ಲೋಕಾಯುಕ್ತ ಕೋಟಿ ಡೀಲ್, ಅಶ್ವಿನ್ ರಾವ್ ವಿರುದ್ಧ ಎಫ್ಐಆರ್
ಬೆಂಗಳೂರು, ಜು.01 : ಲೋಕಾಯುಕ್ತದಲ್ಲಿ ನಡೆದ ಹಣದ ಬೇಡಿಕೆ ಪ್ರಕರಣದ ಕುರಿತು ಎಸ್ಪಿ ಸೋನಿಯಾ ನಾರಂಗ್ ಮೂವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆದರೆ, ಕರ್ನಾಟಕ ಹೈಕೋರ್ಟ್ ಸೋನಿಯಾ ನಾರಂಗ್ ನೇತೃತ್ವದ ತನಿಖೆಗೆ ಬುಧವಾರ ತಡೆಯಾಜ್ಞೆ ನೀಡಿದೆ.
ಹೈಕೋರ್ಟ್ ತನಿಖೆಗೆ ತಡೆಯಾಜ್ಞೆ ನೀಡುವುದಕ್ಕೂ ಮೊದಲು ಲೋಕಾಯುಕ್ತ ನ್ಯಾಯಾಲಯಕ್ಕೆ ಎಫ್ಐಆರ್ ಸಲ್ಲಿಕೆ ಮಾಡಲಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 13ರಡಿ ಐಪಿಸಿ ಸೆಕ್ಷನ್ 384, 419, 120 (ಬಿ) ಎಫ್ಐಆರ್ ದಾಖಲು ಮಾಡಲಾಗಿದೆ. [ಅಶ್ವಿನ್ ರಾವ್ ವಿರುದ್ಧದ ತನಿಖೆಗೆ ತಡೆಯಾಜ್ಞೆ]

ಹಣದ ಬೇಡಿಕೆ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿರುವ ಲೋಕಾಯುಕ್ತ ನ್ಯಾ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಸೇರಿದಂತೆ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಶ್ವಿನ್ ರಾವ್ ಮತ್ತು ಹಣದ ಬೇಡಿಕೆ ಇಟ್ಟ ಕೃಷ್ಣರಾವ್ ಇಬ್ಬರೂ ಒಂದೇ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ. [ಲೋಕಾಯುಕ್ತದಲ್ಲೇ ಭ್ರಷ್ಟಾಚಾರ ಮುಂದೇನು?]
ಮುಂದಿನ ನಡೆ ಏನು? : ಅಶ್ವಿನ್ ರಾವ್ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಆದ್ದರಿಂದ ಸರ್ಕಾರ ರಚನೆ ಮಾಡಿರುವ ಎಸ್ಐಟಿ ಮತ್ತೊಂದು ಎಫ್ಐಆರ್ ದಾಖಲಿಸಲು ಸಾಧ್ಯವಿಲ್ಲ. ಈ ಎಫ್ಐಆರ್ನಲ್ಲಿರುವ ಮಾಹಿತಿ ಆಧರಿಸಿ ತನಿಖೆ ನಡೆಸಬೇಕಾಗುತ್ತದೆ. ಹೊಸ ಎಫ್ಐಆರ್ ದಾಖಲು ಮಾಡಬೇಕಿದ್ದರೆ. ಈ ಎಫ್ಐಆರ್ ರದ್ದುಗೊಳಿಸಬೇಕಾಗುತ್ತದೆ.
ಹಗರಣದ ವಿವರ : 'ನಿಮ್ಮ ಮೇಲೆ ದಾಳಿ ನಡೆಯಲಿದೆ, ನಿಮ್ಮ ವಿರುದ್ಧ ದಾಖಲೆಗಳನ್ನು ಸಂಗ್ರಹಣೆ ಮಾಡಲಾಗಿದೆ. ದಾಳಿ ತಪ್ಪಿಸಬೇಕಾದರೆ 1 ಕೋಟಿ ಕೊಡಿ' ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣಮೂರ್ತಿ ಎಂಬುವವರಿಂದ ಕೃಷ್ಣರಾವ್ ಎಂಬುವವರು ಹಣ ಕೇಳಿದ್ದರು ಎಂಬುದು ಆರೋಪವಾಗಿದೆ.
ಕೃಷ್ಣರಾವ್ ಎಂಬುವವರು ಹಣ ಕೇಳಿದ್ದಾರೆ ಎಂದು ಕೃಷ್ಣಮೂರ್ತಿ ಅವರು ಲೋಕಾಯುಕ್ತ ಎಸ್ಪಿ ಸೋನಿಯಾ ನಾರಂಗ್ ಅವರ ಬಳಿ ಮೌಖಿಕವಾಗಿ ಹೇಳಿಕೊಂಡಿದ್ದರು. ಈ ಬಗ್ಗೆ ಮೇ 11ರಂದು ಸೋನಿಯಾ ನಾರಂಗ್ ರಿಜಿಸ್ಟ್ರಾರ್ಗೆ ಪತ್ರ ಬರೆದಿದ್ದರು. ಇಂದು ದಾಖಲಾಗಿರುವ ಎಫ್ಐಆರ್ ಪ್ರಕಾರ ಮೇ 4ರಂದು ಕೃಷ್ಣರಾವ್ ಅವರು ಕೃಷ್ಣಮೂರ್ತಿ ಅವರನ್ನು ಭೇಟಿ ಮಾಡಿದ್ದರು.
ಎಫ್ಐಆರ್ ವಿವರ : ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಅಶ್ವಿನ್ ರಾವ್ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 384 (ಹೆದರಿಸಿ ಹಣ ವಸೂಲಿ), ಐಪಿಸಿ ಸೆಕ್ಷನ್ 419 (ನಕಲಿ ಹೆಸರು ಅಥವಾ ಬೇರೆಯವರ ಹೆಸರಲ್ಲಿ ಹಣ ವಸೂಲಿ), ಸೆಕ್ಷನ್ 120 ಬಿ (ಒಳಸಂಚು ನಡೆಸಿ ಭ್ರಷ್ಟಾಚಾರ ಅಥವಾ ಹಣ ವಸೂಲಿ) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications