ಪೇಜಾವರ ವಿಶ್ವೇಶತೀರ್ಥ ಶ್ರೀಗಳ ಪ್ರಥಮ ಆರಾಧನೆ: ಸಾರ್ವಜನಿಕ ಕಾರ್ಯಕ್ರಮವಿಲ್ಲ
ಬೆಂಗಳೂರು, ಡಿ 13: ಉಡುಪಿ ಪೇಜಾವರ ಅಧೋಕ್ಷಜ ಮಠದ 34ನೇ ಯತಿಗಳಾಗಿದ್ದ ವಿಶ್ವೇಶತೀರ್ಥ ಶ್ರೀಗಳ ಪ್ರಥಮ ಮಹಾಸಮಾರಾಧನಾ ಮಹೋತ್ಸವ, ಅವರ ಮೂಲ ಬೃಂದಾವನವಿರುವ ನಗರದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಆರಂಭವಾಗಿದೆ.
ಶ್ರೀಪಾದರ ಆರಾಧಾನ ಮಹೋತ್ಸವ ಡಿಸೆಂಬರ್ ಹದಿನೆಂಟರ ವರೆಗೆ ನಡೆಯಲಿದೆ. "ಆರಾಧನಾ ಪ್ರಯುಕ್ತದ ಎಲ್ಲಾ ಕಾರ್ಯಕ್ರಮಗಳು ಆನ್ಲೈನ್ /ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ" ಎಂದು ಪೂರ್ಣಪ್ರಜ್ಞ ವಿದ್ಯಾಪೀಠದ ಗೌರವ ಕಾರ್ಯದರ್ಶಿಗಳಾದ ವಿದ್ವಾನ್ ಕೇಶವಾಚಾರ್ಯ ಹೇಳಿದ್ದಾರೆ.
ಸರಕಾರದ ಆದೇಶದನ್ವಯ ಕೋವಿಡ್ - 19 ಪ್ರಯುಕ್ತ ಸಾರ್ವಜನಿಕ ಕಾರ್ಯಕ್ರಮವಿರುವುದಿಲ್ಲ. ಭಕ್ತರು ಸಾರ್ವಜನಿಕವಾಗಿ ಸೇರದೇ, ಮನೆಯಲ್ಲೇ ಕೂತು ಈ ಕಾರ್ಯಕ್ರಮಗಳನ್ನು ವೀಕ್ಷಿಸಬೇಕಾಗಿ ಪೇಜಾವರ ಮಠ ವಿನಂತಿಸಿಕೊಂಡಿದೆ.

ಆರಾಧನೆಯ ಎಲ್ಲಾ ಕಾರ್ಯಕ್ರಮಗಳು ಮಠದ ಈಗಿನ ಪೀಠಾಧಿಪತಿಗಳಾದ ಶ್ರೀವಿಶ್ವಪ್ರಸನ್ನ ತೀರ್ಥರ ನೇತೃತ್ವದಲ್ಲಿ ನಡೆಯಲಿದ್ದು, ಡಿಸೆಂಬರ್ ಹದಿನೆಂಟರ ವರೆಗೆ ವಿವಿಧ ಇತಿಹಾಸ ಗೋಷ್ಠಿ, ಪ್ರವಚನ ಕಾರ್ಯಕ್ರಮಗಳು ನಡೆಯಲಿವೆ.
ಡಿಸೆಂಬರ್ ಹದಿನಾಲ್ಕರಂದು ಮಂತ್ರಾಲಯ ರಾಘವೇಂದ್ರ ಮಠದ ಸುಭುದೇಂದ್ರ ತೀರ್ಥ ಶ್ರೀಗಳು, ಹದಿನೈದರಂದು ಉತ್ತರಾದಿ ಮಠದ ಸತ್ಯಾತ್ಮತೀರ್ಥ ಶ್ರೀಗಳು, ಹದಿನಾರರಂದು ಸುಬ್ರಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥರು, ಹದಿನೇಳರಂದು ಪಲಿಮಾರು ಮಠದ ವಿದ್ಯಾಧೀಶ ತೀರ್ಥರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಡಿಸೆಂಬರ್ ಹದಿನೇಳರಂದು ನಡೆಯುವ ಗುರುಗಣಸ್ತವನ ಕಾರ್ಯಕ್ರಮದಲ್ಲಿ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರು, ಸೋದೆ ಮಠದ ವಿಶ್ವವಲ್ಲಭ ತೀರ್ಥರು ಪಾಲ್ಗೊಳ್ಳಲಿದ್ದಾರೆ. ಇನ್ನು ಅದೇ ದಿನ 'ಯತಿಕುಲ ಚಕ್ರವರ್ತಿ' ಸ್ಮರಣ ಸಂಚಿಕೆ ಲೋಕಾರ್ಪಣೆಗೊಳ್ಳಲಿದೆ.
ಡಿಸೆಂಬರ್ 16,17,18ರಂದು ಪೂರ್ವಾರಾಧನೆ, ಮಧ್ಯಾರಾಧನೆ, ಉತ್ತರಾರಾಧನೆ ನಡೆಯಲಿದೆ. ಉತ್ತರಾರಾಧನೆ ಕಾರ್ಯಕ್ರಮದಲ್ಲಿ ಕಾಣಿಯೂರು, ಭೀಮನಕಟ್ಟೆ ಮತ್ತು ಚಿತ್ತಾಪುರ ಮಠದ ಶ್ರೀಗಳು ಪಾಲ್ಗೊಳ್ಳಲಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications