ದುಷ್ಕರ್ಮಿಗಳ ಗುಂಡಿಗೆ ಗುಲ್ಬರ್ಗದಲ್ಲಿ ವ್ಯಾಪಾರಿ ಬಲಿ
ಗುಲ್ಬರ್ಗ, ಅ.10 : ಗುಲ್ಬರ್ಗದಲ್ಲಿ ದುಷ್ಕರ್ಮಿಗಳು ರಸಗೊಬ್ಬರ ಅಂಗಡಿ ವ್ಯಾಪಾರಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ, ಹಣದ ಚೀಲದೊಂದಿಗೆ ಪರಾರಿಯಾಗಿದ್ದಾರೆ. ರಸಗೊಬ್ಬರ ಅಂಗಡಿಗಳ ವರ್ತಕರು ಕೊಲೆ ಖಂಡಿಸಿ ಶುಕ್ರವಾರ ಗುಲ್ಬರ್ಗ ಬಂದ್ಗೆ ಕರೆ ನೀಡಿದ್ದಾರೆ.
ಮೃತಪಟ್ಟ ರಸಗೊಬ್ಬರ ಅಂಗಡಿ ಮಾಲೀಕನನ್ನು ಶಿವಶರಣಪ್ಪ ಹೊಸ್ಮನಿ (42) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಅಂಗಡಿ ಮುಚ್ಚಿಕೊಂಡು ಮನೆಗೆ ದ್ವಿಚಕ್ರ ವಾಹನದಲ್ಲಿ ಶಿವಶರಣಪ್ಪ ಹೋಗುತ್ತಿದ್ದಾಗ, ಬೈಕ್ನಲ್ಲಿ ಬಂದ ದುಷ್ಕರ್ಮಿಗಳ ನಾಡ ಬಂದೂಕಿನಿಂದ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಎದೆಗೆ ನೇರವಾಗಿ ಗುಂಡು ಬಿದ್ದ ಕಾರಣ ಸ್ಥಳದಲ್ಲಿಯೇ ಶಿವಶರಣಪ್ಪ ಮೃತಪಟ್ಟಿದ್ದು, ಅವರ ಕೈಯಲಿದ್ದ ಹಣದ ಚೀಲದೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಅಮಿತ್ ಸಿಂಗ್ ಆಗಮಿಸಿ ಪರಿಶೀಲನೆ ನಡೆಸಿದರು. ಜೇವರ್ಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರವೆದಿದೆ.
ಬಂದ್ಗೆ ಕರೆ : ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಮತ್ತು ಶಿವಶರಣಪ್ಪ ಕೊಲೆಯನ್ನು ಖಂಡಿಸಿ ರಸಗೊಬ್ಬರ ವ್ಯಾಪಾರಿಗಳು ಶುಕ್ರವಾರ ಗುಲ್ಬರ್ಗ ಬಂದ್ಗೆ ಕರೆ ನೀಡಿದ್ದಾರೆ. ನಗರದ ಎಲ್ಲಾ ರಸಗೊಬ್ಬರ ಅಂಗಡಿಗಳನ್ನು ಮುಚ್ಚಲಾಗಿದೆ.
ಪ್ರತ್ಯೇಕ ರಾಜ್ಯದ ಧ್ವಜಾರೋಹಣ : ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಜಾರಿಗೊಳಿಸಲಾದ ವಿಶೇಷ ಸ್ಥಾನಮಾನದಿಂದ ಉಪಯೋಗವಾಗುತ್ತಿಲ್ಲ ಎಂಬುದು ಸಾಬೀತಾಗಿರುವುದರಿಂದ ಹೈ-ಕ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯವೇ ಅಗತ್ಯವಾಗಿದ್ದು, ನವೆಂಬರ್ 1ರಂದು ನಗರದ ಸಾರ್ವಜನಿಕ ಸ್ಥಳಗಳಲ್ಲಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡಲಾಗುವುದು ಎಂದು ಹೈ-ಕ ಯುವ ಹೋರಾಟ ಸಮಿತಿ ಅಧ್ಯಕ್ಷ ಡಾ.ರಾಜು ಕುಳಗೇರಿ ತಿಳಿಸಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications