ಇಂದು ಕೆಪಿಸಿಸಿ ಕೊರೊನಾ ಕಾರ್ಯಪಡೆ ಸಭೆ
ಬೆಂಗಳೂರು, ಮಾ. 31: ಕೊರೋನಾ ಸೋಂಕು ನಿಯಂತ್ರಣ ಹಾಗೂ ಪರಿಸ್ಥಿತಿ ನಿರ್ವಹಣೆಗೆ ರಚಿಸಲಾಗಿರುವ ಕಾಂಗ್ರೆಸ್ ಕಾರ್ಯಪಡೆಯ ಮೊದಲ ಇಂದು ಸಭೆ (ಮಾ.31) ) ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಕಾರ್ಯಪಡೆಯ ಮುಖ್ಯಸ್ಥ, ಮಾಜಿ ಸ್ಪೀಕರ್ ರಮೇಶಕುನಾರ್, ಖಜಾಂಚಿ ಸಲೀಂ ಅಹ್ನದ್ ಹಾಗೂ ಸದಸ್ಯರುಗಳು ಭಾಗವಹಿಸಲಿದ್ದಾರೆ.












Click it and Unblock the Notifications