ಮೆಡಿಕಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಕೋರ್ಸ್ ಶುಲ್ಕದಲ್ಲಿ ಹೆಚ್ಚಳವಿಲ್ಲ!
ಬೆಂಗಳೂರು, ಜ. 31: ಪ್ರಸಕ್ತ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ ಶುಲ್ಕವನ್ನು ಹೆಚ್ಚಳ ಮಾಡಲಾಗುತ್ತಿದೆ ಎಂಬ ಗೊಂದಲಗಳಿಗೆ ಸರ್ಕಾರ ತೆರೆ ಎಳೆದಿದೆ. ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳಿಗೆ ಸಂಬಂಧಿಸಿದಂತೆ ಯವುದೇ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ನೀಟ್ ಕೌನ್ಸಲಿಂಗ್ ನಡುವೆಯೇ ವೈದ್ಯಕೀಯ ಪದವಿ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಶುಲ್ಕ ಹೆಚ್ಚಳ ಮಾಡಲಾಗುತ್ತಿದೆ. ಶುಲ್ಕ ಹೆಚ್ಚಳ ಮಾಡುವಂತೆ ಖಾಸಗಿ ಕಾಲೇಜುಗಳು ಹಾಕಿರುವ ಒತ್ತಡಕ್ಕೆ ಮಣಿದು ಸರ್ಕಾರ ಶುಲ್ಕ ಹೆಚ್ಚಳ ಮಾಡುತ್ತಿದೆ ಎಂಬ ಮಾತು ಕೇಳಿ ಬರುತ್ತಿತ್ತು.
ಈ ಗೊಂದಲದ ನಡುವೆ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸಕ್ತ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರಸಕ್ತ ಸಾಲಿನ ಶುಲ್ಕದ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ರವಾನಿಸಿದೆ. ಜತೆಗೆ ಈ ಶುಲ್ಕದ ವಿವರಗಳನ್ನು ಅಧಿಕೃತ ವೆಬ್ನಲ್ಲಿ ಪ್ರಕಟಿಸಲಾಗಿದ್ದು, ಯಾವುದೇ ಶುಲ್ಕ ಹೆಚ್ಚಳಕ್ಕೆ ಅವಕಾಶ ಮಾಡಿಲ್ಲ.

ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಕಟಿಸಿರುವ ಶುಲ್ಕದ ಪ್ರಕಾರ, ಖಾಸಗಿ ಕಾಲೇಜುಗಳಲ್ಲಿ ಲಭ್ಯವಿರುವ ಸರ್ಕಾರಿ ಎಂಬಿಬಿಎಸ್ ಕೋರ್ಸ್ಗೆ ವರ್ಷಕ್ಕೆ 1,28, 746 ರೂ. ನಿಗದಿ ಮಾಡಲಾಗಿದೆ. ಸರ್ಕಾರಿ ಮೆಡಿಕಲ್ ಕಾಲೇಜಿನ ಪ್ರವೇಶ ಶುಲ್ಕ 59,800 ರೂ. ನಿಗದಿ ಮಾಡಲಾಗಿದೆ. ಅದೇ ರೀತಿ ದಂತ ವೈದ್ಯಕೀಯ ಸರ್ಕಾರಿ ಕೋಟಾದಡಿ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ವಾರ್ಷಿಕ 83,356 ರೂ. ನಿಗದಿ ಪಡಿಸಲಾಗಿದೆ.

Recommended Video
ಕಳೆದ ವರ್ಷವೇ ಸರ್ಕಾರಿ ಕೋಟಾದ ಸೀಟುಗಳ ಶುಲ್ಕದಲ್ಲಿ ಶೇ. 30 ರಷ್ಟು ಹೆಚ್ಚಳ ಮಾಡುವಂತೆ ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಸರ್ಕಾರವನ್ನು ಒತ್ತಾಯಿಸಿದ್ದವು. ಕೋವಿಡ್ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಹಳೇ ಶುಲ್ಕ ಪದ್ಧತಿಯನ್ನು ಮುಂದುವರೆಸುವ ನಿಟ್ಟಿನಲ್ಲಿಖಾಸಗಿ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಗಳನ್ನು ಸರ್ಕಾರ ಮನವೊಲಿಸಿತ್ತು. ಇದರ ಬೆನ್ನಲ್ಲೇ ಯುಜಿ ನೀಟ್ 2021ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ಗಳಿಗೆ ಜ. 29 ರಿಂದ ಕೌನ್ಸಲಿಂಗ್ ಪ್ರಾರಂಭಿಸಿದ್ದು, ಫೆ. 7 ಕ್ಕೆ ಮುಕ್ತಾಯವಾಗಲಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications