ಕರ್ನಾಟಕ 2014 : ರಾಜ್ ಸ್ಮಾರಕ, ಮೊಬೈಲ್ ಒನ್ ಲೋಕಾರ್ಪಣೆ
ನವೆಂಬರ್ 13, ಬೆಂಗಳೂರಿನಲ್ಲಿ ರಾಜ್ ಪ್ರತಿಮೆಗೆ ಬೆಂಕಿ : ಬೆಂಗಳೂರಿನಲ್ಲಿ ವರನಟ ಡಾ.ರಾಜ್ ಕುಮಾರ್ ಪ್ರತಿಮೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದರು. ಸಿಪಾಯಿ ರಾಮು ಚಿತ್ರದಲ್ಲಿ ಅಣ್ಣಾವ್ರು ಸಿಪಾಯಿ ಟೋಪಿ ತೊಟ್ಟಿರುವ ಭಂಗಿಯ ಪ್ರತಿಮೆಗೆ ಕಿಡಿಗೇಡಿಗಳಿಂದ ಅಪಮಾನವಾಯಿತು. ರಾಜರಾಜೇಶ್ವರಿ ನಗರದ ಸಮೀಪವಿರುವ ಬಂಗಾರಪ್ಪ ನಗರದಲ್ಲಿ ಈ ಘಟನೆ ನಡೆಯಿತು. ಒಂದು ವಾರದಲ್ಲಿ ಉದ್ಘಾಟನೆಯಾಗಬೇಕಿದ್ದ ಪ್ರತಿಮೆಗೆ ಬೆಂಕಿ ಹಚ್ಚಲಾಗಿತ್ತು.
ನವೆಂಬರ್ 29, ಡಾ.ರಾಜ್ ಸ್ಮಾರಕ ಲೋಕಾರ್ಪಣೆ : ವರನಟ ಡಾ. ರಾಜಕುಮಾರ್ ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ನಿರ್ಮಿಸಿದ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ನಟ ರಜನಿಕಾಂತ್, ಚಿರಂಜೀವಿ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಡಿಸೆಂಬರ್ 8, ಮುಖ್ಯವಾಹಿನಿಗೆ ಬಂದ ನಕ್ಸಲರು : ಹಲವು ವರ್ಷಗಳಿಂದ ಭೂಗತರಾಗಿದ್ದ ನಕ್ಸಲ್ ನಾಯಕರಾದ ನೂರ್ ಜುಲ್ಫೀಕರ್ ಮತ್ತು ಸಿರಿಮನೆ ನಾಗರಾಜ್ ಶರಣಾದರು. ಚಿಕ್ಕಮಗಳೂರು ಪ್ರವಾಸಿ ಮಂದಿರಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ, ಪತ್ರಕರ್ತೆ ಗೌರಿ ಲಂಕೇಶ್, ಶಿವಸುಂದರ್, ನಗರಿ ಬಾಬಯ್ಯ ಮುಂತಾದವರು ಮುಖ್ಯವಾಹಿಗೆ ಬಂದ ನಕ್ಸಲರನ್ನು ಬರಮಾಡಿಕೊಂಡರು.
ಡಿಸೆಂಬರ್ 8, ಮೊಬೈಲ್ ಒನ್ ಲೋಕಾರ್ಪಣೆ : ಜಗತ್ತಿನ ಯಾವುದೇ ಮೂಲೆಯಲ್ಲಿ ಬೇಕಾದರೂ ಕುಳಿತು 4 ಸಾವಿರ ಸೇವೆಗಳನ್ನು ಪಡೆಯಬಹುದಾದ 'ಮೊಬೈಲ್ ಒನ್' ಸೇವೆಯನ್ನು ಕರ್ನಾಟಕಕ್ಕೆ ಸಮರ್ಪಣೆ ಮಾಡಲಾಯಿತು. ಮೊಬೈಲ್ ಇ-ಆಡಳಿತದಲ್ಲಿ ಮಹತ್ವದ ಹೆಜ್ಜೆಯಾದ ಸೇವೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಉದ್ಘಾಟಿಸಿದರು. [ಮೊಬೈಲ್ ಒನ್ ಸೇವೆ ಬಗ್ಗೆ ಇಲ್ಲಿದೆ ಮಾಹಿತಿ]
ಡಿಸೆಂಬರ್ 9, ಚಳಿಗಾಲದ ಅಧಿವೇಶನ ಆರಂಭ : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಚಳಿಗಾಲದ ಅಧಿವೇಶನ ಆರಂಭವಾಯಿತು. ಇಡೀ ಆಡಳಿತ ಯಂತ್ರ ಬೆಂಗಳೂರಿನಿಂದ ಬೆಳಗಾವಿಗೆ ಶಿಫ್ಟ್ ಆಯಿತು. ಅಧಿವೇಶನದಲ್ಲಿ ದಂದು ವೆಚ್ಚಕ್ಕೆ ಕಡಿವಾಣ ಹಾಕಲು ನಿರ್ಧರಿಸಿದ ಸರ್ಕಾರ ಶಾಸಕರ ರಾತ್ರಿ ಊಟಕ್ಕೆ ಕತ್ತರಿ ಹಾಕಿತು. ತಮ್ಮ ಸ್ವಂತ ಖರ್ಚಿನಲ್ಲಿಯೇ ಶಾಸಕರು ಊಟ ಮಾಡಬೇಕಾಯಿತು.
ಡಿಸೆಂಬರ್ 10, ಸದನದಲ್ಲಿ ಮೊಬೈಲ್ ಮಾಯೆ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಎರಡನೇ ದಿನ ಔರಾದ್ ಕ್ಷೇತ್ರದ ಶಾಸಕ ( ಬಿಜೆಪಿ) ಪ್ರಭು ಚೌವಾಣ್ ಮೊಬೈಲ್ ಫೋನ್ ದುರ್ಬಳಕೆ ಮಾಡಿಕೊಂಡು ಸುದ್ದಿ ಮಾಡಿದರು. ಕಲಾಪ ನಡೆಯುತ್ತಿರುವ ವೇಳೆ ಮೊಬೈಲ್ ಫೋನ್ನಲ್ಲಿ ಪ್ರಿಯಾಂಕ ಗಾಂಧಿ ಚಿತ್ರವನ್ನು ಜೂಮ್ ಮಾಡಿ ನೋಡಿ ಖಾಸಗಿ ವಾಹಿನಿಗಳ ಕ್ಯಾಮರಾ ಕಣ್ಣಿಗೆ ಸಿಕ್ಕಿಬಿದ್ದರು. ಹಿರೇಕೆರೂರು ಶಾಸಕ ಯು.ಬಿ.ಬಣಕಾರ ಮೊಬೈಲ್ನಲ್ಲಿ ಕ್ಯಾಂಡಿಕ್ರಷ್ ಗೇಮ್ ಆಡುತ್ತಿದ್ದರು.

ಡಿಸೆಂಬರ್ 20, ಮಠಗಳಿಗೆ ಮೂಗುದಾರ : ಚಳಿಗಾಲದ ಅಧಿವೇಶನದ ಕೊನೆ ದಿನ ಸರ್ಕಾರ ಮಠಗಳನ್ನು ತನ್ನ ಹತೋಟಿಗೆ ಕಾನೂನು ಪ್ರಕಾರ ತೆಗೆದುಕೊಳ್ಳಲು ಅನುಕೂಲವಾಗುವಂತೆ ವಿಧೇಯಕವೊಂದನ್ನು ಮಂಡನೆ ಮಾಡಿತು. ಸೂಕ್ತ ನಿರ್ವಹಣೆ ಇಲ್ಲದ ಮಠ, ವಿವಾದಕ್ಕೆ ಸಿಲುಕಿರುವ ಮಠ, ಧಾರ್ಮಿಕ ಸಂಸ್ಥೆಗಳು ಹಾಗೂ ದೇಗುಲಗಳ ಸ್ವಾಧೀನಕ್ಕಾಗಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ-2014ನ್ನು ವಿಧಾನಸಭೆಯಲ್ಲಿ ಮಂಡಿಸಿತು. [ಮಠಗಳಿಗೆ ಮೂಗುದಾರ ಹಾಕಲು ಸರ್ಕಾರ ಸಿದ್ಧ]
ಡಿಸೆಂಬರ್ 23, ಮಹಿಳೆ ಕೊಂದಿದ್ದ ಹುಲಿ ಬಲಿ : ಚಿಕ್ಕಮಗಳೂರಿನಲ್ಲಿ ಮಹಿಳೆ ಕೊಂದಿದ್ದ ಹುಲಿರಾಯನನ್ನು ಗಡಿಪಾರು ಮಾಡಿ ಬೆಳಗಾವಿಯ ಭೀಮಗಡದ ಕಾಡಿಗೆ ಬಿಡಲಾಗಿತ್ತು. ಡಿ.23ರಂದು ಅಲ್ಲಿಯೂ ಅದು ಮಹಿಳೆಯನ್ನು ಕೊಂದು ತಿಂದಿತು. ಖಾನಾಪುರ ತಾಲೂಕಿನ ಜಾಂಬೋಟಿ ಗ್ರಾಮದ ಬಳಿ ಅಂಜನಾ (23) ಎಂಬ ಮಹಿಳೆಯನ್ನು ಹುಲಿ ಕೊಂದು ಹಾಕಿತು. ನಂತರ ಹುಲಿಯನ್ನು ಹಿಡಿಯುವ ಕಾರ್ಯಾಚರಣೆ ಆರಂಭಗೊಂಡಿತು.
ಡಿಸೆಂಬರ್ 25, ನಂದಿತಾ ಸ್ಟೋರ್ ಆರಂಭ : ಡಿ.12ರಂದು ತೀರ್ಥಹಳ್ಳಿಯ ನಂದಿತಾ ತಂದೆ ಕೃಷ್ಣಮೂರ್ತಿ ಅವರ ದಿನಸಿ ಅಂಗಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಡಿ.25 ಅದೇ ಜಾಗದಲ್ಲಿ ಹೊಸ ಕಟ್ಟಡದಲ್ಲಿ 'ನಂದಿತಾ ಸ್ಟೋರ್' ಪುನಃ ಆರಂಭಗೊಂಡಿತು. ತೀರ್ಥಹಳ್ಳಿಯ ಬಾಳೇಬೈಲಿನಲ್ಲಿರುವ ನಂದಿತಾ ತಂದೆ ಕೃಷ್ಣಮೂರ್ತಿ ಅವರ ದಿನಸಿ ಅಂಗಡಿಯನ್ನು ಬಿಜೆಪಿ ನಾಯಕ ಆರಗ ಜ್ಞಾನೇಂದ್ರ ಮತ್ತು ಬಿಜೆಪಿ ಕಾರ್ಯಕರ್ತರು ದೇಣಿಗೆ ಎತ್ತಿ, ಪುನಃ ಅದೇ ಸ್ಥಳದಲ್ಲಿ ಕಟ್ಟಿಕೊಟ್ಟರು.

ಡಿ. 28, ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ : ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿರುವ ಕೋಕೋನಟ್ ಗ್ರೋವ್ ಎಂಬ ಹೋಟೆಲ್ ಬಳಿ ಬಾಂಬ್ ಸ್ಫೋಟ ಸಂಭವಿಸಿತು. ಹೊಸ ವರ್ಷಾಚರಣೆ ಆಚರಿಸಲು ಸಿದ್ಧತೆ ನಡೆಸುತ್ತಿದ್ದ ನಗರದ ಜನರು ಬಾಂಬ್ ಸ್ಫೋಟದ ಸುದ್ದಿ ಕೇಳಿ ಆತಂಕಗೊಂಡರು. ಬಾಂಬ್ ಸ್ಫೋಟದಲ್ಲಿ ಓರ್ವ ಮಹಿಳೆ ಮೃತಪಟ್ಟರೆ, ಮೂವರು ಗಾಯಗೊಂಡರು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications