ಸಿಎಂ ಅವರೇ, ಡಬ್ಬಿಂಗ್ ನಿಷೇಧ ತೆರವು ಮಾಡಿ: ಆನ್ ಲೈನ್ ಅರ್ಜಿ
ಬೆಂಗಳೂರು, ಜುಲೈ 30: ಕರ್ನಾಟಕದಲ್ಲಿ ಇತರೆ ಭಾಷೆಯಲ್ಲಿರುವ ಜ್ಞಾನ, ಮನರಂಜನೆಯ ಕಾರ್ಯಕ್ರಮಗಳನ್ನು ಕನ್ನಡಕ್ಕೆ ತರದಂತೆ ಡಬ್ಬಿಂಗ್ ಮೇಲೆ ಒಂದು ಅಸಂವಿಧಾನಿಕವಾದ ಖಾಸಗಿ ನಿಷೇಧ ಜಾರಿಯಲ್ಲಿದೆ. ರಾಜ್ಯದಲ್ಲಿ ಸದ್ಯ ಜಾರಿಯಲ್ಲಿರುವ ಡಬ್ಬಿಂಗ್ ನಿಷೇಧ ಕಾನೂನು ಬಾಹಿರ ಎಂದು ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ತನ್ನ ಆದೇಶದಲ್ಲಿ ತಿಳಿಸಿದೆ.
ಈ ಆದೇಶವನ್ನು ಕರ್ನಾಟಕದಲ್ಲಿ ಅನುಷ್ಠಾನಗೊಳಿಸುವಂತೆ ಕೋರಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಗೆ ಸಹಿ ಹಾಕಲು ಲೇಖನ ಕೊನೆಯಲ್ಲಿ ಲಿಂಕ್ ನೀಡಲಾಗಿದೆ. [ಡಬ್ಬಿಂಗ್ ಬೆಂಬಲಿಗರಿಗೆ ಆನೆಬಲ: ವಾಣಿಜ್ಯ ಮಂಡಳಿಗೆ ಮುಖಭಂಗ]
ವಿಶ್ವಸಂಸ್ಥೆಯು ಬಾರ್ಸಿಲೋನಾ ಭಾಷಾ ಹಕ್ಕುಗಳಲ್ಲಿ ಡಬ್ಬಿಂಗ್ ಅನ್ನು ಭಾಷೆಯನ್ನು ಪಸರಿಸುವ ಒಂದು ಸಾಧನವನ್ನಾಗಿ ಗುರುತಿಸಿದೆ. ಜಗತ್ತಿನಾದ್ಯಂತ ಡಬ್ಬಿಂಗ್ ಅನ್ನು ಭಾಷೆ ಬೆಳೆಸಲು, ಹರಡಲು ಒಂದು ಸಾಧನವಾಗಿಯೇ ಬೇರೆ ಬೇರೆ ನುಡಿ ಸಮಾಜಗಳು ಬಳಸುತ್ತಿವೆ. ಹೀಗಿದ್ದರೂ ಖಾಸಗಿ ನಿಷೇಧವೊಂದರಿಂದಾಗಿ ಜಗತ್ತಿನ ಅತ್ಯು ತ್ತಮವಾದ ಮಾಹಿತಿ, ಜ್ಞಾನ, ಮನರಂಜನೆಯ ಕಾರ್ಯಕ್ರಮಗಳನ್ನು ಕನ್ನಡದಲ್ಲಿ ಸವಿಯುವ ಆಯ್ಕೆ ಸ್ವಾತಂತ್ರ್ಯದಿಂದ ಕನ್ನಡಿಗರು ವಂಚಿತರಾಗಿದ್ದಾರೆ. [ಡಬ್ಬಿಂಗ್ ವಿರೋಧಿಗಳಿಗೆ ಸಾಮಾನ್ಯ ಪ್ರೇಕ್ಷಕನ ಪ್ರಶ್ನೆ]

ಆಯ್ಕೆಯ ಹಕ್ಕನ್ನು ಕಿತ್ತುಕೊಳ್ಳಬೇಡಿ: ಡಬ್ಬಿಂಗ್ ಅನ್ನು ಒಂದು ಉದ್ಯಮದಂತೆ ಮಾಡುವುದರ ಮೇಲಾಗಲೀ, ಡಬ್ ಆದ ಕಾರ್ಯಕ್ರಮಗಳನ್ನು ನೋಡುವುದರ ಮೇಲಾಗಲೀ ಭಾರತದ ಸಂವಿಧಾನ ಮತ್ತು ಕಾನೂನುಗಳು ಯಾವುದೇ ನಿರ್ಬಂಧ ಹೇರಿಲ್ಲ. ಹೀಗಿದ್ದರೂ ಕೆಲವು ಖಾಸಗಿ ಸಂಸ್ಥೆಗಳು, ವ್ಯಕ್ತಿಗಳು ಕಾನೂನು ಧಿಕ್ಕರಿಸಿಯಾದರೂ ಕನ್ನಡದಲ್ಲಿ ಡಬ್ಬಿಂಗ್ ಅನ್ನು ತಡೆಯುತ್ತೇವೆ ಅನ್ನುವ ಬೆದರಿಕೆಯ ಮಾತುಗಳನ್ನಾಡುತ್ತಿದ್ದಾರೆ. [ಡಬ್ಬಿಂಗ್ ಬೇಕೋ ಬೇಡವೋ : ಚರ್ಚೆ ಮುಂದುವರಿಯಲಿ]
ಇಂತಹ ಹೇಳಿಕೆಗಳ ಮೂಲಕ ಕಾನೂನು ಬದ್ಧವಾಗಿ ಡಬ್ಬಿಂಗ್ ಮಾಡಬೇಕೆಂದಿರುವ ಜನರನ್ನು ಮತ್ತು ಡಬ್ ಆದ ಕಾರ್ಯಕ್ರಮಗಳನ್ನು ನೋಡಬೇಕು ಅನ್ನುವ ಕನ್ನಡಿಗರ ನ್ಯಾಯಯುತವಾದ ಆಯ್ಕೆಯ ಹಕ್ಕನ್ನು ಬಲವಂತವಾಗಿ ಕಿತ್ತುಕೊಳ್ಳುವ ಕೆಲಸಕ್ಕೆ ಕೈ ಹಾಕಿದ್ದಾರೆ. ಇಂತಹ ಪ್ರಜಾಪ್ರಭುತ್ವ ವಿರೋಧಿ ನಡೆ ಸ್ಪಷ್ಟವಾಗಿ ಕರ್ನಾಟಕದ ಕಾನೂನು-ಸುವ್ಯವಸ್ಥೆಗೆ ಮತ್ತು ಕರ್ನಾಟಕದ ಸರ್ಕಾರದ ಸಾರ್ವಭೌಮತ್ವಕ್ಕೆ ಸವಾಲು ಎಸೆಯುವಂತಿದೆ.
ಕನ್ನಡಿಗರ ಪ್ರತಿನಿಧಿಯಾದ ನೀವು ಇದನ್ನು ಗಂಭೀರವಾಗಿ ಪರಿಗಣಿಸಿ, ಸಂವಿಧಾನವು ಮಾನ್ಯ ಮಾಡಿರುವ ಆಯ್ಕೆ ಸ್ವಾತಂತ್ರ್ಯವನ್ನು ಕನ್ನಡಿಗರೆಲ್ಲರಿಗೆ ಕಲ್ಪಿಸುವತ್ತ ಡಬ್ಬಿಂಗ್ ವಿಷಯದಲ್ಲಿ ಇರುವ ತೊಡಕುಗಳನ್ನು ನಿವಾರಿಸಬೇಕೆಂದು ಈ ಸಹಿ ಸಂಗ್ರಹ ಅಭಿಯಾನದ ಮೂಲಕ ಕೇಳಿಕೊಳ್ಳುತ್ತೇವೆ.
ಎಂದು ಅರ್ಜಿದಾರರಾದ ಪ್ರಿಯಾಂಕ್ ಕತ್ತಲಗಿರಿ,ಆನಂದ್. ಜಿ.,ವಸಂತ್ ಶೆಟ್ಟಿ,ವಲ್ಲೀಶ್ ಕುಮಾರ್,,ಬಾಬು ಅಜಯ್,ಮಲ್ಲೇಶ್ ಬಿ. ಜಿ.,ಜಯಂತ್ ಸಿದ್ಮಲ್ಲಪ್ಪ ಅವರು ಕೋರಿದ್ದಾರೆ. ಆಸಕ್ತರು ಈ ಲಿಂಕ್ ಕ್ಲಿಕ್ ಮಾಡಿ ಆನ್ ಲೈನ್ ಅರ್ಜಿಗೆ ನಿಮ್ಮ ಸಹಿ ಹಾಕಿ ಬೆಂಬಲ ಸೂಚಿಸಬಹುದು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications