳಿಗೆ ಬ್ರೇಕ್ ಬಿದ್ದಿತ್ತು. ಅತ್ಯಂತ ಸರಳವಾಗಿ ಆಚರಣೆ ಮಾಡುವಂತೆ ಸೂಚಿಸಿದ್ದ ಸರ್ಕಾರ ಅನೇಕ ನಿಯಮಗಳನ್ನು ಹೇರಿತ್ತು. ಆದರೆ ಈ ವರ್ಷ ಕೊರೊನಾ ಸಂಪೂರ್ಣವಾಗಿ ತಗ್ಗಿದೆ ಎಂದು 2023 ಹೊಸ ವರ್ಷವನ್ನು ವಿಜೃಂಭಣೆಯಿಂದ ಬರಮಾಡಿಕೊಳ್ಳಲು ಕಾತರರಾಗಿದ್ದು ಜನರಿಗೆ ಕೊರೊನಾ ಮಹಾಮಾರಿ ಮತ್ತೆ ಸಂಕಷ್ಟ ತಂದೊಡ್ಡುವ ಸೂಚನೆ ನೀಡಿದೆ.
ಚೀನಾ ಮೂಲದ ವೈರಸ್ ಭಾರತದಲ್ಲಿ ಕಂಡು ಬಂದಿದ್ದು, ಕರ್ನಾಟಕದಲ್ಲೂ ಮುನ್ನೆಚ್ಚರಿಕೆ ವಹಿಸಲಾಗಿದೆ. ಡಿಸೆಂಬರ್ 25 ಕ್ರಿಸ್ಮಸ್ ನಂತರ ಹೊಸ ವರ್ಷಾಚರಣೆ ಜನರು ಗುಂಪು ಗುಂಪಾಗಿ ಕೂಡಿ ಸಂಭ್ರಮಿಸುವುದು ರೂಢಿ. ಈ ಹಿನ್ನೆಲೆಯಲ್ಲಿ ಮುಂದಿನ 2-3 ದಿನ ಪರಿಸ್ಥಿತಿ ನೋಡಿಕೊಂಡು ಹೊಸ ವರ್ಷಕ್ಕೆ ಜನರಿಗೆ ಮಾರ್ಗದರ್ಶನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆ ನೇತೃತ್ವದಲ್ಲಿ ನಡೆದ ರಾಜ್ಯಗಳ ಆರೋಗ್ಯ ಸಚಿವರ ಜೊತೆಗಿನ ಸಭೆ ನಂತರ ಈ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಡಾ.ಕೆ.ಸುಧಾಕರ್ ಉತ್ತರಿಸಿದರು. ಕೊರೊನಾ ಸಂಪೂರ್ಣವಾಗಿ ತಗ್ಗಿಲ್ಲ. ಇದೀಗ ಚೀನಾ, ಜರ್ಮನಿ, ಜಪಾನ್ ಅಮೆರಿಕಾ ಸೇರಿದಂತೆ ಹತ್ತು ದೇಶಗಳಲ್ಲಿ ಸೋಂಕು ಭಾಧಿಸುತ್ತಿದೆ. ಭಾರತದಲ್ಲೂ ಓಮಿಕ್ರಾನ್ ಉಪತಳಿ ಬಿಎಫ್7 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ದಾಖಲಾತಿ ತೀರಾ ಕಡಿಮೆ ಇದೆ ಎಂದರು.

ಹೊಸ ವರ್ಷದ ಆಚರಣೆ ವೇಳೆ ಭಾಗವಹಿಸುವವರು ಆರೋಗ್ಯದ ಕಡೆಗೆ ವಿಶೇಷ ಗಮನ ಹರಿಸಬೇಕು. ಗುಂಪು ಗೂಡುವುದು ಆದಷ್ಟು ಬಿಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವ ಜೊತೆಗೆ ಕೂಡಲೇ ಲಸಿಕೆ ಪಡೆಯಿರಿ. ಸದ್ಯಕ್ಕೆ ಕೊರೊನಾ ತಪಾಸಣೆ, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯದ ಮಾರ್ಗಸೂಚಿಗಳೇ ಪಾಲನೆ ಮಾಡಬೇಕಿದೆ ಎಂದು ಹೇಳಿದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications