ಜೂನ್ 5ರಿಂದ 16, ಜಿಎಸ್ಟಿಗಾಗಿ ಮುಂದುವರಿದ ಬಜೆಟ್ ಅಧಿವೇಶನ
ಜೂನ್ 30ರ ಮೊದಲು ಜಿಎಸ್ಟಿ ಕಾಯ್ದೆಗೆ ಅನುಮೋದನೆ ಪಡೆಯುವ ಅನಿವಾರ್ಯತೆ ಸರಕಾರದ ಮುಂದಿದೆ. ಇದಕ್ಕಾಗಿ ರಾಜ್ಯ ವಿಧಾನ ಮಂಡಲದ ಅಧಿವೇಶನವನ್ನು ಜೂನ್ 5 ರಿಂದ 16 ರವರೆಗೆ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಬೆಂಗಳೂರು, ಮೇ 18: ರಾಜ್ಯ ವಿಧಾನ ಮಂಡಲದ ಮುಂದುವರೆದ ಆಯವ್ಯಯ ಅಧಿವೇಶನವನ್ನು ಜೂನ್ 5 ರಿಂದ 16 ರವರೆಗೆ ನಡೆಸಲು ರಾಜ್ಯ ಸಚಿವ ಸಂಪುಟವು ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.[5 ಸಾವಿರ ಡಿ ಗ್ರೂಪ್ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್]
ಜೂನ್ 30ರವರೆಗಿನ ಬಜೆಟಿಗೆ ಮಾತ್ರ ಬಜೆಟ್ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗಿತ್ತು. ಇದರ ಜತೆಗೆ ಜೂನ್ 30ರ ಮೊದಲು ಜಿಎಸ್ಟಿ ಕಾಯ್ದೆಗೆ ಅನುಮೋದನೆ ಪಡೆಯುವ ಅನಿವಾರ್ಯತೆ ಸರಕಾರದ ಮುಂದಿದೆ. ಜತೆಗೆ ಇದರಲ್ಲೇ ರಿಯಲ್ ಎಸ್ಟೇಟ್ ಮಸೂದೆಯೂ ಅನುಮೋದನೆ ಪಡೆದುಕೊಳ್ಳುವ ಸಾಧ್ಯತೆ ಇದೆ.

ಸಂಪುಟ ಸಭೆಯ ಇತರ ಪ್ರಮುಖ ತೀರ್ಮಾನಗಳು ಹೀಗಿವೆ,
ಕೃಷಿ ವಿಶ್ವವಿದ್ಯಾಲಯಕ್ಕೆ ಜಮೀನು
ಇದೇ ವೇಳೆ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಅದೇ ತಾಲ್ಲೂಕಿನ ಇರುವಕ್ಕಿ ಗ್ರಾಮದ ಸಮೀಪ 600 ಎಕರೆ ಜಮೀನು ಮಂಜೂರು ಮಾಡಿ 138.69 ಕೋಟಿ ರೂ ವೆಚ್ಚದಲ್ಲಿ ಎರಡು ವರ್ಷಗಳೊಳಗೆ ಸ್ವಂತ ಕಟ್ಟಡ ನಿರ್ಮಿಸಿಕೊಳ್ಳಲು ಸಚಿವ ಸಂಪುಟ ಸಮ್ಮತಿಸಿದೆ.
ಅಣೆಕಟ್ಟುಗಳ ಪುನಶ್ಚೇತನ
ಸುರಕ್ಷಾ ಮಾನದಂಡಗಳಿಗೆ ಅನುಗುಣವಾಗಿ ಅಮಾರ್ಥ್ಯ, ಆಲಮಟ್ಟಿ, ಕಬಿನಿ, ಕೃಷ್ಣರಾಜ ಸಾಗರ, ಭದ್ರಾ, ಬೆಣ್ಣೆತೊರಾ, ಹಾರಂಗಿ, ಹಿಡ್ಕಲ್ ಹಾಗೂ ಹೇಮಾವತಿ ಸೇರಿದಂತೆ ರಾಜ್ಯದ 22 ಅಣೆಕಟ್ಟುಗಳನ್ನು 571 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಲು ಸಚಿವ ಸಂಪುಟ ನಿರ್ಧರಿಸಲಾಗಿದೆ.
ಪಿಕ್ಅಪ್ ಡ್ಯಾಂ
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕು ಗರ್ಭಗುಡಿ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ 51.40 ಕೋಟಿ ರೂ ವೆಚ್ಚದಲ್ಲಿ ಪಿಕ್ಅಪ್ ಡ್ಯಾಂ ಮತ್ತು ಸೇತುವೆ ನಿರ್ಮಿಸಿ 4,500 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಸಂಪುಟ ಅನುಮೋದನೆ ನೀಡಿದೆ.
ಸರ್ಕಾರಿ ಇಂಜಿನಿಯರಿಂಗ್ ಕಾಲೇಜು
ಬೀದರ್ನಲ್ಲಿ 58 ಕೋಟಿ ರೂ. ವೆಚ್ಚದಲ್ಲಿ ಹೊಸ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅದರಲ್ಲಿ 20 ಕೋಟಿ ರೂ. ಅನುದಾನವನ್ನು ಹೈದರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ 38 ಕೋಟಿ ರೂ ಅನುದಾನವನ್ನು ರಾಜ್ಯ ಸರ್ಕಾರ ಭರಿಸಲಿದೆ.
ರಸ್ತೆ ಅಭಿವೃದ್ಧಿ
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ರಾಜ್ಯ ಹೆದ್ದಾರಿ ಸಂಖ್ಯೆ : 107 ರಲ್ಲಿ ವ್ಯಾಪ್ತಿಯ ಜನ್ನಾಪುರ-ವಣಗೂರು ರಸ್ತೆಯನ್ನು ಹಾನುಬಾಳು - ಆನೆಮಹಲ್ - ಜಾನಕೆರೆ - ಬ್ಯಾಕರವಳ್ಳಿ - ಹೆತ್ತೂರು ರಸ್ತೆಯ ಮಾರ್ಗವಾಗಿ 7 ಕಿ ಮೀ ನಿಂದ 57.84 ಕಿ. ಮೀ ವರೆಗೆ 29.64 ಕೋಟಿ ರೂ. ಪರಿಷ್ಕತ ಅಂದಾಜು ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲು ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ವಿಜಯಪುರದಲ್ಲಿ ಮೆಗಾ ಮಾರುಕಟ್ಟೆ
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪುರಸಭೆ ವ್ಯಾಪ್ತಿಯಲ್ಲಿ ಸುಸಜ್ಜಿತ ಮೆಗಾ ಮಾರುಕಟ್ಟೆ ಸಂಕೀರ್ಣವನ್ನು 32.73 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲು ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಟಿ. ಬಿ. ಜಯಚಂದ್ರ ಅವರು ವಿವರ ನೀಡಿದ್ದಾರೆ.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications