ಪೊಲೀಸ್ ಇಲಾಖೆ ಮಾದರಿಯಲ್ಲಿ ಅರಣ್ಯ ಇಲಾಖೆಯಿಂದ ಪ್ರಶಸ್ತಿ : ರೈ
ಬೆಂಗಳೂರು, ಅಕ್ಟೋಬರ್ 30: ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ಅತ್ಯುತ್ತಮ ಸೇವೆಗೈದ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ನೌಕರರುಗಳನ್ನು ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆಯ ಮಾದರಿಯಲ್ಲಿ ಪ್ರಶಸ್ತಿ ಪದಕ ನೀಡಿ ಸನ್ಮಾನಿಸಲಾಗುವುದು ಎಂದು ಪರಿಸರ, ವನ್ಯಜೀವಿ ಮತ್ತು ಅರಣ್ಯ ಸಚಿವ ಬಿ. ರಮಾನಾಥ ರೈ ತಿಳಿಸಿದರು.
ಬಿ. ಮಾರಪ್ಪ ಸ್ಮಾರಕ ಟ್ರಸ್ಟ್, ಬೆಂಗಳೂರು ಮತ್ತು ಅರಣ್ಯ ಇಲಾಖೆ ಇಂದು ಮಲ್ಲೇಶ್ವರದ ಅರಣ್ಯಭವನದಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಅರಣ್ಯ ನೌಕರರುಗಳಿಗೆ ಏರ್ಪಡಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭ -2017 ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಪ್ರಶಸ್ತಿ ಪ್ರದಾನ ನೆರವೇರಿಸಿದ ನಂತರ ಮಾತನಾಡಿದ ಅವರು, "ಅರಣ್ಯ ಉಳಿಸುವ ಬಗ್ಗೆ ಸಾರ್ವಜನಿಕರು ಗಂಭೀರವಾಗಿ ಯೋಚಿಸುತ್ತಿದ್ದಾರೆ. ಅರಣ್ಯವಿಲ್ಲದೆ ಬದುಕು ಇಲ್ಲ ಎಂಬುದನ್ನು ಜನರು ಅರಿತಿದ್ದಾರೆ," ಎಂದು ತಿಳಿಸಿದರು.
ಜನಸಂಖ್ಯೆ ಹೆಚ್ಚಿದಂತೆಲ್ಲಾ ಅರಣ್ಯದ ಮೇಲೆ ಒತ್ತಡ ಹೆಚ್ಚುತ್ತಿದೆ. ಅರಣ್ಯದ ಮೇಲೆ ಒತ್ತಡ ಬಾರದಿರುವ ಹಾಗೆ ಅರಣ್ಯದಂಚಿನ ಗ್ರಾಮಸ್ಥರಿಗೆ ಸೌರ ವಿದ್ಯುತ್, ಸೌರ ಒಲೆ, ವಾಟರ್ ಹೀಟರ್ ಅನಿಲ ಸಂಪರ್ಕಗಳನ್ನು ನೀಡಲಾಗುತ್ತಿದೆ ಎಂದರು.
"ನದಿಗಳ ಜಲ ಮೂಲ ಅರಣ್ಯಗಳೇ ಆಗಿವೆ. ಆದ್ದರಿಂದ ಅರಣ್ಯಗಳನ್ನು ಮತ್ತು ವನ್ಯಜೀವಿಗಳನ್ನು ಉಳಿಸಬೇಕು," ಎಂದ ಅವರು, "ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆ ಬರುವುದಕ್ಕೂ ಮುಂಚೆ ಲಕ್ಷಾಂತರ ಹೆಕ್ಟೇರ್ ಅರಣ್ಯ ಪ್ರದೇಶ ಸಾರ್ವಜನಿಕರ ಇತರೆ ಕಾರ್ಯಗಳಿಗೆ ಬಳಕೆಯಾಗುತ್ತಿತ್ತು. ಆದರೆ ಕಾಯ್ದೆ ಬಂದ ನಂತರ ಅರಣ್ಯ ಪ್ರದೇಶದ ಒತ್ತುವರಿ ನಿಯಂತ್ರಣಗೊಂಡಿದೆ," ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಗೃಹಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡಿ, "ನಮ್ಮ ದೇಶಕ್ಕೆ ಸ್ವಾತಂತ್ರ್ಯಬಂದಾಗ ನಮ್ಮ ದೇಶದಲ್ಲಿ ಸಾಕಷ್ಟು ಅರಣ್ಯವಿತ್ತು. ಆದರೆ, ಜನಸಂಖ್ಯೆ ಹೆಚ್ಚಿದಂತೆಲ್ಲಾ ಅರಣ್ಯ ಪ್ರದೇಶ ಕಡಿಮೆಯಾಗುತ್ತಿದೆ. ಹಿಂದೆ ಉರುವಲಿಗೆ ಕಾಡು ನಾಶವಾಗುತ್ತಿತ್ತು. ಆದರೆ ಈಗ ಹಳ್ಳಿಹಳ್ಳಿಗಳಲ್ಲಿ ಅನಿಲ ಬಳಕೆಯಾಗುತ್ತಿರುವ ಕಾರಣ ಕಾಡು ಕಡಿಯುವ ಪ್ರಕ್ರಿಯೆ ಕಳೆದ 20-30 ವರ್ಷಗಳಿಂದ ಕಡಿಮೆಯಾಗಿದೆ," ಎಂದರು.
ಅರಣ್ಯ ಸಂರಕ್ಷಣೆಯ ಜೊತೆಗೆ ಪರಿಸರ ಕಾಳಜಿಯು ಸಾರ್ವಜನಿಕರಲ್ಲಿ ಹೆಚ್ಚಬೇಕು. ಪಿಒಪಿ ಗಣೇಶ, ಬಣ್ಣದ ಗಣೇಶ ಮೂರ್ತಿಗಳ ವಿಸರ್ಜನೆ ನಿಲ್ಲಬೇಕು. ದೀಪಾವಳಿ ಸಂದರ್ಭದಲ್ಲಿ ಪಟಾಕಿಯಿಂದ ವಾಯು ಮಾಲಿನ್ಯ ಹೆಚ್ಚುತ್ತಿದ್ದು ಸಾಂಕೇತಿಕವಾಗಿ ಮಾತ್ರ ಪಟಾಕಿಯನ್ನು ಹೊಡೆಯಬೇಕು ಎಂದು ಹೇಳಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications