Get Updates
Get notified of breaking news, exclusive insights, and must-see stories!

ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದೇಬಿಟ್ಟೆವು ಎಂದು ಬೀಗುತ್ತಿದ್ದವರಿಗೆ ಶಾಕ್: ಕುಮಾರಸ್ವಾಮಿ

ಬೆಂಗಳೂರು, ಮಾ.10: ರಾಜ್ಯದಲ್ಲಿ ಇನ್ನೇನು ಅಧಿಕಾರಕ್ಕೆ ಬಂದೇಬಿಟ್ಟೆವು ಎಂದು ಬೀಗುತ್ತಿದ್ದವರಿಗೆ ಪಂಚರಾಜ್ಯಗಳ ಫಲಿತಾಂಶ ಶಾಕ್ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷಕ್ಕೆ ಪರೋಕ್ಷ ಟಾಂಗ್ ನೀಡಿದರು.

ಐದು ರಾಜ್ಯಗಳ ಫಲಿತಾಂಶ ಸಂಬಂಧ ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಮೀಕ್ಷೆಗಳು ಭವಿಷ್ಯ ನುಡಿದಂತೆ ಚುನಾವಣೆ ಫಲಿತಾಂಶ ಬರುತ್ತಿದೆ. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಜ್ಜಾನೋದಯ ಮಾಡಿಕೊಳ್ಳುವ ಫಲಿತಾಂಶ ಇದಾಗಿದೆ ಎಂದು ಹೇಳಿದರು.

ಮೇಕೆದಾಟು ಯೋಜನೆಗೆ ತಮಿಳುನಾಡು ಜೊತೆ ಮಾತುಕತೆ ಅಗತ್ಯವಿಲ್ಲ: ಕುಮಾರಸ್ವಾಮಿ

ಗೋವಾ, ಪಂಜಾಬ್ ನಲ್ಲಿ ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳುತ್ತಿದ್ದರು. ಕರ್ನಾಟಕದಿಂದ ಸೂತ್ರಧಾರರನ್ನು ಗೋವಾಗೆ ಕಳುಹಿಸಿದ್ದರು ಎಂದ ಅವರು; ಜೆಡಿಎಸ್ ಮುಗಿಸಲು ಹೋದವರಿಗೆ ಪಾಠ ಕಲಿಸಿದ ಚುನಾವಣಾ ಫಲಿತಾಂಶ ಇದಾಗಿದೆ ಹಾಗೂ ಭಾರತೀಯ ಜನತಾ ಪಕ್ಷಕ್ಕೆ ಪೈಪೋಟಿ ನೀಡಲು ಜೆಡಿಎಸ್ ಸೂಕ್ತ ಎಂಬುದು ಸಾಬೀತಾಗಿದೆ ಎಂದು ಅವರು ತಿಳಿಸಿದರು.

Five state elecetion results shock to Congress: Kumaraswamy

ನೀರಾವರಿ ವಿಚಾರಗಳನ್ನು ಮುಂದಿಟ್ಟುಕೊಂಡು ನಾವು ಹೋರಾಟ ಮಾಡುತ್ತೇವೆ ಎಂದ ಅವರು, ಐದು ರಾಜ್ಯಗಳ ಪರಿಸ್ಥಿತಿ ಬೇರೆ, ನಮ್ಮ ರಾಜ್ಯಗಳ ಪರಿಸ್ಥಿತಿ ಬೇರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಿಂದೆ ಪಶ್ಚಿಮ ಬಂಗಾಳದಲ್ಲಿ ಬಂದ ಫಲಿತಾಂಶ ಹಾಗೂ ಪಂಜಾಬ್ ನಲ್ಲಿ ಆಗಿರುವ ಬದಲಾವಣೆ ನಮಗೆ ಪ್ರೇರಣೆ ತಂದಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+