ಮಾಜಿ ಸಿಎಂ ಸಿದ್ದರಾಮಯ್ಯ ಆರೋಪದ ಬೆನ್ನಲ್ಲೆ ಸಿಎಂ ಯಡಿಯೂರಪ್ಪ ಮಹತ್ವದ ಆದೇಶ!
ಬೆಂಗಳೂರು, ನ. 26: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಒಂದರ ಮೇಲೊಂದರಂತೆ ದಿಢೀರ್ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ನಿಗಮ ಮಂಡಳಿಗಳಿಗೆ ನೇಮಕ ಮಾಡಿದ ಬೆನ್ನಲ್ಲಿಯೆ ವಿರೋಧ ಪಕ್ಷಗಳಿಂದ ಆರೋಪ ಎದುರಾಗಿತ್ತು.
ರಾಜ್ಯದ ಆರ್ಥಿಕ ಸ್ಥಿತಿ ಶೋಚನೀಯವಾಗಿದೆ. ವೃದ್ದಾಪ್ಯ-ವಿಧವಾ ವೇತನ, ಸರ್ಕಾರಿ ನೌಕರರ ಸಂಬಳ ಕೊಡಲಿಕ್ಕೆ ಸಕಾರದ ಬಳಿ ಹಣವಿಲ್ಲ. ಆದರೂ ಅನಗತ್ಯವಾಗಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಯಡಿಯೂರಪ್ಪ ಅವರು ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದರು.
ಇದೀಗ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆರ್ಥಿಕ ಇಲಾಖೆಗೆ ಮಹತ್ವದ ಸೂಚನೆ ನೀಡಿದ್ದಾರೆ. ಅವರ ಸೂಚನೆಯಂತೆ 2020-21 ನೇ ಸಾಲಿನ ಕೊನೆಯ ಕಂತಿನ ಅನುದಾನವನ್ನು ಬಿಡುಗಡೆ ಮಾಡಲು ವಿವಿಧ ಇಲಾಖೆಗಳಿಗೆ ಆರ್ಥಿಕ ಇಲಾಖೆ ಸೂಚನೆ ನೀಡಿದೆ.
ಈ ಕುರಿತು ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕರೂಪ ಕೌರ್ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಟಿಪ್ಪಣಿ ಬರೆದಿದ್ದು, ಯಾವುದೇ ಇಲಾಖೆ 2020-21 ನೇ ಸಾಲಿನಲ್ಲಿ ನವೆಂಬರ್ ತಿಂಗಳಿನಿಂದ ಫೆಬ್ರವರಿವರೆಗೂ ವೇತನ, ಭತ್ಯೆ, ಪಿಂಚಣಿ ಸೇರಿದಂತೆ ಅನುದಾನ ಬಿಡುಗಡೆ ಮಾಡಲು ಇಲಾಖಾ ಮುಖ್ಯಸ್ಥರಿಗೆ ಅಧಿಕಾರ ನೀಡಿ ಆದೇಶಿಸಿದ್ದಾರೆ.
ವಿವಿಧ ಇಲಾಖೆಗಳ ಮುಖಸ್ಥರು ತಮ್ಮ ವ್ಯಾಪ್ತಿಯಲ್ಲಿ 10 ಕೋಟಿ ವರೆಗಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯ ಅನುಮೋದನೆ ಪಡೆಯುವ ಅಗತ್ಯವಿಲ್ಲ ಎಂದು ತಿಳಿಸಿದ್ದು, ಆದರೆ, ಹಣ ಖರ್ಚು ಮಾಡಿರುವ ಬಗ್ಗೆ ಆರ್ಥಿಕ ಇಲಾಖೆಗೆ ವರದಿ ನೀಡುವಂತೆ ಸೂಚಿಸಲಾಗಿದೆ.

ಕೋವಿಡ್-19 ಪರಿಣಾಮದಿಂದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಈಗಾಗಲೇ ಹಣ ಬಿಡುಗಡೆಯ ಕುರಿತು ಇಲಾಖೆಗಳಿಗೆ ನೀಡಿರುವ ಸೂಚನೆ ಮುಂದುವರೆಯಲಿದ್ದು, 10 ಕೋಟಿವರೆಗಿನ ಹಾಲಿ ಚಾಲ್ತಿಯಲ್ಲಿರುವ ಹಾಗೂ ಈಗಾಗಲೇ ಚಾಲನೆಯಲ್ಲಿರುವ ಯೋಜನೆಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಬೇಕು. ಯಾವುದೇ ಹೊಸ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತಿಲ್ಲ. ಹಾಗೆ ಮಾಡಬೇಕೆಂದರೆ ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆಯುವುದು ಕಡ್ಡಾಯ ಎಂದು ಸೂಚಿಸಲಾಗಿದೆ.

ಯಾವುದೇ ಇಲಾಖೆ 10 ಕೋಟಿಗಿಂತ ಹೆಚ್ಚಿನ ಮೊತ್ತದ ಯೋಜನೆಗೆ ಅನುದಾನ ಬಿಡುಗಡೆ ಮಾಡುವ ಮೊದಲು ಆರ್ಥಿಕ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ. ಅಲ್ಲದೇ ಈಗಾಗಲೇ ಏಪ್ರೀಲ್ನಿಂದ ಅಕ್ಟೋಬರ್ ತಿಂಗಳಿನವರೆಗೆ ಬಿಡುಗಡೆ ಮಾಡಿರುವ ಹಣದಲ್ಲಿ ಶೇಕಡಾ 75 ರಷ್ಟು ಖರ್ಚು ಮಾಡಿರುವುದನ್ನು ಖಾತ್ರಿ ಮಾಡಿಕೊಂಡು ಹೆಚ್ಚುವರಿ ಹಣ ಬಿಡುಗಡೆ ಮಾಡಬೇಕು. ಈ ಬಗ್ಗೆ ಆರ್ಥಿಕ ಇಲಾಖೆಗೆ ವರದಿ ಸಲ್ಲಿಸುವಂತೆ ಇಲಾಖೆಗಳ ಮುಖ್ಯಸ್ಥರಿಗೆ ತಿಳಿಸಲಾಗಿದೆ.
Recommended Video
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications