ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆ.19ರಂದು ಕರ್ನಾಟಕ ಬಂದ್ ಇಲ್ಲ : ವಾಟಾಳ್ ನಾಗರಾಜ್

|
Google Oneindia Kannada News

ಬೆಂಗಳೂರು, ಫೆಬ್ರವರಿ 17 : ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದ್ದ ಕರ್ನಾಟಕ ಬಂದ್ ಮುಂದೂಡಲಾಗಿದೆ. ಫೆ. 19ರಂದು ಕರ್ನಾಟಕ ಬಂದ್ ನಡೆಸುವುದಾಗಿ ಅವರು ಹೇಳಿದ್ದರು.

ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ವಾಟಾಳ್ ನಾಗರಾಜ್, 'ಮಹಾಕುಂಭಮೇಳವಿದೆ ಆದ್ದರಿಂದ ಜನರಿಗೆ ತೊಂದರೆಯಾಗುತ್ತದೆ. ಆದ್ದರಿಂದ, ಕರ್ನಾಟಕ ಬಂದ್ ದಿನಾಂಕ ಮುಂದೂಡಲಾಗಿದೆ' ಎಂದು ಹೇಳಿದರು.

ಯೋಧರ ಮೇಲೆ ಉಗ್ರರ ದಾಳಿ ಖಂಡಿಸಿ ಫೆ.19 ರಂದು ಕರ್ನಾಟಕ ಬಂದ್ಯೋಧರ ಮೇಲೆ ಉಗ್ರರ ದಾಳಿ ಖಂಡಿಸಿ ಫೆ.19 ರಂದು ಕರ್ನಾಟಕ ಬಂದ್

February 19 Karnataka bandh postponed

'ಫೆ.19ರ ಮಂಗಳವಾರ ಕರ್ನಾಟಕ ಬಂದ್ ನಡೆಸುವುದಿಲ್ಲ. ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಕರಾಳ ದಿನಾಚರಣೆ ನಡೆಸುತ್ತೇವೆ' ಎಂದು ಕನ್ನಡಪರ ಹೋರಾಟಗಾರ ಸಾ.ರಾ.ಗೋವಿಂದ್ ತಿಳಿಸಿದರು.

ತಂದೆಯ ಸಮವಸ್ತ್ರ ಧರಿಸಿ ಅಂತಿಮ ಸೆಲ್ಯೂಟ್ ಹೊಡೆದ 2 ವರ್ಷದ ಪುತ್ರ!ತಂದೆಯ ಸಮವಸ್ತ್ರ ಧರಿಸಿ ಅಂತಿಮ ಸೆಲ್ಯೂಟ್ ಹೊಡೆದ 2 ವರ್ಷದ ಪುತ್ರ!

ಫೆ.14ರಂದು ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಫೆ.19ರಂದು ಕರ್ನಾಟಕ ಬಂದ್‌ಗೆ ಕನ್ನಡ ಒಕ್ಕೂಟ ಕರೆ ನೀಡಿತ್ತು. ಆದರೆ, ಭಾನುವಾರ ಬಂದ್ ಮುಂದೂಡಲಾಗಿದೆ ಎಂದು ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದ್ದಾರೆ.

'ಮೋದಿ ಸರ್ಕಾರ ನಂಬಲ್ಲ' ಎಂದ ಹುತಾತ್ಮ ಯೋಧನ ದುಃಖತಪ್ತ ಪತ್ನಿ'ಮೋದಿ ಸರ್ಕಾರ ನಂಬಲ್ಲ' ಎಂದ ಹುತಾತ್ಮ ಯೋಧನ ದುಃಖತಪ್ತ ಪತ್ನಿ

ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆದಿದ್ದವು. ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು ಬಂದ್ ಮುಂದೂಡಲಾಗಿದೆ ಎಂದು ಹೇಳಿದರು.

English summary
The Kannada Chalavali Vatal Paksha president Vatal Nagaraj said that February 19 Karnataka bandh postponed. Banded called to condemned the Pulwama attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X