ರಾಮನಗರ ಬಸ್ ನಿಲ್ದಾಣದಲ್ಲಿ ಹೆಣ್ಣು ಭ್ರೂಣ ಪತ್ತೆ
ರಾಮನಗರ, ಅಕ್ಟೋಬರ್ 10 : ಕನಕಪುರ ಬಸ್ ನಿಲ್ದಾಣದಲ್ಲಿ ಮೃತ ಹೆಣ್ಣು ಭ್ರೂಣವನ್ನು ಎಸೆದಿರುವ ಮನಕಲುಕುವ, ಅಮಾನವೀಯ ಘಟನೆ ಮಂಗಳವಾರ ನಡೆದಿದೆ.
ಮುಂಜಾನೆ ಬಸ್ ನಿಲ್ದಾಣದಲ್ಲಿ ಯಾರೂ ಇಲ್ಲದ ಸಮಯದಲ್ಲಿ ಭ್ರೂಣವನ್ನು ಬಿಸಾಡಲಾಗಿದೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಸ್ವಯಂಪ್ರೇರಿತವಾಗಿ ಭಾರತೀಯ ದಂಡಸಂಹಿತೆ 318 ಕಲಂ ಅಡಿ ಪ್ರಕರಣ ದಾಖಲಿಸಿಕೊಂಡು ಭ್ರೂಣವನ್ನ ಶವ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

ಹೆಣ್ಣು ಭ್ರೂಣ 5-6 ತಿಂಗಳ ಭ್ರೂಣವಾಗಿದ್ದು ಬಹುತೇಕ ಅಂಗಾಂಗಗಳು ಬೆಳೆದಿವೆ. ಅಕ್ರಮ ಸಂಬಂಧದಿಂದಲೋ ಅಥವಾ ಹೆಣ್ಣು ಮಗು ಎಂಬ ಕಾರಣಕ್ಕೋ ಗರ್ಭಪಾತ ಮಾಡಲಾಗಿದೆ. ಹೆಣ್ಣು ಮನೆಯ ಕಣ್ಣು ಅಂತಾರೆ ಅದರೆ ಈ ಪಾಪಿಗಳು ಹೆಣ್ಣು ಭ್ರೂಣ ಕಣ್ಣು ಬಿಡುವ ಮೊದಲೇ ಕಣ್ಣು ಮುಚ್ಚಿಸಿರುವ ಘಟನೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.
ಸರ್ಕಾರ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟಲು ಬಿಗಿ ಕಾನೂನು ಇದ್ದರು ನಗರದ ಕೆಲವು ಖಾಸಗಿ ಲ್ಯಾಬ್ಗಳಲ್ಲಿ ಪ್ರಸವ ಪೂರ್ವ ಲಿಂಗಪತ್ತೆ ಎಗ್ಗಿಲ್ಲದೇ ನಡೆಯುತ್ತಿದೆ. ಕಾನೂನು ಜಾರಿಮಾಡಬೇಕಾದ ಅಧಿಕಾರಿಗಳು ಮಾತ್ರ ಜಾಣಕುರುಡರಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
More From
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications