Get Updates
Get notified of breaking news, exclusive insights, and must-see stories!

ದುಷ್ಕರ್ಮಿಗಳ ಗುಂಡಿಗೆ ಗುಲ್ಬರ್ಗದಲ್ಲಿ ವ್ಯಾಪಾರಿ ಬಲಿ

ಗುಲ್ಬರ್ಗ, ಅ.10 : ಗುಲ್ಬರ್ಗದಲ್ಲಿ ದುಷ್ಕರ್ಮಿಗಳು ರಸಗೊಬ್ಬರ ಅಂಗಡಿ ವ್ಯಾಪಾರಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ, ಹಣದ ಚೀಲದೊಂದಿಗೆ ಪರಾರಿಯಾಗಿದ್ದಾರೆ. ರಸಗೊಬ್ಬರ ಅಂಗಡಿಗಳ ವರ್ತಕರು ಕೊಲೆ ಖಂಡಿಸಿ ಶುಕ್ರವಾರ ಗುಲ್ಬರ್ಗ ಬಂದ್‌ಗೆ ಕರೆ ನೀಡಿದ್ದಾರೆ.

ಮೃತಪಟ್ಟ ರಸಗೊಬ್ಬರ ಅಂಗಡಿ ಮಾಲೀಕನನ್ನು ಶಿವಶರಣಪ್ಪ ಹೊಸ್ಮನಿ (42) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಅಂಗಡಿ ಮುಚ್ಚಿಕೊಂಡು ಮನೆಗೆ ದ್ವಿಚಕ್ರ ವಾಹನದಲ್ಲಿ ಶಿವಶರಣಪ್ಪ ಹೋಗುತ್ತಿದ್ದಾಗ, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳ ನಾಡ ಬಂದೂಕಿನಿಂದ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

Gulbarga

ಎದೆಗೆ ನೇರವಾಗಿ ಗುಂಡು ಬಿದ್ದ ಕಾರಣ ಸ್ಥಳದಲ್ಲಿಯೇ ಶಿವಶರಣಪ್ಪ ಮೃತಪಟ್ಟಿದ್ದು, ಅವರ ಕೈಯಲಿದ್ದ ಹಣದ ಚೀಲದೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಅಮಿತ್ ಸಿಂಗ್ ಆಗಮಿಸಿ ಪರಿಶೀಲನೆ ನಡೆಸಿದರು. ಜೇವರ್ಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರವೆದಿದೆ.

ಬಂದ್‌ಗೆ ಕರೆ : ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಮತ್ತು ಶಿವಶರಣಪ್ಪ ಕೊಲೆಯನ್ನು ಖಂಡಿಸಿ ರಸಗೊಬ್ಬರ ವ್ಯಾಪಾರಿಗಳು ಶುಕ್ರವಾರ ಗುಲ್ಬರ್ಗ ಬಂದ್‌ಗೆ ಕರೆ ನೀಡಿದ್ದಾರೆ. ನಗರದ ಎಲ್ಲಾ ರಸಗೊಬ್ಬರ ಅಂಗಡಿಗಳನ್ನು ಮುಚ್ಚಲಾಗಿದೆ.

ಪ್ರತ್ಯೇಕ ರಾಜ್ಯದ ಧ್ವಜಾರೋಹಣ : ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಜಾರಿಗೊಳಿಸಲಾದ ವಿಶೇಷ ಸ್ಥಾನಮಾನದಿಂದ ಉಪಯೋಗವಾಗುತ್ತಿಲ್ಲ ಎಂಬುದು ಸಾಬೀತಾಗಿರುವುದರಿಂದ ಹೈ-ಕ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯವೇ ಅಗತ್ಯವಾಗಿದ್ದು, ನವೆಂಬರ್ 1ರಂದು ನಗರದ ಸಾರ್ವಜನಿಕ ಸ್ಥಳಗಳಲ್ಲಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡಲಾಗುವುದು ಎಂದು ಹೈ-ಕ ಯುವ ಹೋರಾಟ ಸಮಿತಿ ಅಧ್ಯಕ್ಷ ಡಾ.ರಾಜು ಕುಳಗೇರಿ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+