ಪೇಪರ್ ನಲ್ಲಿ ಬೋಂಡಾ ಕಟ್ಟಿಕೊಟ್ರೆ ತಗೋಬೇಡಿ, ಅದು ವಿಷ!
ಪೇಪರ್ ನಲ್ಲಿ ಬೋಂಡಾ, ಬಜ್ಜಿ ಕಟ್ಟುಕೊಟ್ರೆ ತಗೆದುಕೊಳ್ಳಬೇಡಿ, ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆ ಅಡಿಯಲ್ಲಿ ನ್ಯೂಸ್ ಪೇಪರಲ್ಲಿ ಆಹಾರ ಪದಾರ್ಥ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಅಧಿಕಾರಿ ಆರ್.ಎಸ್.ಬಿರಾದಾರ ಹೇಳಿದ್ದಾರೆ.
ಕಲಬುರಗಿ, ಮೇ 19: ನ್ಯೂಸ್ ಪೇಪರ್ ನಲ್ಲಿ ಬೋಂಡಾ, ಬಜ್ಜಿ ಕಟ್ಟುಕೊಟ್ರೆ ತಗೆದುಕೊಳ್ಳಬೇಡಿ, ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆ ಅಡಿಯಲ್ಲಿ ನ್ಯೂಸ್ ಪೇಪರಲ್ಲಿ ಆಹಾರ ಪದಾರ್ಥ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ ಕಲಬುರಗಿ ಜಿಲ್ಲೆಯಲ್ಲಿ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಅಂಕಿತ ಅಧಿಕಾರಿ ಆರ್.ಎಸ್.ಬಿರಾದಾರ ಹೇಳಿದ್ದಾರೆ.
ನ್ಯೂಸ್ ಪೇಪರಿನ ಮಸಿ ಮತ್ತು ಪೇಪರಿಗೆ ಅಂಟಿಕೊಂಡಿರುವ ವಿಷಕಾರಿ ಇಂಕು ಆಹಾರ ಪದಾರ್ಥಕ್ಕೆ ಅಂಟಿಕೊಂಡು ಅದರಲ್ಲಿರುವ ವಿಷವನ್ನು ತಿಂದರೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮವಾಗುವುದೆಂದು ಸಾರ್ವಜನಿಕರಿಗೆ ತಿಳಿ ಹೇಳಲಾಗಿದೆ.

ಸುಣ್ಣದ ಪ್ಯಾಕೇಟ್ ಒಡೆದಾಗ ಕಣ್ಣಿನಲ್ಲಿ ಬೀಳುವ ಸಂಭವವಿದ್ದು, ಮಕ್ಕಳು ಮತ್ತು ಸುಣ್ಣವನ್ನು ಉಪಯೋಗಿಸುತ್ತಿರುವ ಜನಸಮಾನ್ಯರಿಗೆ ಸುಣ್ಣದ ಟ್ಯೂಬ್ ಮತ್ತು ಸುಣ್ಣದ ಪ್ಯಾಕೇಟ್ ಮಾರಾಟ ಮಾಡದಂತೆಯೂ ನಿಷೇಧಿಸಿದೆ.
ಮಸಿ ಅಳಿಸುವ ದ್ರವ, ಉಗುರು ಪಾಲೀಷ್ ರಿಮೂವರ್ ಮುಂತಾದವನ್ನು ಮಕ್ಕಳು, ಮಹಿಳೆಯರು ಮತ್ತು ಸಾರ್ವಜನಿಕರು ಬಳಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪ್ರಯುಕ್ತ ಇವುಗಳ ಬಳಕೆಯನ್ನು ಸಹ ನಿಷೇಧಿಸಲಾಗಿದೆ.

ಈ ಮೇಲಿನ ನಿಷೇಧಿತ ವಸ್ತುಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಅಂಕಿತ ಅಧಿಕಾರಿಗಳು ಆಹಾರ ಸುರಕ್ಷಾತಾ ಮತ್ತು ಗುಣಮಟ್ಟ ಪ್ರಾಧಿಕಾರ, ಹಳೆ ಎಸ್.ಪಿ. ಕಚೇರಿ ಹಿಂಭಾಗ ಕಲಬುರಗಿ ಕಚೇರಿಗೆ ದೂರು ಸಲ್ಲಿಸಬಹುದು ಎಂದು ಅಂಕಿತ ಅಧಿಕಾರಿಗಳು ತಿಳಿಸಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications