First Zika Virus in Karnataka : ಕರ್ನಾಟಕದ ರಾಯಚೂರಿನ 5ವರ್ಷದ ಬಾಲಕಿಗೆ ಝಿಕಾ ವೈರಸ್ ದೃಢ: ಸುಧಾಕರ್
ಬೆಂಗಳೂರು, ಡಿಸೆಂಬರ್ 12: ಕರ್ನಾಟಕದಲ್ಲಿ ಮೊದಲ ಝಿಕಾ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸೋಮವಾರ ನಗರದ ಆರೋಗ್ಯ ಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಯಚೂರು ಜಿಲ್ಲೆ ವ್ಯಾಪ್ತಿಯಲ್ಲಿ ಐದು ವರ್ಷ ಮಗುವಿಗೆ ಝಿಕಾ ವೈರಸ್ ಇರುವುದು ಖಚಿತವಾಗಿದೆ. ಇದನ್ನು ಪುಣೆಯ ಪ್ರಯೋಗಾಲಯ ವರದಿ ಬಹಿರಂಗಪಡಿಸಿದೆ ಎಂದರು.
ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಝಿಕಾ ವೈರಸ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಗತ್ಯ ಕಟ್ಟೆಚ್ಚರ ವಹಿಸುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಸೋಂಕಿತ ಬಾಲಕಿ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಬಾಲಕಿ ಟ್ರಾವೆಲ್ ಹಿಸ್ಟರಿ ಈವರೆಗೂ ಲಭ್ಯವಾಗಿಲ್ಲ.
ಸೋಂಕಿತ ಬಾಲಕಿ ಕಳೆದ 15 ದಿನಗಳಿಂದ ಜ್ವರ, ವಾಂತಿ, ಭೇದಿಯಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ನವೆಂಬರ್ 13ರಂದು ಜ್ವರ ಕಾಣಿಸಿಕೊಂಡಿತ್ತು. ಮೊದಲು ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಡೆಂಘೀ ಜ್ವರ ದೃಢಪಟ್ಟ ಹಿನ್ನೆಲೆ ವಿಜಯನಗರದ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.
ಅಲ್ಲಿ ವೈದ್ಯರು ಬಾಲಕಿಯ ಮೂರು ಮಾದರಿಗಳನ್ನು ಲ್ಯಾಬ್ ಗೆ ಕಳುಹಿಸಲಾಗಿತ್ತು. ಅದರಲ್ಲಿ ಎರಡು ನೆಗೆಟಿವ್ ಮತ್ತು ಒಂದು ಪಾಸಿಟಿವ್ ಬಂದಿದೆ ಎಂದು ಸಚಿವ ಸುಧಾಕರ್ ವಿವರಿಸಿದರು.

ಈ ಹಿಂದೆ ನೆರೆ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ ಈ ಝಿಕಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದವು. ಅದಾದ ಬಳಿಕ ಒಂದೇ ಒಂದು ಪ್ರಕರಣ ಸಹ ಕರ್ನಾಟಕದಲ್ಲಿ ಪತ್ತೆಯಾಗಿರಲಿಲ್ಲ. ಕರ್ನಾಟಕದ ಇದೇ ಮೊದಲ ಪ್ರಕರಣವಾಗಿದೆ. ಬಾಲಕಿಯ ಗಂಟಲು ಮಾದಿರಯನ್ನು ಡೆಂಗ್ಯೂ ಮತ್ತು ಚಿಕೂನ್ಗುನ್ಯಾ ಪರೀಕ್ಷೆಗೆ ಒಳಪಡಿಸಿದಾಗ ಈ ವೈರಸ್ ತಗುಲಿರುವುದು ಕಂಡು ಬಂದಿದೆ.
ರಾಯಚೂರು, ಪಕ್ಕದ ಜಿಲ್ಲೆಯಾದ್ಯಂತ ಕಟ್ಟೆಚ್ಚರ
ಝಿಕಾ ಸೋಂಕಿನ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಆಸ್ಪತ್ರೆಗಳಲ್ಲಿ ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಅವರ ಮಾದರಿಯನ್ನು ಝಿಕಾ ವೈರಸ್ ಪರೀಕ್ಷೆಗೆ ಕಳುಹಿಸಲು ರಾಯಚೂರು ಮತ್ತು ನೆರೆಯ ಜಿಲ್ಲೆಗಳ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಇದುವರೆಗೆ ಝಿಕಾ ವೈರಸ್ನ ಯಾವುದೇ ಹೊಸ ಪ್ರಕರಣಗಳು ಕಂಡುಬಂದಿಲ್ಲ. ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಈ ಕುರಿತು ಆರೋಗ್ಯ ಇಲಾಖೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಿದೆ ಈಡಿಸ್ ಸೊಳ್ಳೆಯ ಕಚ್ಚುವಿಕೆಯ ಮೂಲಕ ಝಿಕಾ ವೈರಸ್ ಸೋಂಕು ಹರಡುತ್ತದೆ. ಇದು ಡೆಂಗ್ಯೂ ಮತ್ತು ಚಿಕೂನ್ಗುನ್ಯಾದಂತಹ ಸೋಂಕುಗಳನ್ನು ಹರಡುತ್ತದೆ ಎಂದು ಅವರು ವಿವರಿಸಿದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications