ಮೆಡಿಕಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಕೋರ್ಸ್ ಶುಲ್ಕದಲ್ಲಿ ಹೆಚ್ಚಳವಿಲ್ಲ!
ಬೆಂಗಳೂರು, ಜ. 31: ಪ್ರಸಕ್ತ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ ಶುಲ್ಕವನ್ನು ಹೆಚ್ಚಳ ಮಾಡಲಾಗುತ್ತಿದೆ ಎಂಬ ಗೊಂದಲಗಳಿಗೆ ಸರ್ಕಾರ ತೆರೆ ಎಳೆದಿದೆ. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳಿಗೆ ಸಂಬಂಧಿಸಿದಂತೆ ಯವುದೇ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ನೀಟ್ ಕೌನ್ಸಲಿಂಗ್ ನಡುವೆಯೇ ವೈದ್ಯಕೀಯ ಪದವಿ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಶುಲ್ಕ ಹೆಚ್ಚಳ ಮಾಡಲಾಗುತ್ತಿದೆ. ಶುಲ್ಕ ಹೆಚ್ಚಳ ಮಾಡುವಂತೆ ಖಾಸಗಿ ಕಾಲೇಜುಗಳು ಹಾಕಿರುವ ಒತ್ತಡಕ್ಕೆ ಮಣಿದು ಸರ್ಕಾರ ಶುಲ್ಕ ಹೆಚ್ಚಳ ಮಾಡುತ್ತಿದೆ ಎಂಬ ಮಾತು ಕೇಳಿ ಬರುತ್ತಿತ್ತು.
ಈ ಗೊಂದಲದ ನಡುವೆ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರಸಕ್ತ ಸಾಲಿನ ಶುಲ್ಕದ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ರವಾನಿಸಿದೆ. ಜತೆಗೆ ಈ ಶುಲ್ಕದ ವಿವರಗಳನ್ನು ಅಧಿಕೃತ ವೆಬ್ನಲ್ಲಿ ಪ್ರಕಟಿಸಲಾಗಿದ್ದು, ಯಾವುದೇ ಶುಲ್ಕ ಹೆಚ್ಚಳಕ್ಕೆ ಅವಕಾಶ ಮಾಡಿಲ್ಲ.

ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಕಟಿಸಿರುವ ಶುಲ್ಕದ ಪ್ರಕಾರ, ಖಾಸಗಿ ಕಾಲೇಜುಗಳಲ್ಲಿ ಲಭ್ಯವಿರುವ ಸರ್ಕಾರಿ ಎಂಬಿಬಿಎಸ್ ಕೋರ್ಸ್ಗೆ ವರ್ಷಕ್ಕೆ 1,28, 746 ರೂ. ನಿಗದಿ ಮಾಡಲಾಗಿದೆ. ಸರ್ಕಾರಿ ಮೆಡಿಕಲ್ ಕಾಲೇಜಿನ ಪ್ರವೇಶ ಶುಲ್ಕ 59,800 ರೂ. ನಿಗದಿ ಮಾಡಲಾಗಿದೆ. ಅದೇ ರೀತಿ ದಂತ ವೈದ್ಯಕೀಯ ಸರ್ಕಾರಿ ಕೋಟಾದಡಿ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ವಾರ್ಷಿಕ 83,356 ರೂ. ನಿಗದಿ ಪಡಿಸಲಾಗಿದೆ.

Recommended Video
ಕಳೆದ ವರ್ಷವೇ ಸರ್ಕಾರಿ ಕೋಟಾದ ಸೀಟುಗಳ ಶುಲ್ಕದಲ್ಲಿ ಶೇ. 30 ರಷ್ಟು ಹೆಚ್ಚಳ ಮಾಡುವಂತೆ ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಸರ್ಕಾರವನ್ನು ಒತ್ತಾಯಿಸಿದ್ದವು. ಕೋವಿಡ್ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಹಳೇ ಶುಲ್ಕ ಪದ್ಧತಿಯನ್ನು ಮುಂದುವರೆಸುವ ನಿಟ್ಟಿನಲ್ಲಿಖಾಸಗಿ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಗಳನ್ನು ಸರ್ಕಾರ ಮನವೊಲಿಸಿತ್ತು. ಇದರ ಬೆನ್ನಲ್ಲೇ ಯುಜಿ ನೀಟ್ 2021ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ಗಳಿಗೆ ಜ. 29 ರಿಂದ ಕೌನ್ಸಲಿಂಗ್ ಪ್ರಾರಂಭಿಸಿದ್ದು, ಫೆ. 7 ಕ್ಕೆ ಮುಕ್ತಾಯವಾಗಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications