ಬೆಂಗಳೂರು ಬಿಟ್ಟು ಬೇರೆ ಜಿಲ್ಲೆಯವರು ಈ ಸುದ್ದಿ ಓದಿ
ಬೆಂಗಳೂರು, ಮಾ.31: ಕರ್ನಾಟಕದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಜಲಕ್ಷಾಮ ಸಮಸ್ಯೆ ಇರುವುದು ಹೊಸದೇನಲ್ಲ. ಅದರೆ, ಲಭ್ಯವಿರುವ ನೀರಿನ ಪೂರೈಕೆ ಹಾಗೂ ನಿರ್ವಹಣೆಯಲ್ಲಿ ಲೋಪವಾದರೆ ಏನು ಮಾಡುವುದು? ಚಿಂತಿಸಬೇಡಿ, ಇದಕ್ಕಾಗಿ ಸಿದ್ದರಾಮಯ್ಯ ಸರ್ಕಾರ 24X7 ಕಂಟ್ರೋಲ್ ರೂಮ್ ಸ್ಥಾಪನೆ ಮಾಡಿದೆ.
ನಗರಾಭಿವೃದ್ಧಿ ಖಾತೆ ಸಚಿವ ವಿನಯ್ ಕುಮಾರ್ ಸೊರಕೆ ಅವರು ಸೋಮವಾರ ಇಂಥದ್ದೊಂದು ಉಪಯೋಗಿ ವ್ಯವಸ್ಥೆಗೆ ಚಾಲನೆ ನೀಡಿದರು. ಬೆಂಗಳೂರು ಹೊರತುಪಡಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ತಲೆದೋರುವ ಜಲ ಪೂರೈಕೆ, ನಿರ್ವಹಣೆ ಹಾಗೂ ಒಳಚರಂಡಿ ಸಮಸ್ಯೆಗಳಿಗೆ ಸ್ಪಂದಿಸಲು ಈ ಕಂಟ್ರೋಲ್ ರೂಮ್ ಸಿದ್ಧವಿರುತ್ತದೆ. [1 ರು ಗೆ ಎಟಿಎಂ ಆರಂಭಿಸಿದ ಡಿಕೆಶಿ ಬ್ರದರ್ಸ್]
ದಿನವಿಡಿ ಕಾರ್ಯ ನಿರ್ವಹಿಸುವ ಈ ಕಂಟ್ರೋಲ್ ರೂಮನ್ನು ಕರ್ನಾಟಕ ನಗರ ಜಲ ಪೂರೈಕೆ ಹಾಗೂ ಒಳಚರಂಡಿ ನಿರ್ವಹಣಾ ಮಂಡಳಿ (ಕೆಯುಡಬ್ಲ್ಯೂಎಸ್ ಡಿಬಿ) ಸಿಬ್ಬಂದಿ ನಿರ್ವಹಿಸಲಿದ್ದಾರೆ. ಈ ಕಂಟ್ರೋಲ್ ರೂಮಿನ ಮುಖ್ಯ ಉದ್ದೇಶ ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಉತ್ತಮ ಸೇವೆ ನೀಡುವುದಾಗಿದೆ. [ಫ್ಲೋರೋಸಿಸ್: ಕುಡಿಯುವ ನೀರಿನ ಬಗ್ಗೆ ಎಚ್ಚರ]

ಆರಂಭದಲ್ಲಿ ಸುಮಾರು ರಾಜ್ಯದ 213 ನಗರ, ಪಟ್ಟಣಗಳಿಗೆ ಈ ಕಂಟ್ರೋಲ್ ರೂಮ್ ಸೌಲಭ್ಯ ಸಿಗಲಿದೆ. ಮುಂದಿನ ಹಂತದಲ್ಲಿ ಸುಮಾರು 90,000 ಹಳ್ಳಿಗಳಿಗೆ ಈ ವ್ಯವಸ್ಥೆ ವಿಸ್ತರಣೆಯಾಗಲಿದೆ. [ದೀಪದ ಕೆಳಗೆ ಕತ್ತಲೆ: ಚಿಕ್ಕಮಗಳೂರಲ್ಲಿ ಜಲ ಅಭಾವ]
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಜೊತೆ ಮಾತುಕತೆ ನಡೆಸಲಾಗುತ್ತಿದ್ದು, ಎಲ್ಲಾ ಜಿಲ್ಲಾಧಿಗಳಿಗೆ ಈ ಬಗ್ಗೆ ಮನವಿ ಕಳಿಸಲಾಗಿದೆ. ನೀರಿನ ಸಮಸ್ಯೆ ಕುರಿತಂತೆ ಯಾವುದೇ ಕುಂದು ಕೊರತೆಗಳು ಕಂಡು ಬಂದರೆ ತಕ್ಷಣವೇ ಕರೆ ಮಾಡಬಹುದು ಎಂದು KUWSDB ವ್ಯವಸ್ಥಾಪಕ ನಿರ್ದೇಶಕ ಮಣಿವಣ್ಣನ್ ಅವರು ಹೇಳಿದ್ದಾರೆ. [ನೀರಿನ ಬೆಲೆ ಏರಿದೆ, ವಿವರಗಳು ಇಲ್ಲಿದೆ]
ನಾಗರಿಕರೇ ಕುಂದು ಕೊರತೆ ಹಂಚಿಕೊಳ್ಳಲು ಹೀಗೆ ಮಾಡಿ: [ಕುಡಿಯುವ ನೀರಿನ ಕೊರತೆ ಇದೆಯೇ? ಕರೆ ಮಾಡಿ]
* water ಎಂದು ಟೈಪ್ ಮಾಡಿ 92200 92200ಗೆ ಎಸ್ಎಂಎಸ್ ಕಳಿಸಿ.
* (080) 4000 1000 ಕರೆ ಮಾಡಿ ದೂರು ದಾಖಲಿಸಿ.
* 9880655555 ಬಳಸಿ ವಾಟ್ಸಪ್ ಮೂಲಕ ಸಮಸ್ಯೆ ತಿಳಿಸಿ.
* ಕೇಂದ್ರದ ಫೇಸ್ ಬುಕ್ ಪುಟಕ್ಕೆ ಹೋಗಲು ಇಲ್ಲಿ ಕ್ಲಿಕ್ ಮಾಡಿ.
* ಇಮೇಲ್ ಮಾಡಲು [email protected] ಐಡಿ ಬಳಸಿ.
ಒನ್ ಇಂಡಿಯಾ ಸುದ್ದಿ
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications