ಕನಕಪುರ: ಗುಜರಿ ಅಂಗಡಿಯಲ್ಲಿ ಅಗ್ನಿಅನಾಹುತ
ಕನಕಪುರದಲ್ಲಿ ಗುಜರಿ ಅಂಗಡಿಯನ್ನಾವರಿಸಿದ್ದ ಬೆಂಕಿಯಿಂದಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳೆಲ್ಲ ಬೆಂಕಿಗೆ ಆಹುತಿಯಾಗಿದೆ.
ಕನಕಪುರ, ಮಾರ್ಚ್ 18: ಗುಜರಿ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಗ್ರಹಿಸಿಟ್ಟಿದ್ದ ಗುಜರಿ ಸಾಮಾನುಗಳು ನಾಶವಾಗಿರುವ ಘಟನೆ ಕನಕಪುರ ದ ಅಜೀಜ್ ನಗರದ ತೋಟಿ ಹೊಲದ ಬಳಿ ಇಂದು ನಡೆದಿದೆ.
ಗುಜರಿ ಅಂಗಡಿ ಮಾಜಿ ನಗರಸಭೆ ಅಧ್ಯಕ್ಷ ಅಮೀರ್ ಖಾನ್ ಅವರ ಪುತ್ರ ಖಾಲಿದ್ ಖಾನ್ ಎಂಬುವವರಿಗೆ ಸೇರಿದ್ದಾಗಿದೆ. ಶುಕ್ರವಾರ ಯಾರೂ ಇಲ್ಲದ ಸಂದರ್ಭದಲ್ಲಿ ಗುಜರಿ ಅಂಗಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಭಾರೀ ಪ್ರಮಾಣದಲ್ಲಿ ಉರಿಯಲಾರಂಭಿಸಿತು. ದಟ್ಟವಾಗಿ ಹೊರಬಂದ ಹೊಗೆ ಇಡೀ ನಗರವನ್ನೇ ಆವರಿಸಿತ್ತು. ಕ್ಷಣಕಾಲ ಸ್ಥಳೀಯರಲ್ಲಿ ಗಾಬರಿ ಮಡುಗಟ್ಟಿತ್ತು.[ಬೆಂಕಿ ಹಚ್ಚಿಕೊಂಡು, ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ]

ಗುಜರಿ ಅಂಗಡಿಯನ್ನಾವರಿಸಿದ್ದ ಬೆಂಕಿಯಿಂದಾಗಿ ಸಂಗ್ರಹಿಸಿಟ್ಟಿದ್ದ ವಸ್ತುಗಳೆಲ್ಲ ಬೆಂಕಿಗೆ ಆಹುತಿಯಾಗಿದೆ. ಬೆಂಕಿ ಹೊತ್ತಿ ಉರಿಯುವುದನ್ನು ಕಂಡ ಜನ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಆರಿಸಿದರಾದರೂ ಅಷ್ಟರಲ್ಲೇ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದ್ದವು.[ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು: ಬೈಕ್ ಭಸ್ಮ]
ಬೆಂಕಿ ಪಕ್ಕದ ಮನೆಗಳಿಗೆ ಆವರಿಸಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಘಟನೆಯಿಂದ ಸುಮಾರು 5ಲಕ್ಷ ರೂ. ನಷ್ಟವಾಗಿರಬಹುದೆಂದು ಅಂದಾಜಿಸಲಾಗಿದೆ. ಈ ಸಂಬಂಧ ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications