ಕೆಂಪಯ್ಯರನ್ನು ವಿವಾದಗಳು ಸದಾ ಕಾಡುವುದೇಕೆ?
ಬೆಂಗಳೂರು, ಮೇ 09 : ಒಂದು ಕಾಲದ ಖಡಕ್ ಪೊಲೀಸ್ ಅಧಿಕಾರಿ ಕೆಂಪಯ್ಯ ಅವರನ್ನು ವಿವಾದಗಳು ಬಿಡುತ್ತಿಲ್ಲ. ಗೃಹ ಸಚಿವರ ಸಲಹೆಗಾರ ಮತ್ತು ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ಕಳೆದ ವಾರ ಆದಾಯ ತೆರಿಗೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
1981ನೇ ಬ್ಯಾಚ್ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರು 2009ರಲ್ಲಿ ಸ್ವಯಂ ನಿವೃತ್ತಿ ಪಡೆದುಕೊಂಡರು. ಆಗ ಅವರ ಮೇಲೆ ಭ್ರಷ್ಟಾಚಾರ ಆರೋಪದಲ್ಲಿ ಲೋಕಾಯುಕ್ತ ಪೊಲೀಸರು ಚಾರ್ಚ್ಶೀಟ್ ಸಲ್ಲಿಸಿದ್ದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೇಲೆ 2014ರಲ್ಲಿ ಅವರನ್ನು ಗೃಹ ಸಚಿವರ ಸಲಹೆಗಾರರಾಗಿ ನೇಮಿಸಲಾಗಿದೆ. [ಐಟಿ ಅಧಿಕಾರಿಗಳಿಂದ ಕೆಂಪಯ್ಯ ವಿಚಾರಣೆ]

ಖಡಕ್ ಪೊಲೀಸ್ ಅಧಿಕಾರಿ : ಕರ್ನಾಟಕದಲ್ಲಿ ಕೆಲಸ ಮಾಡಿದ ಖಡಕ್ ಪೊಲೀಸ್ ಅಧಿಕಾರಿಗಳ ಪಟ್ಟಿಯಲ್ಲಿ ಕೆಂಪಯ್ಯ ಅವರ ಹೆಸರೂ ಇದೆ. ಹೈ ಪ್ರೊಪೈಲ್ ಪ್ರಕರಣಗಳನ್ನು ಅವರು ತನಿಖೆ ನಡೆಸಿದ್ದಾರೆ. ವೀರಪ್ಪನ್ ಹಿಡಿಯುವ ಕಾರ್ಯಾಚರಣೆ, ರಾಜೀವ್ ಗಾಂಧಿ ಹಂತಕರ ಸೆರೆ ಮುಂತಾದ ಪ್ರಕರಣಗಳಲ್ಲಿ ಕೆಂಪಯ್ಯ ಕೆಲಸ ಮಾಡಿದ್ದಾರೆ.[ಕೆಂಪಯ್ಯ ವಿರುದ್ಧ ಈಗ ಸುಳ್ಳು ಜಾತಿ ಪ್ರಮಾಣ ಪತ್ರ ಆರೋಪ]
ಬೆಂಗಳೂರಿನ ಕೋಣನಕುಂಟೆ ಬಳಿ ಅಡಗಿ ಕುಳಿತಿದ್ದ ರಾಜೀವ್ ಗಾಂಧಿ ಹಂತಕರಾದ ಶುಭ ಮತ್ತು ಶಿವರಾಸನ್ ಹಿಡಿಯುವ ಕಾರ್ಯಾಚರಣೆಯಲ್ಲಿ ಕೆಂಪಯ್ಯ ಪಾಲ್ಗೊಂಡಿದ್ದರು. ಕಾಡುಗಳ್ಳ ವೀರಪ್ಪನ್ ಹತ್ಯೆ ಮಾಡಿದ ವಿಶೇಷ ಟಾಸ್ಕ್ ಪೋರ್ಸ್ ಮುಖ್ಯಸ್ಥರಾಗಿಯೂ ಕೆಂಪಯ್ಯ ಕೆಲಸ ಮಾಡಿದ್ದಾರೆ. [ಕಂಡವ್ರ ದುಡ್ಡು ಕಕ್ಕಸು: ಮಾಧ್ಯಮದವರ ಮೇಲೆ ಕೆಂಪಯ್ಯ 'ಕೆರಳಿದ ಸಿಂಹ']
ಭ್ರಷ್ಟಾಚಾರದ ಆರೋಪಗಳು : ಕೆಂಪಯ್ಯ ಅವರನ್ನು ಭ್ರಷ್ಟಾಚಾರದ ವಿವಾದಗಳು ಬೆನ್ನು ಬಿಟ್ಟಿಲ್ಲ. ಲೋಕಾಯುಕ್ತ ಪೊಲೀಸರು ಕೆಂಪಯ್ಯ ಅವರ ವಿರುದ್ಧ ಭ್ರಷ್ಟಾಚಾರ ಆರೋಪದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದರು. ಇದರಿಂದಾಗಿ 2009ರಲ್ಲಿ ಕೆಂಪಯ್ಯ ಅವರು ಸ್ವಯಂ ನಿವೃತ್ತಿ ಪಡೆದರು.
ಲೋಕಾಯುಕ್ತದ ಚಾರ್ಜ್ ಶೀಟ್ ರದ್ದುಪಡಿಸುವಂತೆ ಅವರು ಹೈಕೋರ್ಟ್ ಮೊರೆ ಹೋದರು. ಕೊನೆಗೆ ಹೈಕೋರ್ಟ್ ಆದೇಶದಂತೆ ಅವರ ಮೇಲಿನ ಆರೋಪವನ್ನು ಕೈಬಿಡಲಾಯಿತು. ಕಳೆದ ವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಅವರ ವಿಚಾರಣೆ ನಡೆಸಿದ್ದು, ಮತ್ತೆ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ.
ವಿಚಾರಣೆ ಏಕೆ? : ಕೆಂಪಯ್ಯ ಅವರು ಆದಾಯ ತೆರಿಗೆ ಅಧಿಕಾರಿಗಳು ಮೂರು ತಾಸು ಕೆಂಪಯ್ಯ ವಿಚಾರಣೆ ನಡೆಸಿದ್ದಾರೆ. 12 ಕೋಟಿ ರೂ. ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಿಚಾರಣೆ ನಡೆದಿದೆ. ವಿಧಾನಪರಿಷತ್ ಸದಸ್ಯ ಮತ್ತು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರ ಮನೆಯ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಿಚಾರಣೆ ನಡೆಸಲಾಗಿದೆ.
2016ರ ಮಾರ್ಚ್ 15ರಂದು ಬೆಂಗಳೂರಿನಲ್ಲಿ ಐಟಿ ದಾಳಿ ನಡೆದಿತ್ತು. ವಿಧಾನಪರಿಷತ್ ಸದಸ್ಯರಾದ ಸಿ.ಆರ್.ಮನೋಹರ್ (ಜೆಡಿಎಸ್), ಕೆ.ಗೋವಿಂದರಾಜು (ಕಾಂಗ್ರೆಸ್), ಡಿ.ಯು ಮಲ್ಲಿಕಾರ್ಜುನ (ಪಕ್ಷೇತರ) ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು. ಕೆ.ಗೋವಿಂದರಾಜು ಅವರ ಮನೆಯಿಂದ ಜಪ್ತಿ ಮಾಡಲಾದ ಡೈರಿಯಲ್ಲಿ ಕೆಂಪಯ್ಯ ಅವರ ಹೆಸರಿತ್ತು. ಈ ಬಗ್ಗೆ ವಿವರಣೆ ಪಡೆಯಲು ಅಧಿಕಾರಿಗಳು ಕೆಂಪಯ್ಯ ವಿಚಾರಣೆ ನಡೆಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications