ಉಗ್ರರು ಕರ್ನಾಟಕದಲ್ಲಿ ಸ್ಫೋಟಕ ದಾಸ್ತಾನು ಮಾಡುತ್ತಿದ್ದರು!
ಬೆಂಗಳೂರು, ಏಪ್ರಿಲ್ 28 : ಕರ್ನಾಟಕ ಇಂಡಿಯನ್ ಮುಜಾಹಿದ್ದಿನ್ ಉಗ್ರ ಸಂಘಟನೆಯ ಪಾಲಿಗೆ ಸ್ಫೋಟಕಗಳನ್ನು ಇಡುವ ಗೋಡಾನ್ ಆಗಿತ್ತು. ದೇಶದಲ್ಲಿ ಸ್ಫೋಟಗಳನ್ನು ನಡೆಸುವ ಮೊದಲು ಅದಕ್ಕೆ ಬೇಕಾದ ಸಾಮಾಗ್ರಿಗಳನ್ನು ತಂದು ಕರ್ನಾಟಕದಲ್ಲಿ ದಾಸ್ತಾನು ಮಾಡಲಾಗುತ್ತಿತ್ತು.
ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಜೈನುಲ್ ಅಬೆದಿನ್ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಜೈನುಲ್ ಈ ಆತಂಕಕಾರಿ ಮಾಹಿತಿಯನ್ನು ನೀಡಿದ್ದಾನೆ. [ಮುಜಾಹಿದೀನ್ ಸಂಘಟನೆಯ ನಾಲ್ವರು ಸದಸ್ಯರು ಪೊಲೀಸರ ವಶ]

ದೇಶದ ಯಾವುದೇ ನಗರದಲ್ಲಿ ಸ್ಫೋಟ ನಡೆಸುವ ಮುನ್ನ ಸ್ಫೋಟಕಗಳನ್ನು ಕರ್ನಾಟಕಕ್ಕೆ ತಂದು ದಾಸ್ತಾನು ಮಾಡಲಾಗುತ್ತಿತ್ತು. ಮೊದಲು ಮಂಗಳೂರು ಅಥವ ಕುಂದಾಪುರಕ್ಕೆ ಬರುತ್ತಿದ್ದ ಸ್ಫೋಟಕಗಳನ್ನು, ಉಗ್ರರು ತಾವು ಸ್ಫೋಟ ನಡೆಸಲು ಯೋಜನೆ ರೂಪಿಸಿದ ನಗರಕ್ಕೆ 10 ದಿನಗಳ ಮೊದಲು ತೆಗೆದುಕೊಂಡು ಹೋಗುತ್ತಿದ್ದರು. [ಐಎಂ ಉಗ್ರರನ್ನು ಕಾಂಗ್ರೆಸ್ ನಾಯಕ ಸಮರ್ಥಿಸಿಕೊಂಡಿದ್ದು ಹೀಗೆ]
ಎರಡು ದಿನಗಳ ಹಿಂದೆ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಜೈನುಲ್ ಅಬೆದಿನ್ನನ್ನು ಸೌದಿ ಅರೇಬಿಯಾದಲ್ಲಿ ಬಂಧಿಸಿ, ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳು ಈ ಮಾಹಿತಿಯನ್ನು ಸಂಗ್ರಹಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಮುಜಾಹಿದ್ದೀನ್ ಸಂಘಟನೆ ಸಕ್ರಿಯವಾಗಿತ್ತು ಎಂಬುದಕ್ಕೆ ಇದರಿಂದ ಸಾಕ್ಷಿಗಳು ಸಿಕ್ಕಿವೆ. [ಬಿರಿಯಾನಿಗೆ ಹೆಸರಾಗಿದ್ದ ಭಟ್ಕಳದಲ್ಲಿ ಉಗ್ರರು ಹುಟ್ಟಿದ್ದು ಹೇಗೆ?]
20 ದಿನ ಮೊದಲು ಬರುತ್ತಿತ್ತು : ದೇಶದ ಯಾವುದೇ ನಗರದಲ್ಲಿ ಸ್ಫೋಟ ನಡೆಸುವ 20 ದಿನಗಳ ಮೊದಲು ಕರ್ನಾಟಕಕ್ಕೆ ಸ್ಫೋಟಕಗಳು ತಲುಪಿದ್ದವು. ಸ್ಫೋಟಕ್ಕೆ ಸಹಾಯಕವಾಗಲೆಂದು ಭಾರೀ ಪ್ರಮಾಣದ ಅಮೋನಿಯಂ ನೈಟ್ರೆಟ್ಅನ್ನು ಉಗ್ರರು ಕರ್ನಾಟಕದಲ್ಲಿ ಸಂಗ್ರಹಿಸುತ್ತಿದ್ದರು.
ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಪಾಕಿಸ್ತಾನ ಮೂಲದ ವಾಕಸ್ ಸ್ಫೋಟಗಳ ಸಂಗ್ರಹ, ಸಾಗಣೆಯ ಪ್ರಮುಖ ವ್ಯಕ್ತಿ. ಮಂಗಳೂರು ಅಥವ ಕುಂದಾಪುರದಲ್ಲಿ ಆತ ಸ್ಫೋಟವನ್ನು ದಾಸ್ತಾನು ಮಾಡುತ್ತಿದ್ದ. ಇದು ಸ್ಫೋಟ ಸಂಗ್ರಹಣೆ ಮಾಡಲು ಉತ್ತಮವಾದ ಸ್ಥಳವಾಗಿತ್ತು. ಕುಂದಾಪುರದ ಕಲ್ಲು ಕ್ವಾರಿಗಳ ಮೂಲಗಳಿಂದ ಉಗ್ರರು ಅಮೋನಿಯಂ ನೈಟ್ರೆಟ್ ಸಂಗ್ರಹ ಮಾಡುತ್ತಿದ್ದರು.
ಬಾಂಬ್ ತಯಾರಿ ಮಾಡಲು ಬೇಕಾದ ಉಳಿದ ವಸ್ತುಗಳನ್ನು ಬೇರೆ ಕಡೆಯಿಂದ ತಂದು ಕರ್ನಾಟಕದಲ್ಲಿ ದಾಸ್ತಾನು ಮಾಡುತ್ತಿದ್ದರು. ಉಗ್ರ ಸಂಘಟನೆ ಮುಖ್ಯಸ್ಥ ಯಾಸಿನ್ ಭಟ್ಕಳ್ ಸೂಚನೆ ಸಿಕ್ಕ ಬಳಿಕ ಸ್ಫೋಟಕಗಳನ್ನು ಸಂಚು ರೂಪಿಸಿದ ನಗರಕ್ಕೆ ಸಾಗಣೆ ಮಾಡಲಾಗುತ್ತಿತ್ತು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
MT Aqua Titan: ಮಂಗಳೂರು ಕರಾವಳಿಗೆ ಆಗಮಿಸಿದ ರಷ್ಯಾದ ಕಚ್ಚಾ ತೈಲ ಹೊತ್ತ ಬೃಹತ್ ನೌಕೆ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications