ಬಿಗ್ ಬಜಾರ್ ಗೋದಾಮಿಗೆ ಬೆಂಕಿ, 30 ಕೋಟಿ ನಷ್ಟ
ಆನೇಕಲ್, ಜ.30 : ಆನೇಕಲ್ ಪಟ್ಟಣದ ಇಂಡ್ಲವಾಡಿ ಕ್ರಾಸ್ನಲ್ಲಿರುವ ಬಿಗ್ ಬಜಾರ್ ಗ್ರೂಪ್ನ ಗೋದಾಮಿನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು, ಸುಮಾರು 30 ಕೋಟಿ ನಷ್ಟ ಉಂಟಾಗಿದೆ. ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ 220ಕ್ಕೂ ಹೆಚ್ಚು ಸಿಬ್ಬಂದಿ ಹೊರಗೋಡಿ ಬಂದಿದ್ದರಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. 12 ಅಗ್ನಿ ಶಾಮಕ ದಳದ ವಾಹನಗಳು ಸತತ ಆರು ಗಂಟೆ ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ.
ಗುರುವಾರ ಮಧ್ಯಾಹ್ನ 2.30ರ ಸುಮಾರಿನಲ್ಲಿ ಬಿಗ್ ಬಜಾರ್ ಗ್ರೂಪ್ಗೆ ಸೇರಿದ ಫೀಚರ್ ಸಪ್ಲೈ ಗೋದಾಮಿನಲ್ಲಿ ಶಾರ್ಟ್ ಸಕ್ರ್ಯುಟ್ನಿಂದ ಬೆಂಕಿ ಕಾಣಿಸಿಕೊಂಡಿತು. ಮೊದಲು ಗೋದಾಮಿನ ಐದನೇ ಅಂತಸ್ತಿನಲ್ಲಿ ಕಾಣಿಸಿಕೊಂಡ ಬೆಂಕಿ ನಂತರ, 5 ಎಕರೆ ವಿಸ್ತೀರ್ಣದ ಗೋದಾಮಿಗೆ ಹಬ್ಬಿದ್ದು, ಗೋದಾಮು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿದೆ.
ಅಗ್ನಿ ಆಕಸ್ಮಿಕದಿಂದ ಅಂದಾಜು 30 ಕೋಟಿಗೂ ಹೆಚ್ಚು ಬೆಲೆ ಬಾಳುವ ಸಿದ್ಧ ಉಡುಪುಗಳು, ಎಲೆಕ್ಟ್ರಿಕ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು, ಗೃಹ ಬಳಕೆ ವಸ್ತುಗಳು ಹಾಗೂ ಪೀಠೋಪಕರಣಗಳು ಭಸ್ಮವಾಗಿವೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ ರಮೇಶ್ ಬಾನೋತ್, ಅಗ್ನಿ ಅನಾಹುತದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿದ್ದು, ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಚಿತ್ರಗಳು : ಎಲ್ಎನ್ ಆಚಾರ್ಯ ಆನೇಕಲ್

5 ಎಕರೆ ಗೋದಾಮು ಅರ್ಧಗಂಟೆಯಲ್ಲಿ ಭಸ್ಮ
ಗುರುವಾರ ಮಧ್ಯಾಹ್ನ 2.30ರ ಸುಮಾರಿಗೆ ಗೋದಾಮಿನ ಐದನೇ ಅಂತಸ್ತಿನಲ್ಲಿ ಬೆಂಕಿ ಕಾಣಸಿಕೊಂಡಿತು. ಐದು ಎಕರೆ ವಿಸ್ತೀರ್ಣದ ಗೋದಾಮು ಅರ್ಧಗಂಟೆಯಲ್ಲಿ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ. ಆನೇಕಲ್ ಪಟ್ಟಣದ ಇಂಡ್ಲವಾಡಿ ಕ್ರಾಸ್ನಲ್ಲಿರುವ ಈ ಗೋದಾಮು ಬೆಂಕಿಗೆ ಆಹುತಿಯಾಗಿದ್ದರಿಂದ ಸುಮಾರು 30 ಕೋಟಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

12 ಅಗ್ನಿ ಶಾಮಕ ದಳದ ಕಾರ್ಯಾಚರಣೆ
ಗೋದಾಮಿಗೆ ಬೆಂಕಿ ಬಿದ್ದ ಸುದ್ದಿ ತಿಳಿದ ತಕ್ಷಣ 12 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿದವು. ಆದರೆ, ಸತತ 6 ಗಂಟೆಗಳ ಕಾರ್ಯಾಚರಣೆ ನಂತರ ಅವರ ಬೆಂಕಿಯನ್ನು ಹತೋಟಿಗೆ ತರಲು ಸಾಧ್ಯವಾಯಿತು. ಅಷ್ಟರಲ್ಲಿ ಬೆಲೆ ಬಾಳುವ ಸಿದ್ಧ ಉಡುಪುಗಳು, ಎಲೆಕ್ಟ್ರಿಕ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು, ಗೃಹ ಬಳಕೆ ವಸ್ತುಗಳು ಹಾಗೂ ಪೀಠೋಪಕರಣಗಳು ಭಸ್ಮವಾಗಿದ್ದವು.

5 ಕಿ.ಮೀ ಚಾಚಿದ ಬೆಂಕಿಯ ಕೆನ್ನಾಲಿಗೆ
ಗೋದಾಮಿಗೆ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆ ಸುಮಾರು 5 ಕಿ.ಮೀ ವರೆಗೂ ಕಾಣುತ್ತಿತ್ತು. ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡ ತಕ್ಷಣ 220ಕ್ಕೂ ಹೆಚ್ಚು ಸಿಬ್ಬಂದಿಯನ್ನ ಎಚ್ಚರಿಕೆ ಘಂಟೆ ಬಾರಿಸುವ ಮೂಲಕ ಹೊರಹೋಗುವಂತೆ ಮಾಡಲಾಯಿತು. ಆದ್ದರಿಂದ ಯಾವುದೇ ಪ್ರಾಣ ಹಾನಿ ಉಂಟಾಗಲಿಲ್ಲ.

5 ಎಕರೆಯಲ್ಲಿದೆ ಗೋದಾಮು
ಸುರಗಜಕ್ಕನಹಳ್ಳಿ ಗ್ರಾಮ ಪಂಚಾಯಿತಿಯಿಂದ ಗೋದಾಮು ನಡೆಸಲು ಪರಮಾನಿಗೆ ಪಡೆದುಕೊಳ್ಳಲಾಗಿತ್ತು. 5 ಎಕರೆ ಜಾಗದಲ್ಲಿ ಈ ಗೋದಾಮಿದೆ. ಚೀನಾದಿಂದ ಆಮದು ಮಾಡಿಕೊಳ್ಳಲಾದ ವಸ್ತುಗಳನ್ನು ಇಲ್ಲಿ ಸಂಗ್ರಹಿಸಲಾಗಿತ್ತು

ನೀರಿನ ಕೊರತೆಯಿಂದ ಕಾರ್ಯಾಚರಣೆ ವಿಳಂಬ
ಗೋದಾಮಿನ ಹೊರಗೆ ಅಗ್ನಿ ಅವಘಡ ಸಂಭವಿಸಿದರೆ ಸಹಾಯಕವಾಗಲಿ ಎಂದು ಪೈಪ್ ಗಳನ್ನು ಆಳವಡಿಸಲಾಗಿತ್ತು. ಆದರೆ, ಅವುಗಳಲ್ಲಿ ನೀರು ತುಂಬಿಸಿರಲಿಲ್ಲ. ಆದ್ದರಿಂದ ಬೆಂಕಿ ನಂದಿಸುವ ಕಾರ್ಯಾಚರಣೆಗೆ ನೀರಿನ ಕೊರತೆ ಉಂಟಾಯಿತು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications