ಪಡಿತರದಾರರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ
ರಾಜ್ಯ ಸರ್ಕಾರವು ಪಡಿತರದಾರರಿಗೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲು ಮುಂದಾಗಿದೆ. ರಾಜ್ಯದೆಲ್ಲೆಡೆ ಪಡಿತರದಲ್ಲಿ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಿಸಬೇಕು ಎಂದು ಬೇಡಿಕೆ ಕೇಳಿ ಬಂದಿದ್ದು, ಈ ಬಗ್ಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿರುವ ಸಚಿವ ಕೆ.ಎಚ್.ಮುನಿಯಪ್ಪ, ಪಡಿತರದಲ್ಲಿ ತೊಗರಿ ಬೇಳೆ ವಿತರಿಸಬೇಕೆಂದು ಬೇಡಿಕೆ ಬಂದಿರುವ ಹಿನ್ನೆಲೆ ಈ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ ಎಂದು ಹೇಳಿದ್ದಾರೆ.

ಇದು ಇಂದಿನ ಬೇಡಿಕೆಯಲ್ಲ. ತೊಗರಿ ಬೇಳೆ ಬೇಕೆಂದು ಬಹಳ ದಿನಗಳಿಂದಲೂ ಬೇಡಿಕೆ ಇದೆ. ಹಾಗಾಗಿ ಪಡಿತರದಲ್ಲಿ ತೊಗರಿ ಸೇರ್ಪಡೆಯಾದರೆ, ರೈತರು ಹಾಗೂ ಗ್ರಾಹಕರಿಬ್ಬರಿಗೂ ತುಂಬಾ ಅನುಕೂಲವಾಗಲಿದೆ. ಇದರಿಂದ ಹಾಸ್ಟೆಲ್ಗಳಿಗೂ ಬೇಳೆ ಪೂರೈಸಲು ಸಹಾಯಕವಾಗಲಿದೆ ಎಂದಿದ್ದಾರೆ.
ಇದೇ ವೇಳೆ ಮಾತನಾಡಿರುವ ಸಚಿವ ಕೆ.ಎಚ್.ಮುನಿಯಪ್ಪ, ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುತ್ತಿಲ್ಲ. ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು ಕೂಡ ಯಾವ ನಿರ್ಬಂಧವೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಅಕ್ಕಿಯೂ ಸಿಗಲಿದೆ: ಇಲ್ಲಿವರೆಗೆ ಅನ್ನಭಾಗ್ಯ ಯೋಜನೆಯಡಿ ಕೇವಲ ಐದು ಕೆ.ಜಿ ಅಕ್ಕಿಯನ್ನು ರಾಜ್ಯ ಸರ್ಕಾರ ವಿತರಿಸುತ್ತಿತ್ತು. ಬಾಕಿ ಐದು ಕೆ.ಜಿ.ಬದಲಿಗೆ ಹಣವನ್ನು ಪಡಿತರದಾರರ ಖಾತೆಗೆ ಜಮೆ ಮಾಡುತ್ತಿತ್ತು. ಈಗ ಹಣದ ಬದಲಿಗೆ ಅಕ್ಕಿಯನ್ನೇ ನೀಡುವುದಾಗಿ ಆಹಾರ ಸಚಿವರು ಹೇಳಿದ್ದಾರೆ.

ಕಳೆದ ವರ್ಷ ಅನ್ನಭಾಗ್ಯ ಯೋಜನೆ ಜಾರಿಯಾದಾಗ ಪಡಿತರದಾರರಿಗೆ ತಲಾ ಹತ್ತು ಕೆ.ಜಿ ಅಕ್ಕಿ ಘೋಷಿಸುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ರಾಜ್ಯದಿಂದಲೇ ಹತ್ತೂ ಕೆ.ಜಿ ಅಕ್ಕಿ ನೀಡಲು ಅಗತ್ಯ ದಾಸ್ತಾನು ಇರಲಿಲ್ಲ. ಹೀಗಾಗಿ ಅಕ್ಕಿ ನೀಡುವಂತೆ ರಾಜ್ಯ ಸರ್ಕಾರವು ಕೇಂದ್ರದ ಮೊರೆ ಹೋಗಿತ್ತು. ಇದಕ್ಕೆ ಹೆಚ್ಚುವರಿ ಹಣ ನೀಡುವುದಾಗಿಯೂ ಕಾಂಗ್ರೆಸ್ ಸರ್ಕಾರ ಹೇಳಿತ್ತು. ಆದರೆ, ಕೇಂದ್ರ ಸರ್ಕಾರವು ಅಕ್ಕಿ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಇದಾದ ಬಳಿಕ ಕೇವಲ ಐದು ಕೆ.ಜಿ ಅಕ್ಕಿಯನ್ನಷ್ಟೇ ರಾಜ್ಯ ಸರ್ಕಾರ ನೀಡಲು ನಿರ್ಧರಿಸಿ, ಬಾಕಿ ಅಕ್ಕಿಗೆ ಹಣ ನೀಡುವ ಘೋಷಿಸಿತ್ತು.
ಇನ್ನು ಇತ್ತೀಚೆಗೆ ಹೆಚ್ಚುವರಿ ಅಕ್ಕಿಗಾಗಿ ರಾಜ್ಯದವರೇ ಆದ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಚಿವ ಕೆ.ಎಚ್.ಮುನಿಯಪ್ಪ ಭೇಟಿಯಾಗಿದ್ದರು. ಈ ವೇಳೆ ರಾಜ್ಯಕ್ಕೆ ಅನ್ನಭಾಗ್ಯ ಯೋಜನೆಯಡಿ ಹೆಚ್ಚು ಅಕ್ಕಿ ನೀಡಲು ಪೂರೈಕೆ ಮಾಡುವಂತೆ ಮನವಿ ಮಾಡಿದ್ದರು. ಆಗ ಕೇಂದ್ರದಿಂದ ಅಕ್ಕಿ ಪೂರೈಸುವ ಭರವಸೆಯನ್ನು ನೀಡಿದ್ದಾರೆ ಎಂದು ಹೇಳಲಾಗಿತ್ತು.
ಈ ಬಗ್ಗೆಯೂ ಮಾತನಾಡಿದ್ದ ಸಚಿವ ಕೆ.ಎಚ್.ಮುನಿಯಪ್ಪ, ʼರಾಜ್ಯಕ್ಕೆ ಅಗತ್ಯವಿರುವ ಅಕ್ಕಿ ಪೂರೈಸುವ ಭರವಸೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿದ್ದಾರೆ. ಈ ಸಂಬಂಧ ಮುಂದಿನ ಹಂತದಲ್ಲಿ ಕೇಂದ್ರಕ್ಕೆ ಪ್ರಸ್ತಾವನೆಯನ್ನೂ ಕಳುಹಿಸಲಾಗುವುದು. ಪ್ರತಿ ತಿಂಗಳಿಗೆ 20 ಸಾವಿರ ಮೆಟ್ರಿಕ್ ಟನ್ ಅಕ್ಕಿಯ ಅಗತ್ಯವಿದೆ. ರಾಜ್ಯದ ಜನರು ಹಣದ ಬದಲು ಬೇಳೆ ಹಾಗೂ ಅಕ್ಕಿಗೆ ಮನವಿ ಮಾಡಿದ್ದಾರೆ. ಇವುಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ಹೇಳಿದ್ದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ











Click it and Unblock the Notifications