2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ
ಚಾಮರಾಜನಗರ, ಜನವರಿ 5: ಕರ್ನಾಟಕ ಜಾನಪದ ಅಕಾಡೆಮಿಯು 2020ನೇ ಸಾಲಿನ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, 30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಹಾಗೂ ಇಬ್ಬರನ್ನು ತಜ್ಞರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ. ಮಂಜಮ್ಮ ಜೋಗತಿ ಅವರು ಸುದ್ದಿಗೋಷ್ಠಿ ನಡೆಸಿ, ಕರ್ನಾಟಕ ಅಕಾಡೆಮಿಯ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗಾಗಿ ರಾಜ್ಯದ 30 ಜಿಲ್ಲೆಗಳ 30 ಹಿರಿಯ ಜಾನಪದ ಕಲಾವಿದರು ಹಾಗೂ ಇಬ್ಬರು ಜಾನಪದ ತಜ್ಞರನ್ನು ಆಯ್ಕೆ ಮಾಡಿರುವ ಪಟ್ಟಿ ಪ್ರಕಟಿಸಿದರು.
*ಬೆಂಗಳೂರು ಜಿಲ್ಲೆ ಎಂ.ಕೆ.ಸಿದ್ದರಾಜು-ಜಾನಪದ ಗಾಯನ,
* ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊನ್ನಗಂಗಮ್ಮ- ಸೋಬಾನೆಪದ,
* ರಾಮನಗರ ಜಿಲ್ಲೆ ತಿಮ್ಮಯ್ಯ-ತಮಟೆ ವಾದನ,
* ಕೋಲಾರ ಜಿಲ್ಲೆ ಕೆ.ಎನ್.ಚಂಗಪ್ಪ-ಭಜನೆ ತತ್ವಪದ,
* ಚಿಕ್ಕಬಳ್ಳಾಪುರ ಜಿಲ್ಲೆ ನಾರಾಯಣಪ್ಪ-ಕೀಲುಕುದುರೆ,
* ತುಮಕೂರು ಜಿಲ್ಲೆ ಸಿ.ವಿ.ವೀರಣ್ಣ-ವೀರಭದ್ರನ ಕುಣಿತ,
* ದಾವಣೆಗೆರೆ ಜಿಲ್ಲೆ ಭಾಗ್ಯಮ್ಮ-ಸೋಬಾನೆ ಹಾಡುಗಾರಿಕೆ,
* ಚಿತ್ರದುರ್ಗ ಜಿಲ್ಲೆ ಕೆಂಚಮ್ಮ-ಮದುವೆ ಹಾಡು,
* ಶಿವಮೊಗ್ಗ ಜಿಲ್ಲೆ ಕೆ.ಯುವರಾಜು-ಜಾನಪದ ಹಾಡುಗಾರಿಕೆ,
* ಮೈಸೂರು ಜಿಲ್ಲೆ ಕುಮಾರಸ್ವಾಮಿ-ಕಂಸಾಳೆಹಾಡುಗಾರಿಕೆ,
* ಮಂಡ್ಯ ಜಿಲ್ಲೆ ಭೂಮಿಗೌಡ-ಕೋಲಾಟ,
* ಹಾಸನ ಜಿಲ್ಲೆ ಗ್ಯಾರಂಟಿರಾಮಣ್ಣ-ಹಾಡುಗಾರಿಕೆ,
* ಚಿಕ್ಕಮಗಳೂರು ಜಿಲ್ಲೆ ಎಂ.ಸಿಭೋಗಪ್ಪ-ಚೌಡಿಕೆಪದ,
* ದಕ್ಷಿಣ ಕನ್ನಡ ಜಿಲ್ಲೆ ಗೋಪಾಲಕೃಷ್ಣ ಬಂಗೇರಾಮಧ್ವ-ಗೊಂಬೆಕುಣಿತ,
* ಉಡುಪಿ ಜಿಲ್ಲೆ ರಮೇಶ್ ಕಲ್ಮಾಡಿ-ಕರಗಕೋಲಾಟ,
* ಕೊಡಗು ಜಿಲ್ಲೆ ಕೆ.ಕೆ.ಪೊನ್ನಪ್ಪ-ಬೋಳೋಪಾಟ್,
* ಚಾಮರಾಜನಗರ ಜಿಲ್ಲೆ ಹೊನ್ನಮ್ಮ-ಸೋಬಾನೆಪದ,
* ಬೆಳಗಾವಿ ಜಿಲ್ಲೆ ಮುತ್ತಪ್ಪ ಅಲ್ಲಪ್ಪ ಸವದಿ-ತತ್ವಪದ,
* ಧಾರವಾಡ ಜಿಲ್ಲೆ ಮಲ್ಲೇಶಪ್ಪ ಫಕ್ಕೀರಪ್ಪತಡಸದ-ತತ್ವಪದ,
* ವಿಜಯಪುರ ಜಿಲ್ಲೆ ಸುರೇಶ ರಾಮಚಂದ್ರ ಜೋಶಿ-ಡೊಳ್ಳಿನಹಾಡುಗಾರಿಕೆ,
* ಬಾಗಲಕೋಟೆ ಜಿಲ್ಲೆ ಕೃಷ್ಣಪ್ಪ ಮಲ್ಲಪ್ಪ ಬೆಣ್ಣೂರ-ತತ್ವಪದ ಮತ್ತು ಭಜನೆ,
* ಉತ್ತರ ಕನ್ನಡ ಜಿಲ್ಲೆ ಸಹದೇವಪ್ಪ ಈರಪ್ಪ ನಡಗೇರಾ-ಲಾವಣಿಪದ,
* ಹಾವೇರಿ ಜಿಲ್ಲೆ ಬಸವರಾಜ ತಿರುಕಪ್ಪ ಶಿಗ್ಗಾಂವಿ-ತತ್ವಪದ,
* ಗದಗ ಜಿಲ್ಲೆ ಮುತ್ತಪ್ಪ ರೇವಣಪ್ಪ ರೋಣದ-ಪುರುವಂತಿಕೆ,
* ಕಲಬುರಗಿ ಜಿಲ್ಲೆ ಸಾಯಬಣ್ಣ-ಹಲಗೆವಾದನ,
* ಬೀದರ ಜಿಲ್ಲೆ ವೈಜಿನಾಥಯ್ಯ ಸಂಗಯ್ಯಸ್ವಾಮಿ-ಚಕ್ರಿಭಜನೆ,
* ರಾಯಚೂರು ಜಿಲ್ಲೆ ಜಂಬಣ್ಣ-ಹಗಲುವೇಷ,
* ಕೊಪ್ಪಳ ಜಿಲ್ಲೆ ತಿಪ್ಪಣ ಅಂಬಾಜಿ ಸುಗತೇಕರ -ಗೋಂದಲಿಗರು,
* ಬಳ್ಳಾರಿ ಜಿಲ್ಲೆ ಗೋಂದಳಿ ರಾಮಪ್ಪ-ಗೋಂದಳಿಪದ,
* ಯಾದಗಿರಿ ಜಿಲ್ಲೆ ಗೋಗಿ ಬಸವಲಿಂಗಮ್ಮ-ಮದುವೆ ಹಾಡು ಇವರು ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವಾರ್ಷಿಕ ಗೌರವ ಜಾನಪದ ತಜ್ಞ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ. ಜಾನಪದ ತಜ್ಞರಾದ ದಕ್ಷಿಣ ಕನ್ನಡ ಜಿಲ್ಲೆಯ ಡಾ. ಗಾಯತ್ರಿ ನಾವಡ ಅವರು ಡಾ.ಜೀ.ಶಂ. ಪಶಸ್ತಿಗೆ ಮತ್ತು ಕಲಬುರಗಿ ಜಿಲ್ಲೆಯ ಬಸವರಾಜು ಸಬರದ ಅವರು ಡಾ.ಗದ್ದಗೀಮಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜಾನಪದ ಕಲಾವಿದರಿಗೆ ತಲಾ 25 ಸಾವಿರ ರೂ. ಪ್ರಶಸ್ತಿ ಮೊತ್ತದ ಜೊತೆಗೆ ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ. ತಜ್ಞ ಪ್ರಶಸ್ತಿ ಪುರಸ್ಕೃತರಿಗೆ ತಲಾ 50 ಸಾವಿರ ರೂ. ಪ್ರಶಸ್ತಿ ಮೊತ್ತದ ಜೊತೆಗೆ ಸ್ಮರಣಿಕೆ ನೀಡಿ ಗೌರವಿಸಲಾಗುತ್ತದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ.ಮಂಜಮ್ಮ ಜೋಗತಿ ಅವರು ತಿಳಿಸಿದರು.
ಜಾನಪದ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಚಾಮರಾಜನಗರದಲ್ಲಿ ಫೆಬ್ರವರಿ ಮೊದಲ ವಾರದಲ್ಲಿ ಆಯೋಜಿಸಲಾಗುವುದು. ಸಮಾರಂಭದ ದಿನಾಂಕ ನಿಗದಿಯಾಗಬೇಕಿದ್ದು, ಸಮಾರಂಭಕ್ಕೆ ಜಿಲ್ಲಾಡಳಿತದ ಸಹಕಾರ ಅಗತ್ಯವೆಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ.ಮಂಜಮ್ಮ ಜೋಗತಿ ಅವರುಮನವಿ ಮಾಡಿದರು.

Recommended Video
ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ ಅವರು ಮಾತನಾಡಿ, ಜಾನಪದ ಕಲೆಗೂ ಚಾಮರಾಜನಗರ ಜಿಲ್ಲೆಗೂ ಅವಿನಾಭಾವ ಸಂಬಂಧ ಇದೆ. ಜಾನಪದ ಕಲೆಗಳ ತವರೂರೆಂದೇ ಕರೆಯಲ್ಪಡುವ ಚಾಮರಾಜನಗರ ಜಿಲ್ಲೆ ಕನ್ನಡ ಸಾಹಿತ್ಯ, ಭಾಷೆ, ವೈವಿಧ್ಯತೆಯಲ್ಲಿ ನಿಜವಾದ ಸೊಗಡು ಉಳಿಸಿಕೊಂಡು ಬಂದಿದೆ ಎಂದರು.
ಅಪಾರವಾದ ಜಾನಪದ ಸಂಪತ್ತು ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿಯೇ ಕರ್ನಾಟಕ ಜಾನಪದ ಅಕಾಡೆಮಿ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸುವ ಐತಿಹಾಸಿಕ ತೀರ್ಮಾನ ಕೈಗೊಂಡಿದೆ. ಇದಕ್ಕಾಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಜನತೆ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ಕಾರ್ಯಕ್ರಮ ಆಯೋಜನೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ ಅವರು ತಿಳಿಸಿದರು. ಜಾನಪದ ಅಕಾಡೆಮಿಯ ಸದಸ್ಯರಾದ ಸಿ.ಎಂ. ನರಸಿಂಹಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎಚ್.ಕೆ ಗಿರೀಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications