ಪಂಡಿತ್ ಪ್ರವೀಣ್ ಗೋಡ್ಖಿಂಡಿಗೆ ಪಿತೃವಿಯೋಗ
ಬೆಂಗಳೂರು, ಏ. 14: ಖ್ಯಾತ ಕೊಳಲು ವಾದಕ ಪ್ರವೀಣ್ ಗೋಡ್ಖಿಂಡಿ ತಂದೆ ಪಂಡಿತ್ ವೆಂಕಟೇಶ್ ಗೋಡ್ಖಿಂಡಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಹೃದಯಾಘಾತದಿಂದ ನಿಧನರಾದರು.
ವೆಂಕಟೇಶ್ ಗೋಡ್ಖಿಂಡಿ ಅವರಿಗೆ 74 ವರ್ಷ ವಯಸ್ಸಾಗಿದ್ದು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಪತ್ನಿ ಪದ್ಮಜಾ ಗೋಡ್ಖಿಂಡಿ ಮಕ್ಕಳಾದ ಕೊಳಲು ವಾದಕ ಪ್ರವೀಣ್ ಗೋಡ್ಖಿಂಡಿ, ತಬಲಾ ವಾದಕ ಕಿರಣ್ ಗೋಡ್ಖಿಂಡಿ, ಮೊಮ್ಮಕ್ಕಳು ಸೇರಿದಂತೆ ಅಪಾರ ಅಭಿಮಾನಿಗಳು ಮತ್ತು ಶಿಷ್ಯವೃದಂದವನ್ನು ಅಗಲಿದ್ದಾರೆ.

ಮೂಲತಃ ಧಾರವಾಡದವರಾದ ಗೋಡ್ಖಿಂಡಿ ಕುಟುಂಬ ಕಳೆದ ವರ್ಷಗಳಿಂದ ಬೆಂಗಳೂರಿನ ಗಿರಿನಗರಲ್ಲಿ ನೆಲೆ ನಿಂತಿತ್ತು. ಸಂಗೀತ ಕಲಾಸಕ್ತರಿಗೆ ಮಾರ್ಗದರ್ಶನ ನೀಡುತ್ತಾ ಕೊಳಲು ವಾದನ ತರಬೇತಿ ನೀಡುತ್ತಿದ್ದರು.
ಆಕಾಶವಾಣಿ ಕಲಾವಿದರಾಗಿ ಹೆಸರು ಮಾಡಿದ್ದ ವೆಂಕಟೇಶ ಗೋಡ್ಖಿಂಡಿಯವರಿಗೆ ಹಲವಾರು ಪ್ರಶಸ್ತಿಗಳು ಸಂದಿವೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸಂಗೀತ ವಿದ್ವಾಂಸರು ಸೇರಿದಂತೆ ಶಿಷ್ಯವೃಂದ ಅಗಲಿದ ಗುರುವಿಗೆ ಅಂತಿಮ ನಮನ ಸಲ್ಲಿಸಿತು. ಬನಶಂಕರಿ ಚಿತಾಗಾರದಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿವೆ ಎಂದು ಕುಟುಂಬ ವರ್ಗ ಮಾಹಿತಿ ನೀಡಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು?











Click it and Unblock the Notifications