Get Updates
Get notified of breaking news, exclusive insights, and must-see stories!

ವಿರೋಧ ಪಕ್ಷದ ನಾಯಕರ ರೇಸ್‌ನಲ್ಲಿ ಐವರ ಹೆಸರು, ವಿವರ ತಿಳಿಯಿರಿ

ಬೆಂಗಳೂರು, ನವೆಂಬರ್‌ 16: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕವಾದ ಬೆನ್ನಲ್ಲೇ ಈಗ ಸುಮಾರು 5 ತಿಂಗಳಿನಿಂದ ಬಾಕಿ ಇರುವ ವಿರೋಧ ಪಕ್ಷದ ನಾಯಕನ ಆಯ್ಕೆ ಬಗ್ಗೆ ಚರ್ಚೆ ಶುರುವಾಗಿದೆ. ಈ ಸ್ಥಾನಕ್ಕೆ ಈಗ ನಾಲ್ಕರಿಂದ ಐದು ಮಂದಿ ಹೆಸರು ಕೇಳಿ ಬರುತ್ತಿದೆ.

ಇನ್ನು ಬಿಜೆಪಿಯ ಹಿರಿಯ ಶಾಸಕ ಮತ್ತು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಅವರು ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ನಾಲ್ಕೈದು ಶಾಸಕರೊಂದಿಗೆ ಆಕಾಂಕ್ಷಿಗಳಾಗಿದ್ದು, ಯಾರೇ ಆಯ್ಕೆಯಾದರೂ ಎಲ್ಲರಿಗೂ ಸ್ವೀಕಾರಾರ್ಹ ಎಂದು ಗುರುವಾರ ಹೇಳಿದ್ದಾರೆ.

Five names in race for appointment of leader of opposition in Karnataka

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಶುಕ್ರವಾರ ನಡೆಯಲಿದ್ದು, ಈ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಪಕ್ಷದ ನಾಯಕರ ಆಯ್ಕೆಯನ್ನು ಘೋಷಿಸುವ ಸಾಧ್ಯತೆಯಿದೆ.

'ವಿರೋಧ ಪಕ್ಷದ ನಾಯಕನ ಆಯ್ಕೆ ಬಗ್ಗೆ ನನಗೆ ತಿಳಿದಿಲ್ಲ. ಪಕ್ಷ ತೀರ್ಮಾನ ಮಾಡಬೇಕು, ಪಕ್ಷ ಯಾರೇ ತೀರ್ಮಾನ ಮಾಡಿದರೂ ಅವರಿಗೆ ಹುದ್ದೆ ಸಿಗುತ್ತದೆ. ನಾವು ಯಾರೂ ಅರ್ಜಿ ಸಲ್ಲಿಸಿಲ್ಲ. ಅಂತಹ ಸಂಸ್ಕೃತಿ ನಮ್ಮ ಪಕ್ಷದಲ್ಲಿ ಇಲ್ಲ ಎಂದು ಅಶೋಕ ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ವಿಪಕ್ಷ ನಾಯಕ ನೇಮಕಾತಿ ಬಗ್ಗೆ ಸದ್ಯ ಸುನೀಲ್ ಕುಮಾರ್, ಅಶ್ವಥ್ ನಾರಾಯಣ್ ಮತ್ತು ಆರಗ ಜ್ಞಾನೇಂದ್ರ ಅವರ ಹೆಸರು ಕೇಳಿ ಬಂದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್‌, ಇತ್ತೀಚೆಗೆ ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿರುವುದನ್ನು ಸೂಚಿಸಿ, ಆ ನೇಮಕಾತಿಯನ್ನು ಹೇಗೆ ಘೋಷಿಸಲಾಯಿತು ಎಂದು ನಿಮಗೆ ತಿಳಿದಿದೆ. ಹಾಗೆಯೇ ವಿರೋಧ ಪಕ್ಷದ ನಾಯಕ ಕೂಡ ಪ್ರಮುಖ ಹುದ್ದೆಯಾಗಿದೆ. ಏಕೆಂದರೆ ಒಬ್ಬರು ಪಕ್ಷವನ್ನು ಒಳಗೆ ಮತ್ತು ಒಬ್ಬರು ಹೊರಗೆ ಮುನ್ನಡೆಸಬೇಕು ಎಂದರು.

ಇದೆಲ್ಲವನ್ನೂ ಪರಿಗಣಿಸಿ ನಾಳೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ವೀಕ್ಷಕರ ಸಮ್ಮುಖದಲ್ಲಿ ನಾಯಕನ ಘೋಷಣೆ ಮಾಡಲಾಗುವುದು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕಿರಿಯ ಪುತ್ರ ವಿಜಯೇಂದ್ರ ಅವರನ್ನು ನೇಮಕ ಮಾಡುವ ಕುರಿತು ಘೋಷಣೆ ಮಾಡಿದೆ. ಕಳೆದ ವಾರ ಕೇಂದ್ರ ನಾಯಕತ್ವದ ಅಭಿಪ್ರಾಯವನ್ನು ಎರಡು ತಿಂಗಳ ಹಿಂದೆ ಶಾಸಕರು ಮತ್ತು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದೆ ಯಾರೇ ನಾಯಕರಾದರೂ ಯಾರ ಅಭ್ಯಂತರವಿಲ್ಲ ಎಂದು ತಿಳಿಸಿದರು.

ತಮ್ಮ ಹೆಸರೂ ಹರಿದಾಡುತ್ತಿರುವ ಬಗ್ಗೆ ಅರಿವಿದೆ ಎಂದ ಅಶೋಕ್‌ ಅವರು, ನಾನು ಸೇರಿದಂತೆ ನಾಲ್ಕೈದು ಜನ ಆಕಾಂಕ್ಷಿಗಳಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬುದಷ್ಟೇ ನಮ್ಮ ಗುರಿ. ಹೀಗಾಗಿ ಯಾವುದೇ ಗೊಂದಲ, ಅಡೆತಡೆಗಳಿಲ್ಲದೆ ಹೊಸ ನಾಯಕ ಚುನಾಯಿತರಾಗುತ್ತಾರೆ. ನಾನು ನಿನ್ನೆ ವಿ. ಸುನೀಲ್ ಕುಮಾರ್, ಸಿ ಎನ್ ಅಶ್ವಥ್ ನಾರಾಯಣ್ ಅವರ ಜೊತೆ ಮಾತನಾಡಿದ್ದೇನೆ, ಯಾರೇ ನಾಯಕರಾಗಲಿ ಅಭ್ಯಂತರವಿಲ್ಲ, ಪಕ್ಷ ಶ್ರೇಷ್ಠ, ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದರು.

ರಾಜ್ಯದಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿ ಇನ್ನೂ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ನೇಮಿಸಿಲ್ಲ, ಅವರು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಪಾತ್ರವನ್ನು ಸಹ ನಿರ್ವಹಿಸಲಿದ್ದಾರೆ. ಈ ಹಿಂದೆ ಜುಲೈನಲ್ಲಿ ನಡೆದ ವಿಧಾನಸಭೆ ಅಧಿವೇಶನ ವಿರೋಧ ಪಕ್ಷದ ನಾಯಕರಿಲ್ಲದೇ ನಡೆದಿತ್ತು.

ಈ ವರ್ಷದ ಮೇನಲ್ಲಿ ನಡೆದ 224 ಸದಸ್ಯ ಬಲದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿತು. ಕಾಂಗ್ರೆಸ್ 135, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಪಡೆದಿದ್ದವು.

ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಮುನ್ನ ಬಿಜೆಪಿ ಶಾಸಕಾಂಗ ಪಕ್ಷದ ಹೊಸ ನಾಯಕನನ್ನು ಆಯ್ಕೆ ಮಾಡಲು ಸಭೆ ನಡೆಯುತ್ತಿದೆ. ಈ ಹುದ್ದೆಗೆ ನೇಮಕಾರಿ ಮಾಡಲು ಸಾಧ್ಯವಾಗದ ಕಾರಣ ಆಡಳಿತಾರೂಢ ಕಾಂಗ್ರೆಸ್‌ನಿಂದ ಪಕ್ಷವು ತೀವ್ರ ಟೀಕೆಗಳನ್ನು ಎದುರಿಸುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+