ಆಹಾರ ಸಂಸ್ಕರಣೆ ಇಲಾಖೆಗೆ ರಶ್ಮಿ ಮಹೇಶ್ ವರ್ಗ
ಬೆಂಗಳೂರು, ಏ.30: ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಮಹಾ ನಿರ್ದೇಶಕಿಯಾಗಿದ್ದ ರಶ್ಮಿ ವಿ. ಮಹೇಶ್ ಸೇರಿದಂತೆ ಒಟ್ಟು ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಬುಧವಾರ ಸಂಜೆ ಆದೇಶ ಹೊರಡಿಸಲಾಗಿದೆ.
ರಶ್ಮಿ ವಿ. ಮಹೇಶ್ ಅವರನ್ನು ಆಹಾರ ಸಂಸ್ಕರಣೆ ಮತ್ತು ಕೊಯ್ಲು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಸಿಂಗ್ ಖರೋಲಾ ಅವರನ್ನು ಪ್ರವಾಸೋದ್ಯಮ ಇಲಾಖೆಗೆ ವರ್ಗ ಮಾಡಲಾಗಿದೆ.

ಬಿಬಿಎಂಪಿ ಆಯುಕ್ತರಾಗಿದ್ದ ಎಂ. ಲಕ್ಷ್ಮಿನಾರಾಯಣ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ (ವೈದ್ಯಕೀಯ ಶಿಕ್ಷಣ) ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗ ಮಾಡಲಾಗಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ ರಶ್ಮಿ ಅವರು ನಿರ್ವಹಿಸುತ್ತಿದ್ದ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಗೆ ಮಹಾ ನಿರ್ದೇಶಕರಾಗಿ ಲಕ್ಷ್ಮಿ ನಾರಾಯಣ ಹೆಚ್ಚುವತಿ ಹೊಣೆ ಹೊರಲಿದ್ದಾರೆ. [ರಶ್ಮಿ ಮಹೇಶ್ ಮೇಲಿನ ಹಲ್ಲೆ ಪೂರ್ವನಿಯೋಜಿತ]
ವರ್ಗಾವಣೆಗೊಂಡ ಅಧಿಕಾರಿಗಳು:
* ರಶ್ಮಿ ಮಹೇಶ್: ಆಹಾರ ಸಂಸ್ಕರಣೆ ಮತ್ತು ಕೊಯ್ಲು ತಂತ್ರಜ್ಞಾನ ಇಲಾಖೆ, ಕಾರ್ಯದರ್ಶಿ
* ಎಂ. ಲಕ್ಷ್ಮಿನಾರಾಯಣ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ (ವೈದ್ಯಕೀಯ ಶಿಕ್ಷಣ) ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಗೆ ಮಹಾ ನಿರ್ದೇಶಕ.
* ಅರವಿಂದ ಜಾಧವ್ : ಕರ್ನಾಟಕ ಮೇಲ್ಮನವಿ ಪ್ರಾಧಿಕಾರದ ಅಧ್ಯಕ್ಷ
* ಡಾ. ಜಿ. ಕಲ್ಪನಾ : ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ
* ಪ್ರದೀಪ್ ಸಿಂಗ್ ಖರೋಲಾ : ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ. (ಒನ್ ಇಂಡಿಯಾ ಸುದ್ದಿ)
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications